Homeಮುಖಪುಟಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ನಾನು ಅನುಮತಿ ನೀಡಲಿಲ್ಲ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಕೇಜ್ರಿವಾಲ್ ಬೆಳಿಗ್ಗೆ 10 ಗಂಟೆಗೆ  ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿದ್ದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್. ಕೇಂದ್ರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ನಾಳೆ ಕರೆ ನೀಡಲಾಗಿರುವ, “ಭಾರತ್ ಬಂದ್” ಗೆ ಬೆಂಬಲ ನೀಡಿದ ಹಲವಾರು ವಿರೋಧ ಪಕ್ಷದ ನಾಯಕರಲ್ಲಿ ಕೇಜ್ರಿವಾಲ್ ಕೂಡ ಇದ್ದಾರೆ.

“ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ನಿನ್ನೆ ಟ್ವೀಟ್‌ನಲ್ಲಿ ತಿಳಿಸಿದ್ದರು.

ಸಿಂಗು ಮತ್ತು ಟಿಕ್ರಿ ಗಡಿಗಳಲ್ಲಿ ಸುಮಾರು 10 ದಿನಗಳಿಂದ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ, ಅಲ್ಲಿ ಪಂಜಾಬ್ ಮತ್ತು ಹರಿಯಾಣದಿಂದ ಬಂದಿರುವ ಸಾವಿರಾರು ರೈತರು ಜಮಾಯಿಸಿದ್ದಾರೆ. ಇತ್ತ ಗಾಜಿಪುರ ಗಡಿಯಲ್ಲಿ ರೈತರ ಸಂಖ್ಯೆ ಹೆಚ್ಚಾಗಿದ್ದು, ಉತ್ತರಪ್ರದೇಶದಿಂದ ಬಂದಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ.

ಇದನ್ನು ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

’ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಆಪ್ ಸರ್ಕಾರ, ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ನೇತೃತ್ವದಲ್ಲಿ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಿತ್ತು. ಇದನ್ನು ರಾಜಕಾರಣ ಎಂದು ಬಿಜೆಪಿ ಟೀಕಿಸಿತ್ತು.

“ಇದು ಕೇವಲ ರೈತರ ಹೋರಾಟವಲ್ಲ, ಎಲ್ಲಾ ದೇಶವಾಸಿಗಳ ಹೋರಾಟ. ಭಾರತವು ಕೃಷಿ ದೇಶವಾಗಿದ್ದು, ರೈತರು ಅತೃಪ್ತರಾಗಿದ್ದರೆ, ಅದು ದೇಶದ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ”ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.


ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...