Homeಮುಖಪುಟಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ನಾನು ಅನುಮತಿ ನೀಡಲಿಲ್ಲ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಕೇಜ್ರಿವಾಲ್ ಬೆಳಿಗ್ಗೆ 10 ಗಂಟೆಗೆ  ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿದ್ದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್. ಕೇಂದ್ರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ನಾಳೆ ಕರೆ ನೀಡಲಾಗಿರುವ, “ಭಾರತ್ ಬಂದ್” ಗೆ ಬೆಂಬಲ ನೀಡಿದ ಹಲವಾರು ವಿರೋಧ ಪಕ್ಷದ ನಾಯಕರಲ್ಲಿ ಕೇಜ್ರಿವಾಲ್ ಕೂಡ ಇದ್ದಾರೆ.

“ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ನಿನ್ನೆ ಟ್ವೀಟ್‌ನಲ್ಲಿ ತಿಳಿಸಿದ್ದರು.

ಸಿಂಗು ಮತ್ತು ಟಿಕ್ರಿ ಗಡಿಗಳಲ್ಲಿ ಸುಮಾರು 10 ದಿನಗಳಿಂದ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ, ಅಲ್ಲಿ ಪಂಜಾಬ್ ಮತ್ತು ಹರಿಯಾಣದಿಂದ ಬಂದಿರುವ ಸಾವಿರಾರು ರೈತರು ಜಮಾಯಿಸಿದ್ದಾರೆ. ಇತ್ತ ಗಾಜಿಪುರ ಗಡಿಯಲ್ಲಿ ರೈತರ ಸಂಖ್ಯೆ ಹೆಚ್ಚಾಗಿದ್ದು, ಉತ್ತರಪ್ರದೇಶದಿಂದ ಬಂದಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ.

ಇದನ್ನು ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

’ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಆಪ್ ಸರ್ಕಾರ, ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ನೇತೃತ್ವದಲ್ಲಿ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಿತ್ತು. ಇದನ್ನು ರಾಜಕಾರಣ ಎಂದು ಬಿಜೆಪಿ ಟೀಕಿಸಿತ್ತು.

“ಇದು ಕೇವಲ ರೈತರ ಹೋರಾಟವಲ್ಲ, ಎಲ್ಲಾ ದೇಶವಾಸಿಗಳ ಹೋರಾಟ. ಭಾರತವು ಕೃಷಿ ದೇಶವಾಗಿದ್ದು, ರೈತರು ಅತೃಪ್ತರಾಗಿದ್ದರೆ, ಅದು ದೇಶದ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ”ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.


ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...