Homeಕರ್ನಾಟಕಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

ಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

- Advertisement -
- Advertisement -

ಚೌಕಿದಾರರು ಎಂದೇಳಿಕೊಂಡು ಓಡಾಡುತ್ತಿರುವ ಬಿಜೆಪಿ ನಾಯಕರ ಹಗರಣಗಳು ಒಂದೊದೇ ಹೊರಬರುತ್ತಿದ್ದು ಈಗ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿಧರರಾವ್ ಮೇಲೆ ಕೇಸ್ ಬುಕ್ ಮಾಡಲು ಕೋರ್ಟ್ ಆದೇಶ ನೀಡಿದೆ.

ಇದು ನಿಜಕ್ಕೂ ಗಾಬರಿಗೊಳಿಸುವ ಆರೋಪ. ಕರ್ನಾಟಕದ ಉಸ್ತುವಾರಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ ರಾವ್ ಆರೋಪಿಗಳಲ್ಲೊಬ್ಬರು. ಇರುವ ಆರೋಪವಾದರೂ ಎಂಥದ್ದು? ನಿಮ್ಮನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ನಿಗಮ/ಮಂಡಳಿಯೊಂದರ ಅಧ್ಯಕ್ಷನನ್ನಾಗಿಸುತ್ತೇವೆಂದು 2.17 ಕೋಟಿ ರೂ.ಗಳನ್ನು ಪಡೆದಿದ್ದಾರೆ ಮತ್ತು ಆ ರೀತಿ ನೇಮಕ ಮಾಡಿದ ಆದೇಶವಿದ್ದಂತೆ ಬರೆಯಲಾಗಿದ್ದ ಪತ್ರಕ್ಕೆ ಅಂದು ವಾಣಿಜ್ಯ ಇಲಾಖೆಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್‍ರ ಫೋರ್ಜರಿ ಸಹಿಯನ್ನೂ ಮಾಡಲಾಗಿತ್ತೆಂಬ ಆರೋಪ. ಈ ಪ್ರಕರಣದಲ್ಲಿ ಮುರಳಿಧರರಾವ್ ಮತ್ತಿತರರ ಮೇಲೆ ಐಪಿಸಿ ಸೆಕ್ಷನ್ 406 (ನಂಬಿಕೆಗೆ ಕ್ರಿಮಿನಲ್ ದ್ರೋಹ), 420 (ವಂಚನೆ), 468, 471 (ಫೋರ್ಜರಿ), 506 (ಕ್ರಿಮಿನಲ್ ಬೆದರಿಕೆ) ಮತ್ತು 120-ಬಿ (ಕ್ರಿಮಿನಲ್ ಸಂಚು) ಮತ್ತು ಸಿಆರ್‍ಪಿಸಿಯ ಸೆಕ್ಷನ್ 156(3)ರ ಅಡಿಯಲ್ಲಿ ಮೊಕದ್ದಮೆಯ ದಾಖಲು ಮಾಡಲಾಗಿದೆ.

ತೆಲಂಗಾಣದ ಚಂಪಾಪೇಟೆಯ ನಿವಾಸಿ ಮಹಿಪಾಲ್ ರೆಡ್ಡಿಯವರ ಪತ್ನಿ ಟಿ.ಪ್ರವರ್ಣಾ ರೆಡ್ಡಿಯವರು ನೀಡಿದ ಈ ದೂರನ್ನು ಹೈದ್ರಾಬಾದ್‍ನ ಸರೂರ್‍ನಗರ ಠಾಣೆಯಲ್ಲಿ ದಾಖಲಿಸಲಾಗಿದೆ. ಸದರಿ ಎಫ್‍ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆಯೆಂಬುದು ಗಮನಾರ್ಹ. ದೂರುದಾರರ ಪ್ರಕಾರ 2015ರಲ್ಲೇ ಈಶ್ವರ್ ರೆಡ್ಡಿ, ಕೃಷ್ಣ ಕಿಶೋರ್ ಎಂಬುವವರು ಮುರಳೀಧರರಾವ್‍ರಲ್ಲಿ ಕರೆದುಕೊಂಡು ಹೋಗಿ ಈ ಡೀಲ್ ಕುದುರಿಸಿದರು. ಇದರಲ್ಲಿ ಸ್ಥಳೀಯ ಬಿಜೆಪಿ ನಾಯಕ ಮಂಡ ರಾಮಚಂದ್ರ ರೆಡ್ಡಿ ಮತ್ತು ಅವರ ಸಹಚರರಾದ ಎಸ್.ಚಂದ್ರಶೇಖರ ರೆಡ್ಡಿ, ಬಾಬಾ, ಶ್ರೀಕಾಂತ್, ಜಿ.ಶ್ರೀನಿವಾಸ್ ಇವರೆಲ್ಲರೂ ಮುರಳೀಧರರಾವ್ ಜೊತೆಗೆ ಶಾಮೀಲಾಗಿದ್ದರು ಎಂದು ಹೇಳಲಾಗಿದೆ. ಇವರುಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಔಷಧಿಗಳ ರಫ್ತನ್ನು ಉತ್ತೇಜಿಸುವ ಫಾರ್ಮಾ ಎಕ್ಸಿಲ್ ಎಂಬ ಸಂಸ್ಥೆಯ ಅಧ್ಯಕ್ಷರನ್ನಾಗಿ ದೂರುದಾರರನ್ನು ನೇಮಿಸಿದ, ನಿರ್ಮಲಾ ಸೀತಾರಾಮನ್‍ರ ಸಹಿ ಇದ್ದ ಪತ್ರವನ್ನೂ ತೋರಿಸಿದ್ದರು ಎನ್ನಲಾಗಿದೆ.

ಆರೋಪವನ್ನು ನಿರಾಕರಿಸಿರುವ ಮುರಳೀಧರರಾವ್, ಈ ಬಗ್ಗೆ ದೂರುದಾರರು ತನ್ನನ್ನು ಫೋನಿನಲ್ಲಿ ಸಂಪರ್ಕಿಸಿದ್ದು ನಿಜವೆಂತಲೂ, ಆರೋಪಿಗಳಲ್ಲಿ ಕೆಲವರನ್ನು ತನ್ನ ಕೆಲಸದ ಕಾರಣಕ್ಕೆ ಬಲ್ಲೆನೆಂತಲೂ ಹೇಳಿದ್ದಾರೆ. ಆದರೆ ಈ ಕೇಸು ಅಥವಾ ಹಣಕಾಸಿನ ವ್ಯವಹಾರ ತನಗೆ ಗೊತ್ತಿಲ್ಲವೆಂದು ಹೇಳಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಒಟ್ಟಿನಲ್ಲಿ ತಾವು ಚೌಕಿದಾರರೆಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರುಗಳಲ್ಲಿ ಒಬ್ಬರ ನಂತರ ಒಬ್ಬರು ಹಗರಣಗಳಲ್ಲಿ ಆರೋಪಿಯಾಗುತ್ತಿರುವುದು ಚುನಾವಣಾ ಸಂದರ್ಭದಲ್ಲಿ ಬಿಜೆಪಿಗೆ ಮುಜುಗರವನ್ನಂತೂ ತರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...