Homeಮುಖಪುಟರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಈ ಕುರಿತು ಟ್ವೀಟ್‌ ಮಾಡಿರುವ ಅಖಿಲೇಶ್ ಯಾದವ್ "ನನಗೆ ತಿಳಿದ ಮಟ್ಟಿಗೆ ಎಲ್ಲಾ ಜನರು ನಿಮ್ಮ ವಿರುದ್ಧ ಇದ್ದಾರೆ. ಓ ದಬ್ಬಾಳಿಕೆಗಾರ, ನೀವು ಯಾರನ್ನು ಬಂಧಿಸುವಿರಿ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಕಿಸಾನ್ ಯಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್‌ರನ್ನು ಉತ್ತರ ಪ್ರದೇಶ ಸರ್ಕಾರ ತಡೆದಿದೆ. ಇದರಿಂದ ಕುಪಿತಗೊಂಡ ಅವರು ಲಖನೌದ ತಮ್ಮ ಮನೆ ಮುಂದೆಯೇ ಧರಣಿ ನಡೆಸಿದ್ದು, ಅವರನ್ನು ಗೃಹಬಂಧನದಲ್ಲಿಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಕಾಯ್ದೆಯನ್ವಯ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದೇವೆ. ಗುಂಪುಗೂಡಬಾರದೆಂದು ಹಲವ ಬಾರಿ ಮನವಿ ಮಾಡಿದರು ಅಖಿಲೇಶ್ ಆದಿಯಾಗಿ ಯಾರು ನಮ್ಮ ಮಾತು ಕೇಳಲಿಲ್ಲ. ಹಾಗಾಗಿ ಅವರನ್ನು ಗೃಹಬಂಧನದಲ್ಲಿಡಬೇಕಾಯಿತು ಎಂದು ಕನೌಜ್‌ ಜಿಲ್ಲಾಧಿಕಾರಿ ರಾಕೇಶ್ ಮಿಶ್ರಾ ತಿಳಿಸಿದ್ದಾರೆ.

ಇಂದು ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಿಂದ ಹೊರಟು ಕನೌಜ್‌ನ ತಾತಿಯದಿಂದ ತಿವರವರೆಗೂ 13 ಕಿ.ಮೀ ಗಳ ಕಿಸಾನ್ ಯಾತ್ರೆ ನಡೆಸಲು ಯೋಜಿಸಲಾಗಿದೆ. ಅದಕ್ಕೆ ಇಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಚಾಲನೆ ನೀಡಬೇಕಿತ್ತು. ಆದರೆ ಉತ್ತರ ಪ್ರದೇಶ ಸರ್ಕಾರ ಕೊರೊನಾ ನೆಪವೊಡ್ಡಿ ಅದಕ್ಕೆ ತಡೆಯೊಡ್ಡಿದೆ.

ಲಖನೌ ಪೊಲೀಸರು ಅಖಿಲೇಶ್ ಯಾದವ್‌ರವರ ನಿವಾಸದ ಸುತ್ತಲಿನ ರಸ್ತೆಗಳು ಮತ್ತು ಸಮಾಜವಾದಿ ಪಕ್ಷದ ಕಛೇರಿಯ ಸುತ್ತಲಿನ ರಸ್ತೆಗಳನ್ನು ಮುಚ್ಚಿ ಪ್ರತಿಭಟನೆ ನಡೆಯದಂತೆ ತಡೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಘಟನೆ ಕುರಿತು ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧರಿ ಮಾತನಾಡಿ “ಶಾಂತಿಯುತವಾಗಿ ಪ್ರತಿಭಟನೆ ಮಾಡುವ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಇದು ಪ್ರಜಾತಂತ್ರ ವಿರೋಧಿ ನಡೆಯಾಗಿದೆ. ಅಖಿಲೇಶ್ ಯಾದವ್‌ರವರು ಕಿಸಾನ್ ಯಾತ್ರೆಯಲ್ಲಿ ಪಾಲ್ಗೊಳ್ಳುವುದರಿಂದ ಆದಿತ್ಯನಾಥ್ ಸರ್ಕಾರ ಬೆದರಿದೆ. ಹಾಗಾಗಿ ಅವರನ್ನು ಬಂಧಿಸಲಾಗಿದೆ” ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅಖಿಲೇಶ್ ಯಾದವ್ “ನನಗೆ ತಿಳಿದ ಮಟ್ಟಿಗೆ ಎಲ್ಲಾ ಜನರು ನಿಮ್ಮ ವಿರುದ್ಧ ಇದ್ದಾರೆ. ಓ ದಬ್ಬಾಳಿಕೆಗಾರ, ನೀವು ಯಾರನ್ನು ಬಂಧಿಸುವಿರಿ?” ಎಂದು ಪ್ರಶ್ನಿಸಿದ್ದಾರೆ.

ನಾಳೆ ನಡೆಯುವ ರೈತರ ಭಾರತ್‌ ಬಂದ್‌ಗೆ ಸಮಾಜವಾದಿ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...