Homeಕರ್ನಾಟಕಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: 'ಕರ್ನಾಟಕವೊಂದೇ' ಅಭಿಯಾನಕ್ಕೆ ವ್ಯಾಪಕ ಬೆಂಬಲ

ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ: ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು.

- Advertisement -
- Advertisement -

ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂಬ ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರತ್ಯೇಕ ರಾಜ್ಯದ ಕೂಗಿನ ವಿರುದ್ಧ ಗಟ್ಟಿ ದನಿ ಎತ್ತಿರುವ ಕನ್ನಡಿಗರು ನಡೆಸುತ್ತಿರುವ ‘ಕರ್ನಾಟಕವೊಂದೇ’ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮೊನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ರಾಜ್ಯಕ್ಕೆ ಬರುತ್ತಿರುವ ಆದಾಯದಲ್ಲಿ ಒಕ್ಕಲಿಗರ ಪಾಲು ಶೇ.60 ರಷ್ಟಿದೆ. ಹಲವರು ಸರ್ಕಾರಕ್ಕೆ ಭೂದಾನ ಮಾಡಿದ್ದಾರೆ. ಆದರೆ ಒಕ್ಕಲಿಗರಿಗೆ ಕೇವಲ 4% ಮೀಸಲಾತಿ ಸಿಗುತ್ತಿದೆ. ಮೀಸಲಾತಿ ಹೆಚ್ಚಳ ಮಾಡಿದಿದ್ದರೆ ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದಕ್ಕೆ ರಾಜ್ಯದ ಜಾತಿ, ಧರ್ಮ ಲೆಕ್ಕಿಸದೇ ಸಾವಿರಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು, ಮುಂದು, ಎಂದೆಂದೂ, ಕರ್ನಾಟಕವೊಂದೇ. ಒಡಕು, ತರಲಿದೆ ಕೆಡಕು ಎಂದು ಅಭಿಪ್ರಾಯಪಟ್ಟಿರುವ ಕನ್ನಡಿಗರು #ಕರ್ನಾಟಕವೊಂದೇ ಹ್ಯಾಸ್‌ಟ್ಯಾಗ್ ಬಳಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕೆ ಮತ್ತಷ್ಟು ಸಾವಿರ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಕ್ರಿಯಿಸಿ “ಏಕೀಕರಣಕ್ಕಾಗಿ ಜಾತಿ, ಧರ್ಮ,‌ ಮತ, ಪಂಥ ಬೇಧವಿಲ್ಲದೆ ನಮ್ಮ ಹಿರಿಯರು ತ್ಯಾಗ, ಸಮರ್ಪಣೆಯಿಂದ ಒಂದಾಗಿ ಹೋರಾಡಿದ ಪರಿಣಾಮವಾಗಿ ಕರ್ನಾಟಕ ಒಂದು ರಾಜ್ಯವಾಗಿದೆ. ಇದನ್ನು ಒಡೆಯುವ ಮಾತನ್ನು ಯಾರೇ, ಯಾವ ಉದ್ದೇಶಕ್ಕೇ ಆಡಿದರೂ ಖಂಡಿಸುತ್ತೇನೆ. ಒಡಕು ಮಾತುಗಳು ಯಾವ ಮೂಲೆಯಿಂದ ಬಂದರೂ ತಪ್ಪು” ಎಂದಿದ್ದಾರೆ.

“ಕರ್ನಾಟಕದ ಒಗ್ಗಟ್ಟಿರುವುದೇ ಕನ್ನಡತನದಲ್ಲಿ, ಇಂದು ಅಖಂಡ ಕರ್ನಾಟಕವನ್ನ ಜಾತಿಯ ಹೆಸರಲ್ಲಿ ಒಡೆಯುವ ಸಂಚು ರೂಪುಗೊಳ್ತಿದೆ, ಹಳೆ ಮೈಸೂರು-ಉತ್ತರ ಕರ್ನಾಟಕ, ಲಿಂಗಾಯತ-ಒಕ್ಕಲಿಗ ಹೀಗೆ ವಾದಗಳು ಹುಟ್ಟಿಕೊಳ್ತಿವೆ. ಇವುಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಬೇಕು. ನೆನಪಿರಲಿ ಒಂದೇ ಒಂದೇ #ಕನ್ನಡವೊಂದೇ #ಕರ್ನಾಟಕವೊಂದೇ” ಎಂದು ಸಚಿನ್ ಗ್ಯಾಂಗರ್ ಟ್ವೀಟ್ ಮಾಡಿದ್ದಾರೆ.

2025ಕ್ಕೆ ಲೋಕಸಭೆಯ ಸದಸ್ಯರ ಸಂಖ್ಯೆ ಹೊಸ ಜನಗಣತಿಯ ಪ್ರಕಾರ ಆದಲ್ಲಿ ಕರ್ನಾಟಕಕ್ಕೆ ಈಗಿರುವ ಲೋಕಸಭೆ ಸದಸ್ಯರ ಸಂಖ್ಯೆ ಐದರಷ್ಟು ಕುಸಿಯಲಿದೆ. ಇಂತಹ ಹೊತ್ತಲ್ಲಿ ಕರ್ನಾಟಕದ ದನಿ ಉಳಿಸಿಕೊಳ್ಳಬೇಕು ಅನ್ನುವ ಆಸೆಯಿರುವವರು ಯಾವ ಕಾರಣಕ್ಕೂ ರಾಜ್ಯ ವಿಭಜನೆ ಸಮರ್ಥಿಸಬಾರದು ಎಂದು ವಸಂತ ಶೆಟ್ಟಿಯವರು ಒತ್ತಾಯಿಸಿದ್ದಾರೆ.

“ದೇಶವನ್ನು ಧರ್ಮದ ಹೆಸರಿನಲ್ಲಿ ಮಾನಸಿಕವಾಗಿ ಒಡೆದಿದ್ದಾಯ್ತು. ಈಗ ಜಾತಿಗಳ ಹೆಸರಲ್ಲಿ ರಾಜ್ಯ ಒಡೆಯುವ ಹುನ್ನಾರ. ಇದು ಯಾರ ಚಿತಾವಣೆ, ಈ ಕುತಂತ್ರಗಳೆಲ್ಲ ಯಾವ ಗರಡಿಯಿಂದ ಎದ್ದು ಬರುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕನ್ನಡಿಗರು ದಡ್ಡರಲ್ಲ. ಹಿರಿಯರು ಕಟ್ಟಿದ ನಾಡಿದು, ಯಾರದೋ ಕುಯುಕ್ತಿಗಳಿಗೆ ಒಡೆಯಲು ಬಿಡೆವು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ಎಸ್.ಸಿ ತಿಳಿಸಿದ್ದಾರೆ.

ಇನ್ನು ಅಜಯ್ ರಾಜ್‌ ಎನ್ನುವವರು ಪ್ರತ್ಯೇಕ ರಾಜ್ಯದ ಪರ ಟ್ವೀಟ್ ಮಾಡಿದ್ದಾರೆ. “ಆಡಳಿತತ್ಮಕ ದೃಷ್ಟಿಯಿಂದ ಹೊಸ ರಾಜ್ಯ ಉದಾಯಿಸಿದರೆ ಒಳ್ಳೇದು ಕಣ್ರಪ್ಪ. ಅಭಿವೃದ್ಧಿಯೂ ಆಗ್ತದೆ ಹಾಗೂ ಜನ ಪ್ರತಿನಿಧಿಗಳಿಂದ ಉತ್ತರದಾಯಿತ್ವವೂ ಸಿಗುತ್ತೆ. ನಾವು ಭಾವನಾತ್ಮಕವಾಗಿ ಯೋಚಿಸಿದಷ್ಟು ನಮಗೆ ನಷ್ಟ ಕಣ್ರಪ್ಪ. 14 ಜಿಲ್ಲೆಗಳನ್ನೊಳಗೊಂಡ ಕೇರಳ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಕಣ್ರಪ್ಪ. #ಮೈಸೂರು_ರಾಜ್ಯ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರುತಿ ಎಚ್.ಎಂ ರವರು “ಒಡೆದು ಆಳುವುದರಿಂದ ಅದ್ಯಾವ ರೀತಿ ಅಭಿವೃದ್ಧಿ ಆಗುತ್ತೆ ಸ್ವಲ್ಪ ವಿವರಿಸಿ. ಅಖಂಡವಾಗಿದ್ದ ತೆಲುಗು ರಾಜ್ಯ ಆಂಧ್ರ ತೆಲಂಗಾಣಗಳಾಗಿ ಒಡೆದ ಮೇಲೆ ಯಾವ ರೀತಿ ಅಭಿವೃದ್ಧಿ ಆಗಿದೆ ಹೇಳಿ. #ಕರ್ನಾಟಕವೊಂದೇ” ಎಂದಿದ್ದಾರೆ. ಅಲ್ಲದೆ ಮೈಸೂರು ಕೇವಲ ಒಕ್ಕಲಿಗರ ಸ್ವತ್ತಲ್ಲ, ಉತ್ತರದ ಜಿಲ್ಲೆಗಳು ಲಿಂಗಾಯತರ ಸ್ವತ್ತಲ್ಲ. ಇಂತಹ ಎಷ್ಟೇ ಮನೆಮುರುಕರು ಹಾರಾಡಿದರೂ, ಎಂದಿಗೂ #ಕರ್ನಾಟಕವೊಂದೆ #KarnatakaVonde ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಕನ್ನಡ ನಾಡು ಇಷ್ಟು ಸಮೃದ್ಧವಾಗಿ ಬೆಳೆಯೋದಕ್ಕೆ ನಾಡಿನ ಎಲ್ಲಾ ಭಾಗದ, ಎಲ್ಲಾ ವರ್ಗದ ಜನರ ದುಡಿಮೆಯ ಶ್ರಮವಿದೆ, ಮುಂದೆ ಕೂಡ ಈ ಒಗ್ಗಟ್ಟು ಬೇಕೇ ಬೇಕು. ಒಡೆದಾಳುವ ನೀತಿಗಳನ್ನ ನಮ್ಮ ನಡುವೆ ನುಸುಳುವುದಕ್ಕೆ ಬಿಡಕೂಡದು. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರಾಗಿರಬೇಕು. #ಕರ್ನಾಟಕವೊಂದೇ ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ರಾಜ್ಯ ಒಡೆಯುವ ವಿಷಯ ಯಾರೇ ತಂದರೂ ಅವರನ್ನ ಗಟ್ಟಿಯಾಗಿ ವಿರೋಧ ಮಾಡಿ. ಅದು ಸಂಘಿಗಳೇ ಆಗಿರಲಿ, ಕಾಂಗ್ರೆಸ್‌ನವರೇ ಆಗಿರಲಿ, ಜೆಡಿಎಸ್‌ನವರೇ ಆಗಿರಲಿ, ಒಕ್ಕಲಿಗರೇ ಆಗಿರಲಿ, ಲಿಂಗಾಯತರೇ ಆಗಿರಲಿ, ಅಹಿಂದದವರೇ ಆಗಿರಲಿ, ತುಳುವರೇ ಆಗಿರಲಿ. ಯಾರೇ ಕನ್ನಡ ನಾಡಿನ ಒಗ್ಗಟ್ಟನ್ನು ವಿರೋಧ ಮಾಡಿದರೆ ಅಂತವರನ್ನೆಲ್ಲ ವಿರೋಧ ಮಾಡಿ. #ಕರ್ನಾಟಕವೊಂದೇ ಎಂದು ಗಣೇಶ್ ಚೇತನ್‌ರವರು ಕರೆ ನೀಡಿದ್ದಾರೆ.

ಕೀಲಾರ ನಾಗೇಗೌಡ ಶಿವಲಿಂಗಯ್ಯನವರು ಪ್ರತಿಕ್ರಿಯಿಸಿ “ಕಾವಿ ಬಟ್ಟೆ ತೊಟ್ಟವರಿಗೆ ಸೋಷಿಯಲ್ ಸೈನ್ಸ್ ಗೊತ್ತಿರಲ್ಲ, ಅಧ್ಯಾತ್ಮ ಗೊತ್ತಿದಿಯ ಅಂದರೆ ಬ್ರಾಹ್ಮಣರ ಅಧ್ಯಾತ್ಮನ ನಮ್ಮೆಲ್ಲರ ಅಧ್ಯಾತ್ಮ ಅಂದುಕೊಂಡು ಅವರುಗಳು ಮಂಗ ಆಗುವುದಲ್ಲದೇ ನಮ್ಮನ್ನು ಮಂಗ ಮಾಡುತ್ತಾರೆ. ಈಗಿರುವ 3A ಮೀಸಲಾತಿ ಏನಿದೆ ಅಷ್ಟು ಸಾಕು ಅಂತ ನನ್ನ ಅಭಿಪ್ರಾಯ” ಎಂದಿದ್ದಾರೆ.

“ಮೊದಲು ಚುಂಚನಗಿರಿ ಮಠದ ಶಾಲೆ-ಕಾಲೇಜು-ಆಸ್ಪತ್ರೆಗಳಲ್ಲಿ ಬಡ ಒಕ್ಕಲಿಗರಿಗೆ ಉಚಿತ ಶಿಕ್ಷಣ-ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಿ, ಮಠದ ಸಮುದಾಯ ಭವನಗಳು ಉಚಿತವಾಗಿ ಸಿಗುವಂತಾಗಲಿ.‌ ಮೊದಲು ಮಠವು ಬಡ ಒಕ್ಕಲಿಗರಿಗೆ ಬದುಕಲು ವ್ಯವಸ್ಥೆ ಗಳನ್ನು ಕಲ್ಪಿಸಿಕೊಡಲಿ, ಅದು ಬಿಟ್ಟು ಜಾತಿಯ ಹೆಸರಲ್ಲಿ ಮಠವೇ ಎಲ್ಲಾ ಕಡೆ ಜಾಗ, ಹಣ, ಅನುದಾನ ಪಡೆದು ಬೆಳೆಯುವುದು ಆಗಿದೆ” ಎಂದು ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...