Homeಕರ್ನಾಟಕಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್...

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್ ಕಿಡಿ

ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿರುವ ಚೇತನ್, “ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಅಹಿಂಸಾ…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ…

ಮೊದಲಿನಿಂದಲೂ ಕೇವಲ ನಟನೆ ಮಾತ್ರವಲ್ಲದೇ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡು ವೈಚಾರಿಕವಾಗಿ ಚಿಂತಿಸುವ ನಟ ಚೇತನ್ ಇದೀಗ ರೈತರ ಪರವಾಗಿ ದನಿಯೆತ್ತಿದ್ದಾರೆ. ಇಷ್ಟೇ ಅಲ್ಲದೇ ತಾವು ಪ್ರತಿನಿಧಿಸುತ್ತಿರುವ ಕನ್ನಡ ಚಿತ್ರರಂಗದ ಇತರ ನಟರ ಮೇಲೂ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದಿನಿಂದ ಕರ್ನಾಟಕದಲ್ಲೂ ಸಹ ರೈತರ ಪ್ರತಿಭಟನೆ ಆರಂಭವಾಗಿದೆ.


ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...