Homeಕರ್ನಾಟಕಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್...

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್ ಕಿಡಿ

ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿರುವ ಚೇತನ್, “ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಅಹಿಂಸಾ…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ…

ಮೊದಲಿನಿಂದಲೂ ಕೇವಲ ನಟನೆ ಮಾತ್ರವಲ್ಲದೇ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡು ವೈಚಾರಿಕವಾಗಿ ಚಿಂತಿಸುವ ನಟ ಚೇತನ್ ಇದೀಗ ರೈತರ ಪರವಾಗಿ ದನಿಯೆತ್ತಿದ್ದಾರೆ. ಇಷ್ಟೇ ಅಲ್ಲದೇ ತಾವು ಪ್ರತಿನಿಧಿಸುತ್ತಿರುವ ಕನ್ನಡ ಚಿತ್ರರಂಗದ ಇತರ ನಟರ ಮೇಲೂ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದಿನಿಂದ ಕರ್ನಾಟಕದಲ್ಲೂ ಸಹ ರೈತರ ಪ್ರತಿಭಟನೆ ಆರಂಭವಾಗಿದೆ.


ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...