Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...