Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...