Homeಮುಖಪುಟವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ -...

ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ – ಬಿಜೆಪಿ

ಕೃಷಿ ಕಾನೂನುಗಳು, ಎಪಿಎಂಸಿ ಕಾಯ್ದೆ ಖಾಸಗೀಕರಣದ ಪರವಾಗಿವೆ ಎಂಬುದನ್ನು ಒಪ್ಪಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್?

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯು 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಹಲವು ರಾಜ್ಯಗಳು ಗುತ್ತಿಗೆ ಕೃಷಿ ಪದ್ದತಿಗೆ ಅನುಮೋದನೆ ನೀಡಿವೆ. ಆದರೆ ಈಗ ಮಾತ್ರ ಅವರು ನಮ್ಮ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳುವ ಮೂಲಕ ತಾವು ತಂದಿರುವ ಕಾಯ್ದೆಗಳು ಖಾಸಗೀಕರಣದ ಪರವಾಗಿವೆ ಎಂದು ಕೇಂದ್ರ ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಇನ್ನು ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಾಲಿಸ್ತಾನ್‌ಗಳು, ಭಯೋತ್ಪಾದಕರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿತು. ಆದರೆ ರೈತರು ಎದೆಗುಂದದೆ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಇದಕ್ಕೆ ರೈತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...