Homeಚಳವಳಿದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಧರಣಿ ಆರಂಭ: ಭಾರತ್ ಬಂದ್‌ಗೆ ಸಿದ್ದತೆ

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, "ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಇರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ" ಎಂದು ಹೇಳಿದರು.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕದ ಐಕ್ಯ ಹೋರಾಟ ಸಮಿತಿಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ಬಾರಿಯ ರಾಜ್ಯದ ಅಧಿವೇಶನದ ಸಮಯದಲ್ಲಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ರಚಿಸಿಕೊಂಡಿದ್ದ ಈ ಐಕ್ಯ ಹೋರಾಟ ಸಮಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ದಲಿತ, ಕಾರ್ಮಿಕ ಮತ್ತು ರೈತವಿರೋಧಿ ಕ್ರಮಗಳನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕಳೆದ 12 ದಿನಗಳಿಂದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸರ್ಕಾರವು ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಾಳೆ ದೇಶದಾದ್ಯಂತ ಹಮ್ಮಿಕೊಂಡಿರುವ ‘ಭಾರತ್ ಬಂದ್’ಗೆ ಬೆಂಬಲ ನೀಡಲು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ನಾಳೆ ನಡೆಯುವ ಬಂದ್‌ನ ರೂಪುರೇಷೆಗಳ ಕುರಿತು, ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ‘ಐಕ್ಯ ಹೋರಾಟ ವೇದಿಕೆ’ಯ ಪತ್ರಿಕಾಗೋಷ್ಠಿ…

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ಈ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೊಹನ್ ದಾಸ್, “ನಾನೂ ಕೂಡಾ ರೈತನ ಮಗನೆ. ರೈತರಿಗೆ ಆಗಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನಿರಲು ನನ್ನಿಂದ ಆಗಲಿಲ್ಲ. ಅದಕ್ಕೆ ನಾನಿಲ್ಲಿದ್ದೀನಿ. ಕಳೆದ ಎಪ್ಪತ್ತು ವರ್ಷಗಳಿಂದ ನಾವು ಕಟ್ಟಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗಳು ತಮ್ಮ ಸ್ವಾತಂತ್ರ್ಯ ಮತ್ತು ಮಾನ್ಯತೆಯನ್ನು ಕಳೆದುಕೊಳ್ಳುತ್ತಿವೆ. ಅವುಗಳನ್ನು ಅಪ್ರಸ್ತುತಗೊಳಿಸಲಾಗುತ್ತಿದೆ. ಅಂತಾರಾಷ್ಟ್ರೀಯ ವರದಿಗಳು ಭಾರತ ಅಂತ್ಯಂತ ಭ್ರಷ್ಟ ದೇಶ ಎಂದು ಹೇಳುತ್ತಿದೆ. ನ್ಯಾಯಾಂಗ ಜನರ ನಂಬಿಕೆಗಳನ್ನು ಕಳೆದುಕೊಳ್ಳುತ್ತಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲಾ ಸಂಸ್ಥೆಗಳು ಸ್ವಾತಂತ್ರ್ಯ ಕಳೆದುಕೊಂಡು ಸರ್ಕಾರದ ಕೈಗೊಂಬೆಯಾಗಿದೆ. ಅಪ್ರಜಾಪ್ರಭುತ್ವ ಸುಧಾರಣೆಗಳು ಬರುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ, ಕೃಷಿ ಬಿಕ್ಕಟ್ಟನ್ನು ಸರಿ ಪಡಿಸಿ ರೈತರ ಹಿತವನ್ನು ಕಾಪಾಡಿ ಎಂದರೆ ಅದರ ವಿರುದ್ಧ ಕಾನೂನುಗಳನ್ನು ತರುತ್ತಾ ರೈತರನ್ನು ಗುಲಾಮರನ್ನಾಗಿ ಮಾಡುತ್ತಿದ್ದಾರೆ. ಬದುಕಿಗೆ ಬೇಕಾದ ವಿಷಯಗಳನ್ನು ಬಿಟ್ಟು ಲವ್ ಜಿಹಾದ್, ಗೋಹತ್ಯೆ ವಿಷಯಗಳಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಕಾನೂನು ತರುತ್ತಾರೆ. ಆದರೆ ಹದಿನೈದು ವರ್ಷದಿಂದ ಸ್ವಾಮಿನಾಥನ್ ಆಯೋಗದ ವರದಿ ಚರ್ಚೆಯಿಲ್ಲದೆ ಹಾಗೆ ಬಿದ್ದಿದದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ರೈತ ಹೋರಾಟಗಾರರಾದ ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೊರೆಯುವ ಚಳಿಯಲ್ಲಿ ದೇಶದ ಅನ್ನದಾತರು ಬೀದಿಗಿಳಿದಿದ್ದಾರೆ. ವಿಶ್ವದಲ್ಲೇ ಅತ್ಯಂತ ಪ್ರಭಲ ಪ್ರತಿಭಟನೆ ನಡೆಯುತ್ತಿದೆ. ಆದರೆ ಆಳುವ ಸರ್ಕಾರಕ್ಕೆ ತಮ್ಮಲ್ಲಿರುವ ಸಂಖ್ಯಾಬಲದ ಭ್ರಮೆಯಿದೆ. ನೇಗಿಲು ಹಿಡಿದ ರೈತರನ್ನು ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ದೇಶದ ರೈತರು ಕೈಚೆಲ್ಲಿ ಕುಳಿತಿದ್ದರೆ, ಬೆಲೆ ಏರಿಕೆಯಾಗಿ ಮೋದಿಯ ಆಟವು ನಡೆಯುತ್ತಾ ಇರಲಿಲ್ಲ. ದೇಶದ ಅರ್ಥವ್ಯವಸ್ಥೆಯನ್ನು ರೈತರು ಎತ್ತಿ ಹಿಡಿದಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಕೃತಘ್ನ ಸರ್ಕಾರ ರೈತರ ಆಶೋತ್ತರಗಳನ್ನು ಈಡೇರಿಸಬೇಕಿತ್ತು. ಆದರೆ ಸರ್ಕಾರ ಆಶ್ವಾಸನೆ ಕೂಡಾ ಕೊಡುತ್ತಿಲ್ಲ. ಜೊತೆಗೆ ಯಾವುದೇ ಚರ್ಚೆಯಿಲ್ಲದೆ ರೈತ ವಿರೋಧಿ ಕಾನೂನನ್ನು ಜಾರಿಗೆ ತರುತ್ತಿದ್ದಾರೆ. ಇದು ದ್ರೋಹಿ ಸರ್ಕಾರ” ಎಂದು ಕಿಡಿಕಾರಿದರು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...