Homeಮುಖಪುಟಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ಎನ್‌ಸಿಆರ್‌ಬಿ ಪ್ರಕಟಿಸಿದ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು,ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

- Advertisement -
- Advertisement -

2020 ರ ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಕೈದಿಗಳ ಲಿಂಗ ವರ್ಗೀಕರಣದಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ವರ್ಗವಾಗಿ ಸೇರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಒಪ್ಪಿಕೊಂಡಿದೆ.

ಜೈಲು ಅಂಕಿಅಂಶಗಳ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಲಿಂಗ ವರ್ಗವಾಗಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಜೈಲು ಅಂಕಿಅಂಶಗಳ ವಾರ್ಷಿಕ ಪ್ರಕಟಣೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಪ್ರತ್ಯೇಕ ಮೂರನೇ ಲಿಂಗವೆಂದು ಗುರುತಿಸಲು ಮತ್ತು ವರ್ಗೀಕರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಗೆ ನಿರ್ದೇಶನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಮೊಕದ್ದಮೆ ಹೂಡಿದ ನಂತರ ಈ ನಿರ್ಧಾರ ಹೊರಬಿದ್ದಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

 

ಈಗಾಗಲೇ ನಡೆಯುತ್ತಿರುವ ಎನ್‌ಸಿಆರ್‌ಬಿಯ 2020 ರ ಜೈಲು ಅಂಕಿಅಂಶ ವರದಿಯ ದತ್ತಾಂಶ ಸಂಗ್ರಹಣೆಯ ಪ್ರಕ್ರಿಯೆಯಾಗಿ ಕಾನೂನು ಪದವೀಧರ ಕರಣ್ ತ್ರಿಪಾಠಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಎನ್‌ಸಿಆರ್‌ಬಿ ಪ್ರಕಟಿಸಿದ ಪ್ರಿಸನ್ ಸ್ಟ್ಯಾಟಿಸ್ಟಿಕ್ಸ್ ಇಂಡಿಯಾ ವರದಿಯಲ್ಲಿ ಇಲ್ಲಿಯವರೆಗೆ ಕೇವಲ ಎರಡು ಲಿಂಗ ವರ್ಗಗಳು ಮಾತ್ರ ಕಾಣಿಸಿಕೊಂಡಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಗಂಡು ಮತ್ತು ಹೆಣ್ಣು ಎಂಬ ಎರಡೇ ಲಿಂಗವನ್ನು ಪರಿಗಣಿಸಿದ್ದು, ತೃತೀಯ ಲಿಂಗವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಹೇಳಲಾಗಿತ್ತು.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. ವಿಶೇಷವಾಗಿ ಕೊರೊನಾ ಸಂದರ್ಭದಲ್ಲಿ ಈ ಸಮುದಾಯಕ್ಕೆ ಮೂಲಭೂತ ಅವಶ್ಯಕತೆಗಳನ್ನು ನಿರಾಕರಿಸಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಕೈದಿಗಳು ಜೈಲುಗಳಲ್ಲಿರುವ ಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟ. ಕಾಗದದ ಮೇಲೂ ಕೂಡ ಮೂರನೇ ಲಿಂಗವೆಂದು ಗುರುತಿಸಲ್ಪಟ್ಟಿಲ್ಲ ಎಂದು ಅರ್ಜಿಯಲ್ಲಿ ಕರಣ್ ತ್ರಿಪಾಠಿ ವಿವರಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜೈಲಿನ ಅಂಕಿಅಂಶಗಳ ಕುರಿತ ತನ್ನ ವಾರ್ಷಿಕ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಪ್ರತ್ಯೇಕ ತೃತೀಯ ಲಿಂಗವಾಗಿ ಸೇರಿಸಬೇಕೆಂಬ ಬೇಡಿಕೆಯ ಬಗೆಗಿನ ಯಾವುದೇ ನಿರ್ಧಾರವನ್ನು ತಿಳಿಸುವಂತೆ ಕಳೆದ ವಾರ ದೆಹಲಿ ಹೈಕೋರ್ಟ್ ಎನ್‌ಸಿಆರ್‌ಬಿಗೆ ಸೂಚಿಸಿತ್ತು.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...