Homeಮುಖಪುಟರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ.

- Advertisement -
- Advertisement -

ದೆಹಲಿಯಲ್ಲಿ ಕಳೆದ 13 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಿನ್ನೆಯಷ್ಟೆ ಬೆಂಬಲಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ ವಿಧಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನಿನ್ನೆ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿ, ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದರು.

ಇಂದು ಬೆಳಿಗ್ಗೆ ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು “ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ದೆಹಲಿಯ ವಿವಿಧ ಪುರಸಭೆಗಳ ಮೂವರು ಮೇಯರ್‌ಗಳು ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟಿಸಲು ಪೊಲೀಸರ ಪಡೆದಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಪೊಲೀಸರು ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು

ಈ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಅವರ ಎಲ್ಲಾ ಅಧಿಕೃತ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಎಎಪಿ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರೈತರನ್ನು ಬೆಂಬಲಿಸಿ ಮಾತನಾಡಿದ್ದ ಕೇಜ್ರಿವಾಲ್ “ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದರು.

‘ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...