Homeಮುಖಪುಟರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ.

- Advertisement -
- Advertisement -

ದೆಹಲಿಯಲ್ಲಿ ಕಳೆದ 13 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಿನ್ನೆಯಷ್ಟೆ ಬೆಂಬಲಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ ವಿಧಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನಿನ್ನೆ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿ, ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದರು.

ಇಂದು ಬೆಳಿಗ್ಗೆ ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು “ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ದೆಹಲಿಯ ವಿವಿಧ ಪುರಸಭೆಗಳ ಮೂವರು ಮೇಯರ್‌ಗಳು ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟಿಸಲು ಪೊಲೀಸರ ಪಡೆದಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಪೊಲೀಸರು ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು

ಈ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಅವರ ಎಲ್ಲಾ ಅಧಿಕೃತ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಎಎಪಿ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರೈತರನ್ನು ಬೆಂಬಲಿಸಿ ಮಾತನಾಡಿದ್ದ ಕೇಜ್ರಿವಾಲ್ “ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದರು.

‘ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...