Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...