Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...