Homeಚಳವಳಿರೈತರ ಮೇಲೆ ಡ್ರೋನ್ ಕಣ್ಗಾವಲಿಟ್ಟ ಸರ್ಕಾರ: ಭಾರತ್ ಬಂದ್‌ ಬೆಂಬಲಿಸಿ ಅಣ್ಣಾ ಹಜಾರೆ ಉಪವಾಸ

ರೈತರ ಮೇಲೆ ಡ್ರೋನ್ ಕಣ್ಗಾವಲಿಟ್ಟ ಸರ್ಕಾರ: ಭಾರತ್ ಬಂದ್‌ ಬೆಂಬಲಿಸಿ ಅಣ್ಣಾ ಹಜಾರೆ ಉಪವಾಸ

ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ‘ಚಕ್ಕಾ ಜಾಮ್’ ಮಾಡಿ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 13 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ತೀವ್ರಗೊಳಿಸಿದ ರೈತರು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಇಷ್ಟು ದಿನಗಳಿಂದ ದೇಶದ ಸಮಸ್ಯೆಗಳ ಬಗ್ಗೆ ಒಂದು ಮಾತಾನಾಡಿಲ್ಲ ಎಂಬ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಇಂದು ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಅಣ್ಣಾ ಹಜಾರೆ ಅವರು ದಿನವಿಡೀ ಉಪವಾಸ ಸತ್ಯಾಗ್ರಹ ಮಾಡಿ ಬಂದ್‌ಗೆ ಕರೆ ನೀಡಿರುವ ನಡೆಸುವ ರೈತರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿಯೂ, ರೈತರ ​​ಹಿತದೃಷ್ಟಿಯಿಂದ ಸರ್ಕಾರ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ. ರೈತರ ಚಳುವಳಿ ದೇಶಾದ್ಯಂತ ಹರಡಬೇಕು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಇತ್ತ ಭಾರತ್ ಬಂದ್ ಅಂಗವಾಗಿ ಬೆಗುಸರೈನಲ್ಲಿ ಕಾರ್ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೊಶ ವ್ಯಕ್ತಪಡಿಸಲಾಗಿದೆ. ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಧ್ಯಾಹ್ನ 3 ರವರೆಗೆ ‘ಚಕ್ಕಾ ಜಾಮ್’ ಸಮಯದಲ್ಲಿ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

Bharat Bandh: Hazare Joins Protest; Car Tyres Set Ablaze in Bihar
PC: The Quint

ಪ್ರತಿಭಟನಾಕಾರರ ಮೇಲೆ ಕಣ್ಣಿಡಲು ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಡ್ರೋನ್ ಕಣ್ಗಾವಲು ಕ್ಯಾಮೆರಾವನ್ನು ಬಳಸುತ್ತಿದ್ದಾರೆ. ಬಂದ್ ಸಮಯದಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ.

’ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ ಎಂದು ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಆರೋಪಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ಮುಖಂಡ ಶರದ್ ಪವಾರ್, ಸಿಪಿಐ (ಎಂ) ನ ಸೀತಾರಾಮ್ ಯೆಚೂರಿ ಸೇರಿದಂತೆ ಇತರ ನಾಯಕರು ಜಂಟಿ ಹೇಳಿಕೆ ನೀಡಿದ್ದು, ಭಾರತ್ ಬಂದ್ ಕರೆಯನ್ನು ಬೆಂಬಲಿಸಿದ್ದಾರೆ. ಪ್ರತಿಭಟನಾ ನಿರತ ರೈತರು ಬುಧವಾರ ಮತ್ತೊಂದು ಸುತ್ತಿನ ಮಾತುಕತೆಗಾಗಿ ಕೇಂದ್ರ ಸರ್ಕಾರವನ್ನು ಭೇಟಿಯಾಗಲಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...