Homeಚಳವಳಿಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ರೈತ ಸಂಘಗಳು, ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಯಾವುದೇ ಭೇದವಿಲ್ಲದೇ ರೈತರಿಗಾಗಿ ಬೀದಿಗಿಳಿದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ನಿನ್ನೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದೆ. ಇಂದು ಕೂಡ ನೂರಾರು ಮಂದಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಇತ್ತ ಮೌರ್ಯ ಸರ್ಕಲ್ ಬಳಿಯೇ ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು, ಮತ್ತೊಂದೆಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯೆ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಮತ್ತು ನರೇಂದ್ರ ಮೋದಿ‌ ತೊಲಗಲಿ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ರೈತರು ಕರೆಕೊಟ್ಟ ಭಾರತ್ ಬಂದ್‌ಗೆ ಆಮ್ ಆದ್ಮಿ ಪಕ್ಷ ಕೂಡ ಬೆಂಬಲ ವ್ಯಕ್ತಪಡಿಸಿ, ಮೋಹನ್ ದಾಸರಿ, ವಿಜಯ್ ಶರ್ಮಾ ಮುಂತಾದ ರಾಜ್ಯ ಆಪ್ ನಾಯಕರು ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಇನ್ನೂ ಟೌನ್ ಹಾಲ್ ಸರ್ಕಲ್‌ನಲ್ಲಿ ಹಲವಾರು ಸಂಘ ಸಂಸ್ಥೆಗಳು ಭಾರಿ ಪ್ರತಿಭಟನೆ ನಡೆಸಿದವು. ಸಿಐಟಿಯು, ಕಾಂಗ್ರೆಸ್, ರೈತ ಸಂಘಟನೆಗಳು, ಡಿಎಸ್‌ಪಿ, ಯೂತ್ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಕವಿಸೇ, ದಲಿತ್ ಟೈಗರ್ಸ್ ಸಮಿತಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದವು.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ರೈತರು ಸರ್ಕಾರ ನೀಡಿದ ಆಹಾರವನ್ನು ತೆಗೆದುಕೊಳ್ಳಲಿಲ್ಲ ಇಂತಹ ಸಂದರ್ಭದಲ್ಲಿ ರೈತರ ಸ್ವಾಭಿಮಾನ ಎಷ್ಟು ಎಂದು ಯೋಚಿಸಿ, ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಿ, ಅದರ ಸಾಧಕ ಬಾಧಕಗಳ ಕುರಿತು ಚರ್ಚೆಯಾಗಲಿ. ದೇಶದಲ್ಲಿ ರೈತರು, ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು “ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷಿ ಮಾತನಾಡಿ, ’ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಅಪಾಯಕಾರಿ.   ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ನಾವು ಹಿಂಸಾ ಮಾರ್ಗವನ್ನು ತುಳಿದರೆ ಬಂದ್ ಮಾಡುವುದು ಕಷ್ಟವಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐಕ್ಯ ಹೋರಾಟ ಸಮಿತಿಯ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಮತ್ತು ಬೆಂಬಲಿಗರು ಟೌನ್ ಹಾಲ್‌ ಕಡೆ ಮೆರವಣಿಗೆ ಹೊರಟಿದ್ದರು. ಅಲ್ಲಿಗೆ ಹೋಗದಂತೆ ಪೊಲೀಸರು ತಡೆಹಿಡಿದ ನಂತರ ಮೈಸೂರು ಬ್ಯಾಂಕ್ ಸರ್ಕಲ್‌ ಕಡೆಗೆ ಮೆರವಣಿಗೆ ಹೊರಟಿತು.

ಬ್ಯಾರಿಕೇಡ್ ಹಾರಿ ಟೌನ್ ಹಾಲ್ ಕಡೆಗೆ ಹೋಗಲು ಪ್ರಯತ್ನಿಸಿದ ರೈತರನ್ನು ತಡೆದ ಪೊಲೀಸರು. ಪೊಲೀಸರು ಹಾಗೂ ರೈತರ ನಟುವೆ ಮಾತಿನ ಜಟಾಪಟಿ ನಡೆದು, ರಸ್ತೆ ಮೇಲೆ ಉರುಳಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು. ಪ್ರತಿಭಟನಾಕಾರರನ್ನು ನಿಯಂತ್ರಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು,ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Image

ಕೈಗೆ ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.


ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...