Homeಚಳವಳಿಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

ಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಪ್ರತಿಭಟಿಸುತ್ತಿದ್ದ ರೈತರಿಗೆ ಬೆಂಬಲ ನೀಡಿದ ಸೈನಿಕರೊಬ್ಬರನ್ನು ಪೊಲೀಸರು ಇಂದು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಪತ್ರಕರ್ತರಾದ ಅರುಣ್ ಕುಮಾರ್ ಟ್ವೀಟ್ ಮಾಡಿ, “ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದ ಸೈನಿಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಜೆಗೆಂದು ತಮ್ಮ ಹಳ್ಳಿಯಾದ ಕುಂದಗೋಳಕ್ಕೆ ಮರಳಿದ್ದ ಸೈನಿಕ ಇಂದಿನ ಭಾರತ್ ಬಂದ್‌ನಲ್ಲಿ ಭಾಗವಹಿಸಿದ್ದರು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕಳೆದ 13 ದಿನಗಳಿಂದ ಕೊರೆವ ಚಳಿಯಲ್ಲಿ ಹೋರಾಟ ನಡೆಸಿರುವ ರೈತರು ಕರೆ ನೀಡಿದ್ದ ಇಂದಿನ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ಖ್ಯಾತ ಕನ್ನಡ ಚಿತ್ರನಟ ಡಾ.ಶಿವರಾಜ್‌ ಕುಮಾರ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...