Homeಚಳವಳಿತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

’ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ’

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮತ್ತು ದೆಹಲಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ತುಮಕೂರು ಮತ್ತು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. . ರೈತ-ದಲಿತ-ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನಾನಿರತ ರೈತರು ಪ್ರಧಾನಿ ನರೆಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಕಿಡಿಕಾರಿದರು. ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು. ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳ ಜಾರಿಯಿಂದ ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಬೀದಿಗೆ ಬೀಳಲಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅನ್ನ ನೀಡುವ ರೈತ ಮತ್ತೊಬ್ಬರ ಬಾಗಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಲಿದೆ.

ಬಡ, ಮಧ್ಯಮ ವರ್ಗದ ರೈತರ ಬಳಿ ಇರುವ ಅಲ್ಪಸ್ವಲ್ಪ ಭೂಮಿಯೂ ಶ್ರೀಮಂತರ ಕೈ ಸೇರಲಿದೆ. ಕಾರ್ಪೋರೇಟ್ ಕುಳಗಳು ಜಮೀನು ಖರೀದಿ ರೈತರನ್ನು ಕೂಲಿ ಇಟ್ಟುಕೊಳ್ಳುವಂತಹ ವ್ಯವಸ್ಥೆ ಮತ್ತೆ ಬರಲಿದೆ. ರೈತರು ಸ್ವತಂತ್ರವಾಗಿರಬೇಕು. ಯಾರ ಹಿಡಿತವೂ ಇರಬಾರದು. ಮತ್ತೊಬ್ಬರ ಗುಲಾಮ ರಾಗಿ ಜೀವನ ನಡೆಸಬಾರದು ಎಂಬ ನ್ಯಾಯದ ವ್ಯವಸ್ಥೆಗೆ ಧಕ್ಕೆ ಬರಲಿದೆ. ಹಾಗಾಗಿ ಭಾರತ ಸರ್ಕಾರ ಹೊಸ ಕೃಷಿ ಸುಗ್ರೀವಾಜ್ಞೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಗುಬ್ಬಿ, ತಿಪಟೂರು, ಕುಣಿಗಲ್, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ಹೀಗೆ ಜಿಲ್ಲೆಯ ಎಲ್ಲಾ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ಜೋರಾಗಿ ನಡೆದವು. ರಾಜ್ಯ ರೈತ ಸಂಘಟನೆ ಮತ್ತು ಹಸಿರು ಸೇನೆಯ ಎರಡೂ ಬಣಗಳ ಕಾರ್ಯಕರ್ತರು ಮಿನಿವಿಧಾನ ಸೌಧಗಳ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಅನ್ನದಾತರ ಬೆನ್ನು ಮೂಳೆ ಮುರಿಯುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ. ಪ್ರತಿಯೊಬ್ಬರು ಅನ್ನ ತಿಂದೇ ಬದುಕಬೇಕು ಅನ್ನವಿಲ್ಲದೆ ಬಲವೂ ಇಲ್ಲ. ಜ್ಞಾನವೂ ಪಡೆಯಲು ಆಗುವುದಿಲ್ಲ. ಇದನ್ನು ಕಾರ್ಪೋರೇಟ್ ಬೆಂಬಲಿತ ಸರ್ಕಾರ ಗಳ ಅರ್ಥ ಮಾಡಿಕೊಳ್ಳಬೇಕು. ಇದು ಅರ್ಥವಾಗದಿದ್ದರೆ ದೇಶವನ್ನು ಆಳ್ವಿಕೆ ಮಾಡಲು ಯೋಗ್ಯರಲ್ಲ. ನಿಮಗೆ ಹೇಗೆ ಅರ್ಥಮಾಡಿಸಬೇಕೆಂಬುದನ್ನು ಚುನಾವಣೆಯಲ್ಲಿ ತಿಳಿಸುತ್ತೇವೆ ಎಂದು ಸವಾಲು ಹಾಕಿದರು.

ತುಮಕೂರು ಚರ್ಚ್ ವೃತ್ತದಿಂದ ಟೌನ್ ಹಾಲ್‌ವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಪ್ರಧಾನಿ ರೈತರನ್ನು ಒಳಗೊಳ್ಳದೆ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಬಾಯಿ ಮಾತಿಗೆ ಮಾತ್ರ ರೈತಮಂತ್ರ ಜಪಿಸುವ ಮೋದಿ ಕೇವಲ ಡೋಂಗಿಯಂತೆ ನಟಿಸುತ್ತಿದ್ದಾರೆ. ರೈತರ ಪರ ಕಾಳಿಜಿ ಇಲ್ಲದ ಪ್ರಧಾನಿ ಅದಾನಿ ಅಂಬಾನಿಯಂಥ ಬಂಡವಾಳಗಾರರಿಗೆ ಮಣೆ ಹಾಕುತ್ತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಂದ್ರ ಮಾತನಾಡಿ, ’ನಮ್ಮ ಪಕ್ಷ ರೈತರ ನೆರವಿಗೆ ನಿಲ್ಲುತ್ತದೆ. ರೈತರು ಈ ದೇಶದ ಎಲ್ಲಾ ವರ್ಗದ ಜನರಿಗೂ ಅನ್ನ ನೀಡುವವರು. ಅವರು ಸಂಕಷ್ಟಕ್ಕೆ ಸಿಲುಕಿದರೆ ದೇಶವೇ ಸಂಕಷ್ಟಕ್ಕೆ ಸಿಲುಕಿದಂತೆ ಆಗುತ್ತದೆ. ಕಳೆದ ಹಲುವು ದಿನಗಳಿಂದ ದೆಹಲಿಯಲ್ಲಿ ನೂರಾರು ರೈತ ಸಂಘಟನೆ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ’ ಎಂದರು.

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

’ಇದು ಬಿಜೆಪಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಗಳು ರೈತರು, ಜನಸಾಮಾನ್ಯರನ್ನು ಕತ್ತಲಿಗೆ ದೂಡಲಿವೆ. ಜನರು ಆಹಾರದ ಸಮಸ್ಯೆಯನ್ನು ಎದುರಿಸುವಂಥ ದಿನಗಳು ದೂರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಢಿಕೆಗಳಿಗೆ ಸ್ಪಂದಿಸಬೇಕು. ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಮೊದಲಿನ ವ್ಯವಸ್ಥೆಯನ್ನೇ ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಭಯ ಬಣಗಳ ತುಮಕೂರು ಜಿಲ್ಲಾಧ್ಯಕ್ಷರಾದ ಎ.ಗೋವಿಂದ ರಾಜು, ಆನಂದ ಪಟೇಲ್, ’ಮಾತನಾಡಿ ಪ್ರಧಾನಿ ಮೋದಿ ಮೊಂಡುತನವನ್ನು ಬಿಟ್ಟು ರೈತರ ಜೊತೆ ಮಾತು ನಡೆಸಬೇಕು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ನಮಗೆ ಒಪ್ಪಿಗೆ ಇಲ್ಲ. ಆದ್ದರಿಂದ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನೇ ರದ್ದುಪಡಿಸಬೇಕು. ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿರುವುದು ಬೇಜವಾಬ್ದಾರಿಯನ್ನು ತೋರಿಸುತ್ತದೆ. ಹಿಟ್ಲರ್ ಕೂಡ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿ ಪತನಗೊಂಡ. ಇದನ್ನು ಪ್ರಧಾನಿ ಅರ್ಥ ಮಾಡಿಕೊಂಡರೆ ಒಳ್ಳೆಯದು. ಐದು ಸುತ್ತಿನ ಮಾತುಕತೆಯಲ್ಲೂ ರೈತರ ಬೇಡಿಕೆಯೊಂದನ್ನು ಈಡೇರಿಸಲು ಆಗಿಲ್ಲ. ಬರೀ ಮಾತು ಆಡಿದರೆ ಸಾಲದು. ರೈತರ ಬೇಡಿಕೆ ಈಡೇರಿಸಬೇಕು’ ಎಂದು ಹೇಳಿದರು.

ಆರ್.ಕೆ.ಎಸ್. ಮುಖಂಡ ಎಸ್.ಎನ್.ಸ್ವಾಮಿ, ಎಐಟಿಯುಸಿ ಗಿರೀಶ್, ಎಐಕೆಎಸ್ ಶಶಿಕಾಂತ್, ಎಐಕೆಎಸ್ ಸಿಸಿ ಕಾರ್ಯದರ್ಶಿ ಸಿ.ಯತಿರಾಜು, ಕಾರ್ಮಿಕ ಮುಖಂಡರು ಎಐಡಿಎಸ್ಒ‌ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...