Homeನ್ಯಾಯ ಪಥಡೇವಿಡ್ ಮ್ಯಾಮೆಟ್ ಮತ್ತು ಅವರ ಉಗ್ರವಾದಿ ಸಿನೆಮಾ ಸಿದ್ಧಾಂತ

ಡೇವಿಡ್ ಮ್ಯಾಮೆಟ್ ಮತ್ತು ಅವರ ಉಗ್ರವಾದಿ ಸಿನೆಮಾ ಸಿದ್ಧಾಂತ

- Advertisement -
- Advertisement -

ಸಿನಿಯಾನ:03

| ರಾಜಶೇಖರ್ ಅಕ್ಕಿ |

`ಮೊದಲ ಶಾಟ್ -ಒಬ್ಬ ಮಹಿಳೆ ಅಳುತ್ತ ಕುಳಿತಿದ್ದಾಳೆ, ಎರಡನೇ ಶಾಟ್- ನೇಣುಗಂಬದ ಪಕ್ಕ ನಿಂತಿರುವ ವ್ಯಕ್ತಿ ತನ್ನ ಗಡಿಯಾರ ನೋಡಿ, ಕ್ಯಾಮರಾ ಕಡೆ ನೋಡುತ್ತಾನೆ

ಪ್ರೇಕ್ಷಕರ ಮನದಲ್ಲಿ ಮೂಡುವುದು- ಓಹ್ ಈ ಮಹಿಳೆಯನ್ನು ಗಲ್ಲಿಗೇರಿಸುವ ಸಮಯ, ಅದಕ್ಕೇ ಅಳುತ್ತಿದ್ದಾಳೆ.

ಈಗ ಇನ್ನೊಂದು ಚಿತ್ರ; ಮೊದಲ ಶಾಟ್ – ಮಹಿಳೆ ಅಳುತ್ತ ಕುಳಿತಿದ್ದ ಅದೇ ಶಾಟ್; ಯಾವುದೇ ಬದಲಾವಣೆ ಇಲ್ಲ. ಎರಡನೇ ಶಾಟ್- ಒಬ್ಬ ನಾಲ್ಕೈದು ವರ್ಷದ ಮಗು ಬ್ಯಾಗ್ ಹಾಕಿಕೊಂಡು ಅಳುತ್ತ ಸ್ಕೂಲ್ ಬಸ್ ಹತ್ತುತ್ತಿದ್ದಾನೆ

ಪ್ರೇಕ್ಷಕರ ಮನದಲ್ಲಿ ಮೂಡುವುದು? ಹೇಳುವ ಅಗತ್ಯವಿಲ್ಲ’

ಡೇವಿಡ್ ಮ್ಯಾಮೆಟ್, ಸಿನೆಮಾ ನಿರ್ದೇಶನದ ಬಗ್ಗೆ ಮಾತನಾಡುತ್ತ.

ಇದನ್ನು ಜಕ್ಸ್ಟಾಪೊಸಿಷನ್ ಎನ್ನುತ್ತಾರೆ. ಇದು ಮೋಂಟಾಜ್ ಥಿಯರಿಯ ಒಂದು ಉದಾಹರಣೆ. ಇದನ್ನು ಮೊದಲ ಸಲ ಪ್ರತಿಪಾದಿಸಿದ್ದು ರಷಿಯಾದ ಚಿತ್ರನಿರ್ದೇಶಕ ಸರ್ಗೇಯ್ ಐಸಿನ್‍ಸ್ಟೇನ್. 1925 ರಲ್ಲಿ ಬಂದ ಬ್ಯಾಟಲ್‍ಶಿಪ್ ಪೊಟಮ್ಕಿನ್ ಎನ್ನುವ ಐತಿಹಾಸಿಕ ಸಿನೆಮಾ ನಿರ್ದೇಶಿಸಿದ್ದು ಇದೇ ಐಸಿನ್‍ಸ್ಟೇನ್.

ಐಸಿನ್‍ಸ್ಟೇನ್‍ನಿಂದ ಪ್ರಭಾವಿತರಾದ ಡೇವಿಡ್ ಮ್ಯಾಮೆಟ್ ಹುಟ್ಟಿದ್ದು 1947ರಲ್ಲಿ. ಶಿಕಾಗೋದಲ್ಲಿ ಹುಟ್ಟಿ ಬೆಳೆದ ಇವರು ಒಬ್ಬ ನಟನಾಗಿ ತನ್ನ ಕಲಾಜೀವನ ಶುರು ಮಾಡಿದರು, ಅದು ಸರಿಹೊಂದಲಿಲ್ಲ ಎಂದು ನಾಟಕಗಳ ನಿರ್ದೇಶನಕ್ಕಿಳಿದರು. ನಂತರ ನಾಟಕ ಬರೆಯೋಕ್ಕೆ ಶುರು ಮಾಡಿದರು. ಸೆಕ್ಷುವಲ್ ಪರ್ವರ್ಸಿಟಿ ಇನ್ ಷಿಕಾಗೋ, ಗ್ಲೆನ್‍ಗೆರಿ ಗ್ಲೆನ್ ರಾಸ್,  ಎ ಲೈಫ್ ಇನ ಥಿಯೇಟರ್ ಎನ್ನುವ ಅನೇಕ ಯಶಸ್ವೀ ನಾಟಕಗಳನ್ನು ಬರೆದರು. ಬರಹ ಮುಂದುವರೆಸುತ್ತ ಸಿನೆಮಾ ಬರೆಯಲು ಶುರು ಮಾಡಿದರು. ಸಿಡ್ನಿ ಲುಮೆಟ್‍ಯ ವರ್ಡಿಕ್ಟ್‍ನ ಚಿತ್ರಕಥೆಯನ್ನು ಬರೆದದ್ದು ಇವರೆ. ಅನೇಕ ಸಿನೆಮಾಗಳಿಗೆ ಬರೆದರೂ ಅದರ ಕ್ರೆಡಿಟ್ ತೆಗೆದುಕೊಳ್ಳಲಿಲ್ಲ. ಹಾಲಿವುಡ್‍ನ ಸ್ಕ್ರಿಪ್ಟ್ ಡಾಕ್ಟರ್ ಆಗಿಯೂ ಪ್ರಸಿದ್ಧರಾದವರು.  1989 ರಲ್ಲಿ ಶಾನ್ ಪೆನ್ ಮತ್ತು ರಾಬರ್ಟ್ ಡಿನೀರೊ ಅಭಿನಯದ ‘ವಿ ಆರ್ ನೋ ಏಂಜೆಲ್ಸ್’ ಎನ್ನುವ ಚಿತ್ರ ನೋಡಿದರೆ ಇವರ ಬರಹದಲ್ಲಿರುವ ನಿಷ್ಠುರತೆ ಎದ್ದು ಕಾಣುತ್ತದೆ.

ಮ್ಯಾಮೆಟ್ ಅವರು ತಮ್ಮ ಸಂಭಾಷಣೆಯ ಶೈಲಿಗಾಗಿಯೇ ವಿಖ್ಯಾತರಾದವರು.

‘ನೀವು ಸಂಭಾಷಣೆ ಚೆನ್ನಾಗಿ ಬರೆಯುತ್ತೀರಿ ಎಂತಿದ್ದರೆ, ಆ ಸಂಭಾಷಣೆಗಳನ್ನು ಸಿನೆಮಾದಲ್ಲಿ ಬಳಸದಿರುವುದೇ ಉತ್ತಮ.’ ಇದು ಸಂಭಾಷಣೆ ಬಗ್ಗೆ ಮ್ಯಾಮೆಟ್ ಹೇಳಿದ್ದು.  ಇಷ್ಟು ನಿಷ್ಠುರವಾಗಿ ಸಂಭಾಷಣೆ ಹೇಗೆ ಬರೆಯುತ್ತೀರಿ ಎಂದು ಕೇಳಿದಾಗ ‘‘ಆಗಿನ್ನೂ ನಮ್ಮ ಮನೆಗಳಲ್ಲಿ ಟಿವಿ ಬಂದಿರದ ಸಮಯ, ಸಂಜೆ ಮನೆಯ ಎಲ್ಲಾ ಸದಸ್ಯರು ಕುಳಿತುಕೊಂಡು ನಾವೆಷ್ಟು ದುಷ್ಟತನದ ಮಾತುಗಳನ್ನು ಆಡಬಹುದೋ ಎನ್ನುವ ಸಾಮಥ್ರ್ಯದ ಆಧಾರದ ಮೇಲೆ ನಮ್ಮನ್ನು ನಾವು ಶೋಚನೀಯ ಮಾಡಿಕೊಳ್ಳುತ್ತ ನಮ್ಮ ಸಮಯ ಕಳೆಯುತಿದ್ದೆವು. ‘ 

ಬರಹಕ್ಕಷ್ಟೇ ನಿಲ್ಲದೇ ಸಿನೆಮಾ ನಿರ್ದೇಶನಕ್ಕೂ ಲಗ್ಗೆ ಇಟ್ಟರು ಮ್ಯಾಮೆಟ್. ಹೌಸ್ ಆಫ್ ಗೇಮ್ಸ್ ಇವರ ನಿರ್ದೇಶನದ ಮೊದಲ ಚಿತ್ರ. ನಂತರ ಹೋಮಿಸೈಡ್, ಸ್ಪಾರ್ಟನ್, ಒಲಿಯಾನಾ, ಸ್ಪ್ಯಾನಿಷ್ ಪ್ರಿಸನರ್ ಇವರು ನಿದೇಶಿಸಿದ ಕೆಲವು ಚಿತ್ರಗಳು. ಇವುಗಳಲ್ಲಿ ಹೆಚ್ಚಿನ ಚಿತ್ರಗಳು ಬಾಕ್ಸಾಫೀಸಿನಲ್ಲಿ ಗೆಲ್ಲಲಿಲ್ಲ.

1991 ರಲ್ಲಿ ಮ್ಯಾಮೆಟ್  ಸಿನೆಮಾ ನಿರ್ದೇಶನದ ಬಗ್ಗೆ ‘ಆನ್ ಡಿರೆಕ್ಟಿಂಗ್ ಫಿಲ್ಮ್’ ಎನ್ನುವ ಪುಸ್ತಕ ಬರೆದರು. ನಮಗೆಲ್ಲಾ ಡೇವಿಡ್ ಮ್ಯಾಮೆಟ್ ಪರಿಚಯವಾಗಿದ್ದು ಈ ಪುಸ್ತಕದಿಂದಲೇ. ಸಿನೆಮಾ ನಿರ್ದೇಶನ ಕಲಿಯುವಾಗ ಓದಲೇಬೇಕಾದ ಪುಸ್ತಕಗಳಾದ ಟಾರ್ಕೋವಸ್ಕಿಯ ‘ಸ್ಕಲ್ಪ್ಟಿಂಗ್ ಇನ್ ಟೈಮ್’, ಸ್ಟೀವನ್ ಕಾಟ್ಜ್‍ನ ‘ಶಾಟ್ ಬೈ ಶಾಟ್’, ಆ್ಯಂಡ್ರಿ ವೈಯದಾ ಅವರ ‘ವೈಯದಾ ಆನ್ ಫಿಲ್ಮ್ಸ್’, ವಾಲ್ಟರ್ ಮರ್ಚ್‍ನ ‘ಇನ್ ದಿ ಬ್ಲಿಂಕ್ ಆಫ್ ಅ್ಯನ್ ಐ’ ಐಸಿನ್‍ಸ್ಟೇನ್ ನ ‘ಫಿಲ್ಮ್ ಸೆನ್ಸ್’ ಇವೆಲ್ಲವುಗಳಲ್ಲಿ ಡೇವಿಡ್ ಮ್ಯಾಮೆಟ್ ಅವರ ಪುಸ್ತಕ ಎಲ್ಲಕ್ಕಿಂತ ಅತಿರೇಕದ ನಿಲುವುಗಳನ್ನು ಹೊಂದಿದ ಪುಸ್ತಕ. ಇವರ ಪುಸ್ತಕದಲ್ಲಿರುವ ಥಿಯರಿ ಮತ್ತು ಇವರು ಪ್ರತಿಪಾದಿಸುವ ಥಿಯರಿಗಳನ್ನು ಅನುಷ್ಠಾನಗೊಳಿಸಿಕೊಳ್ಳಬೇಕೋ ಇಲ್ಲವೋ ಎನ್ನುವದನ್ನು ಚರ್ಚಿಸಬಹುದು ಆದರೆ ಇವರ ಥಿಯರಿಗಳನ್ನು ತಿಳಿದುಕೊಳ್ಳದೇ ಇರುವುದು ಒಬ್ಬ ನಿರ್ದೇಶಕನಿಗೆ ದೊಡ್ಡ ಲಾಸ್.

ಮುಂದೇನಾಗಬೇಕು ಎಂದು ತಿಳಿದುಕೊಳ್ಳಲು ಪ್ರೇಕ್ಷಕನನ್ನು ತುದಿಗಾಲಲ್ಲಿ ನಿಲ್ಲಿಸಬೇಕು, ಪ್ರತಿಯೊಂದು ಶಾಟ್ ಕೂಡ ಅದರ ಮುಂಚಿನ ಶಾಟ್‍ದಿಂದ ಕಥೆಯನ್ನು ಮುಂದುವರೆಸುವಂತಿರಬೇಕು, ಪ್ರೇಕ್ಷಕರಿಗೆ ಎಲ್ಲವನ್ನೂ ಹೇಳುವ ಅವಶ್ಯಕತೆ ಇಲ್ಲ,  ‘ಯಾವುದೇ ಸಿನೆಮಾದ ಮೊದಲ ಹತ್ತು ನಿಮಿಷಗಳನ್ನು ಕತ್ತರಿಸಿಬಿಡಿ, ಚೆನ್ನಾಗಾಗುತ್ತೆ.’ ‘ಸಿನೆಮಾ ಮಾಡುವುದು ಒಂದು ಜೋಕ್ ಇದ್ದಂತೆ, ಪ್ರೇಕ್ಷಕರು ಇನ್ನೇನೋ ನಿರೀಕ್ಸಿಸುತ್ತಿದ್ದಾಗ ಬೇರೇನೋ ಆಗುತ್ತೆ. ಹಾಗಿಲ್ಲದಿದ್ದರೆ ಏನಕ್ಕೆ ನೋಡಬೇಕು ನಿಮ್ಮ ಸಿನೆಮಾ?’

2003ರಲ್ಲಿ ಇರ್ಫಾನ್ ಮತ್ತು ನವಾಝುದ್ದಿನ್ ಸಿದ್ದಿಕಿ ಅಭಿನಯದ ‘ದಿ ಬೈಪಾಸ್’ ಎನ್ನುವ ಕಿರುಚಿತ್ರ ಬಿಡುಗಡೆಯಾಯಿತು. ಆ ಸಿನೆಮಾ ನೋಡಿದರೆ ಅದರ ನಿರ್ದೇಶಕ ಡೇವಿಡ್ ಮ್ಯಾಮೆಟ್‍ನಿಂದ ಎಷ್ಟು ಪ್ರಭಾವಿತರಾಗಿದ್ದಾರೆ ಎಂದು ಸುಲಭವಾಗಿ ತಿಳಿಯುತ್ತದೆ. ಆ ಚಿತ್ರಕ್ಕೆ ನೋಡುಗರಿಂದ, ವಿಮರ್ಶಕರಿಂದ ಮೆಚ್ಚುಗೆಯ ಸುರಿಮಳೆಯಾಯಿತು. ಅನೇಕ ಸಿನಿಹಬ್ಬಗಳಲ್ಲಿ ಪ್ರದರ್ಶಿತವಾಯಿತು. ಆಗತಾನೇ ಮ್ಯಾಮೆಟ್ ಅವರ ಪುಸ್ತಕ ಓದಿ ಪ್ರಭಾವಿತನಾಗಿದ್ದ ನನಗೆ ಆ ಚಿತ್ರ ನೋಡಿ ವಾಕರಿಗೆ ಬಂತು. ನಮಗೆಲ್ಲರಿಗೂ ಗೊತ್ತಿರುವಂತೆ ಸಿನೆಮಾ ಎನ್ನುವುದು ಕಥೆ ಹೇಳುವ ಒಂದು ಮಾಧ್ಯಮ. ದಿ ಬ್ಯಪಾಸ್ ಎನ್ನುವ ಚಿತ್ರದಲ್ಲಿ ಅದನ್ನು ಬಿಟ್ಟು ಆ ಮತಿಗೆಟ್ಟ ನಿರ್ದೇಶಕ ತನ್ನ ಕೌಶಲ್ಯವನ್ನು ಪ್ರದರ್ಶಿಸಲೆಂದೇ ಆ ಚಿತ್ರ ಮಾಡಿದ್ದು.

ಇಂತಹದ್ದೇ ದೌರ್ಬಲ್ಯವನ್ನು ಸ್ವತಃ ಮ್ಯಾಮೆಟ್ ಕೂಡ 2008ರಲ್ಲಿ ಬಂದ ತಮ್ಮ ‘ರೆಡ್‍ಬೆಲ್ಟ್’ ಮಿಕ್ಸಡ್ ಮಾರ್ಷಿಯಲ್ ಆರ್ಟ್‍ನ ಚಿತ್ರದಲ್ಲಿ ಪ್ರದರ್ಶಿಸಿದರು. ಅದು ಒಬ್ಬ ಮಾರ್ಷಿಯಲ್ ಆರ್ಟ್ ತರಬೇತುದಾರನ ಕಥೆ. ಅವನು ಬಿಕ್ಕಟ್ಟಿಗೆ ಸಿಕ್ಕಿಹಾಕಿಕೊಳ್ಳುವುದು, ಅವನ ಹೆಂಡತಿ ಮಾಡಿಕೊಳ್ಳುವ ಸಾಲ, ಇವನ ಸಣ್ಣ ತಪ್ಪಿನಿಂದಾಗಿ ಒಬ್ಬ ಪೋಲೀಸ್ ಅಧಿಕಾರಿಯ ಆತ್ಮಹತ್ಯೆ, ಬಿಕ್ಕಟ್ಟಿನಿಂದ ಹೊರಬರುವ ಯಾವುದೇ ದಾರಿಕಾಣದಿದ್ದಾಗ ಇವನೇನು ಮಾಡುತ್ತಾನೆ ಎನ್ನವುದು ಚಿತ್ರದ ಸಾರಾಂಶ. ಚಿತ್ರ ಒಂದು ಕ್ಷಣವೂ ಬೋರ್ ಹೊಡೆಸುವುದಿಲ್ಲ, ಪ್ರತಯೊಂದು ಶಾಟ್‍ಗೆ ತನ್ನದೇ ಆದ ಉದ್ದೇಶವಿದ್ದು ಕಥೆಯನ್ನು ಯಶಸ್ವಿಯಾಗಿ ಮುಂದೊಯ್ಯುತ್ತದೆ.  ಚಿತ್ರಕಥೆ, ಅಭಿನಯ, ತಾಂತ್ರಿಕತೆ, ನಿರ್ದೇಶನ ಎಲ್ಲವೂ ಸರಿಯಾಗಿಯೇ ಇದ್ದರೂ ಮ್ಯಾಮೆಟ್ ಅವರು ತಮ್ಮ ಬರಹ ಮತ್ತು ನಿರ್ದೇಶನದ ತಮ್ಮದೇ ಸಿದ್ಧಾಂತಗಳಿಗೆ ಜೋತುಬೀಳುವುದರಿಂದ ಚಿತ್ರ ಸೋಲುತ್ತದೆ.

ಆದರೆ ಡೇವಿಡ್ ಮ್ಯಾಮೆಟ್ ಸಿನೆಮಾ ಇತಿಹಾಸದಲ್ಲಿ ಬಹುಮುಖ್ಯ ವ್ಯಕ್ತಿ.  ಸಂಭಾಷಣೆಗಳಲ್ಲಿ, ನಿರ್ದೇಶನದಲ್ಲಿ, ಚಿತ್ರಕಥೆಯಲ್ಲಿ ನಿಷ್ಠುರತೆಯನ್ನು ಕಲಿಸುತ್ತಿರುವ ಮ್ಯಾಮೆಟ್ ಇಂದಿಗೂ ಸಕ್ರಿಯವಾಗಿದ್ದಾರೆ. ವಿಶ್ವಾದ್ಯಂತ ಸಾವಿರಾರು ವಿದ್ಯಾರ್ಥಿಗಳನ್ನು ಒಳ್ಳೇ ಸಿನೆಮಾ ಮಾಡಲು ತಮ್ಮ ವಿಶಿಷ್ಟ್ ‘ಮ್ಯಾಮೆಟ್‍ಸ್ಪೀಕ್’ ನಿಂದ ಹುರಿದುಂಬಿಸುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...