Homeಕರ್ನಾಟಕಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

ಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

- Advertisement -
- Advertisement -

ನೂರರ ನೋಟ- 40

| ಎಚ್.ಎಸ್ ದೊರೆಸ್ವಾಮಿ |

ಹಿಂದುತ್ವ ಪ್ರತಿಪಾದಕ ಉತ್ತರ ಪ್ರದೇಶದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಜಿಲ್ಲೆಯ ತಲೆಕೆಟ್ಟ ಹಿಂದುತ್ವ ಪ್ರತಿಪಾದಕರು ಗೋವಿನ ಹೆಸರಲ್ಲಿ ಮತೀಯ ದ್ವೇಷ ಸಾಧಿಸುವುದಕ್ಕಾಗಿ ಆಗಾಗ ಕೋಮುದಂಗೆ ಮಾಡಿಸುತ್ತಾರೆ; ಕೊಲೆ ಆಗುವಂತೆ ಮಾಡುತ್ತಾರೆ. ‘ಧರ್ಮವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಧರ್ಮೋರಕ್ಷತಿ ರಕ್ಷಿತಃ ಧರ್ಮವನ್ನು ರಕ್ಷಿಸುವವರನ್ನು ಧರ್ಮ ಕಾಪಾಡುತ್ತದೆ. ಆದ್ದರಿಂದ ಧರ್ಮವನ್ನು ರಕ್ಷಿಸಲು ಹೋರಾಡಬೇಕು. ಧರ್ಮಕ್ಕೆ ಹೋರಾಡದಿದ್ದರೆ ನಮ್ಮ ಸಮಾಜ ಎಲ್ಲಿ ಉಳಿಯುತ್ತದೆ’ ಎಂದು ಹಿಂದೂ ಮತಾಂಧರು, ಮುಸ್ಲಿಂ ಮತಾಂಧರು ವಾದಿಸುತ್ತಾರೆ.

ಈ ಧರ್ಮಾಂಧರಿಗೆ ಧರ್ಮ ರಕ್ಷಣೆ ತಮ್ಮ ಕರ್ತವ್ಯ ಎಂದು ಅನಿಸಿದಾಗ ಗೂಂಡಾಗಳನ್ನು ಸಾಕಿಕೊಳ್ಳುತ್ತಾರೆ. ಈ ಪಡೆ ಶಾಂತಿಕಾಲದಲ್ಲಿ ತಮ್ಮ ಶಕ್ತಿಯನ್ನು ವೃದ್ಧಿಸಿಕೊಳ್ಳುವುದರಲ್ಲಿ ತೊಡಗುತ್ತಾರೆ ಮತ್ತು ಹೋರಾಡುವ ಸಂದರ್ಭ ಬಂದಾಗ ತಮ್ಮ ನಿಲುವನ್ನು ಒಪ್ಪದ ಜನರ ಮೇಲೆ ಬಿದ್ದು ಅವರನ್ನು ಕೊಲೆಮಾಡುವರು. ಹಣಕ್ಕಾಗಿ ಕೊಲೆಮಾಡಲು ಸುಪಾರಿ ಸ್ವೀಕರಿಸುವವರಿಗೂ ಈ ಮತಾಂಧರು ಸಾಕಿಕೊಂಡಿರುವ ಗೂಂಡಾಗಳಿಗೂ ಏನು ವ್ಯತ್ಯಾಸ? ಧರ್ಮಕ್ಕೂ ಈ ಗೂಂಡಾಗಳಿಗೂ ಯಾವ ನಂಟು? ಗೂಂಡಾಗಳಿಗೊಂದು ಧರ್ಮವಿದೆಯೇ? ಸಿದ್ಧಾಂತವಿದೆಯೇ? ಹಿಂದುತ್ವ ಪ್ರತಿಪಾದಕರು ತಾವೇ ಗೂಂಡಾಗಳಾಗಿರುವುದರಿಂದ ಸಂದರ್ಭ ಸಿಕ್ಕರೆ ಇವರು ಸಮಸ್ತ ಅಧಿಕಾರವನ್ನು ಕರವಶ ಮಾಡಿಕೊಂಡು ವಿಜೃಂಭಿಸುವರು. ತಾತ್ಪರ್ಯವಿಷ್ಟೇ. ಯಾರು ಧರ್ಮ ರಕ್ಷಣೆಗಾಗಿ ಗೂಂಡಾಗಳನ್ನು ಬೆಳೆಸುವರೋ-ಬಳಸುವರೋ ಅವರು ಧರ್ಮವನ್ನು ಹೇಗೆ ಪ್ರತಿಪಾದಿಸುತ್ತಾರೆ?

ಭೀಮನ ಗದೆಯಾಗಲೀ, ಅರ್ಜುನನ ಗಾಂಡೀವವಾಗಲೀ ಧರ್ಮವನ್ನು ರಕ್ಷಿಸುವ ಸಾಧನವಾಗಲಾರದು. ಧರ್ಮದಿಂದ ನಡೆದುಕೊಂಡಿದ್ದರಿಂದ ಅವರು ಹೊತ್ತಿದ್ದ ಅಯುಧಗಳಿಗೆ ಕೀರ್ತಿ ಬಂತು. ಹಾಗಿಲ್ಲವಾದರೆ ಭೀಮ ಅರ್ಜುನರು ಕೊಲೆಗಡುಕರು ಅನ್ನಿಸಿಕೊಳ್ಳುತ್ತಿದ್ದರು.

ಹಿಂದುತ್ವ ಪ್ರತಿಪಾದಕರು ಯಾರ ಕೈಯಲ್ಲಿ ಗದೆ ಇದೆಯೋ ಅವರಿಗೇ ಜಯ ಎಂದು ಭಾವಿಸುತ್ತಾರೆ. ಧರ್ಮ ಅವರಿಗೆ ಒಂದು ಕೋಣವಿದ್ದಂತೆ. ಯಾರು ಅಪಮಾರ್ಗದಲ್ಲಿ ಗೆಲ್ಲುವರೋ ಅವರು ಧರ್ಮಿಷ್ಟರು, ಅವರದು ಕೋಣ. ಧರ್ಮದ ರಕ್ಷಣೆ ಎಂದರೆ ಧರ್ಮಿಷ್ಟರಾಗಿ ನಡೆದುಕೊಳ್ಳುವುದು.

ಹಿಂದೂ ಮತಾಂಧರು, ಮುಸ್ಲಿಮ್ ಮತಾಂಧರು, ಕ್ರಿಶ್ಚಿಯನ್ ಮತಾಂಧರು ಧರ್ಮ ಎಂದರೆ, ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ, ಇಸ್ಲಾಂ ಧರ್ಮ ಎಂದು ಅರ್ಥೈಸುತ್ತಾರೆ. ಇವೆಲ್ಲ ಹೊಡೆದಾಡುವ ಧರ್ಮಗಳು. ಬಡಿದಾಡುವ ಧರ್ಮಗಳು ಧರ್ಮವೇ ಅಲ್ಲ. ಯಾವ ಧರ್ಮವು ಪರಸ್ಪರ ಹೊಡೆದಾಡಲು ಹೇಳಿಲ್ಲ. ಶಾಂತಿಯನ್ನು ಬೋಧಿಸುತ್ತದೆ. ಆದರೆ ಈ ಧರ್ಮಾಂಧರು ಧರ್ಮವನ್ನು ಬಳಸಿಕೊಂಡು ಕೋಮು ಸಂಘರ್ಷದ ಕೆಲಸವನ್ನೇ ಮಾಡುತ್ತಾರೆ. ಕ್ರಿಶ್ಚಿಯನ್ ಜನಾಂಗದವರು ಮಾಡಿರುವಷ್ಟು ಯುದ್ಧವನ್ನು ಬೇರಾವ ಜನಾಂಗವೂ ಮಾಡಿಲ್ಲ.

ಎಲ್ಲಾ ಮತಗಳ ಹೊಂದಾಣಿಕೆಯೇ ಧರ್ಮ. ಪರಸ್ಪರ ಬಡಿದಾಡುವ ಧರ್ಮ ಧರ್ಮವೇ ಅಲ್ಲ. ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಮುಂತಾದ ಎಲ್ಲಾ ಧರ್ಮಗಳ ಅನುಯಾಯಿಗಳು ‘ಧರ್ಮ’ ಪದವನ್ನು ತಮ್ಮ ವಾದಕ್ಕೆ ಅನುಗುಣವಾಗಿ ದುರುಪಯೋಗ ಪಡಿಸಿಕೊಳ್ಳುತ್ತಾರೆ.

ಸತ್ಯಂವದ, ಧರ್ಮಂಚರ ಎಂದು ನಮ್ಮ ಉಪನಿಷತ್ತು ಹೇಳುತ್ತದೆ. ಸತ್ಯವನ್ನು ನುಡಿ ಧರ್ಮವನ್ನು ಆಚರಣೆ ಮಾಡು ಎಂದು ಇದರ ಅರ್ಥ. ‘ಧರ್ಮ’ ಒಂದು ಧರ್ಮಕ್ಕೆ ಸೀಮಿತವಾದುದಲ್ಲ. ಅದು ವಿಶ್ವ ಧರ್ಮವನ್ನು ಪ್ರತಿಪಾದಿಸುತ್ತದೆ. ಎಲ್ಲಾ ಧರ್ಮಗಳೂ ಅಂಗೀಕರಿಸಬೇಕಾದ ಧರ್ಮ ಅದು, ವಿಶ್ವಧರ್ಮ. ಯಾರನ್ನೂ ದ್ವೇಷಿಸಲು ಹೇಳುವುದಿಲ್ಲ. ಯಾವ ಧರ್ಮವನ್ನೂ ಅದು ಅಲ್ಲಗಳೆಯುವುದಿಲ್ಲ. ಧರ್ಮದ ಹೆಸರಿನಲ್ಲಿ ಇತರ ಧರ್ಮಗಳ ಮೇಲೆ ದಾಳಿಮಾಡಲು ದ್ವೇಷ ಬುದ್ಧಿಯಿಂದ ನಡೆದುಕೊಳ್ಳಲು ಹೇಳುವುದಿಲ್ಲ. ಶ್ರೀರಾಮಕೃಷ್ಣ ಪರಮಹಂಸರು ವಿಶ್ವ ಧರ್ಮ ಪರಿಪಾಲಕರು. ಎಲ್ಲಾ ಮತಗಳಲ್ಲಿರುವ ಉತ್ತಮ ವಿಚಾರಗಳನ್ನು ಹಿಂದೂ ಧರ್ಮ ಅಳವಡಿಸಿಕೊಳ್ಳಬೇಕೆಂದು ಅವರು ಬಯಸಿ, ಸರ್ವಧರ್ಮ ಸಮನ್ವಯದ ಮಾತನಾಡಿದ್ದರು. ಇತರ ಮತಗಳ ಸಂಸ್ಥಾಪಕರು ಪ್ರತಿಪಾದಿಸಿದ ಉತ್ತಮ ಅಂಶಗಳನ್ನು ಹಿಂದೂ ಧರ್ಮಕ್ಕೆ ಜೋಡಿಸಿದರು. ಹಿಂದೂ ಧರ್ಮದಲ್ಲಿ ಪ್ರತಿಪಾದಿಸದಿರುವ ಅನೇಕ ಒಳ್ಳೆಯ ಅಂಶಗಳು ಇತರ ಧರ್ಮಗಳಲ್ಲಿರುವುದನ್ನು ಅರಿತು ಅವನ್ನು ಹಿಂದೂ ಧರ್ಮಕ್ಕೆ ಅಳವಡಿಸಲು ಮುಂದಾದರು. ಪೂಜ್ಯ ವಿನೋಬಾ ಭಾವೆಯವರು ಬೈಬಲ್ ಕುರಾನ್‍ಗಳಲ್ಲಿರುವ ಮೌಲಿಕ ತತ್ವಗಳನ್ನು ಆಯ್ದು ಕಲೆ ಹಾಕಿ ‘ಎಸೆನ್ಸ್ ಆಫ್ ಇಸ್ಲಾಂ, ಎಸೆನ್ಸ್ ಆಫ್ ಕ್ರಿಶ್ಚಿಯಾನಿಟಿ’ ಶೀರ್ಷಿಕೆಯು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮತ ಧರ್ಮಗಳ ಹೊಂದಾಣಿಕೆಯ ಕೆಲಸ ಇದು.

ಹಿಂದೂ ಮತಾಂಧ ಸಂಸ್ಥೆಗಳವರು ಈ ಲೋಕ ಕಲ್ಯಾಣದ ಕೆಲಸ ಮಾಡುವ ಬದಲು, ಮತಧರ್ಮಗಳನ್ನು ಒಡೆಯುವ, ಆ ಮೂಲಕ ಮುಗ್ಧ ಹಿಂದೂಗಳ ಭಾವನೆಗಳನ್ನು ಕೆರಳಿಸಿ ಅನ್ಯ ಧರ್ಮೀಯರನ್ನು ಶತ್ರುಗಳಂತೆ ಕಾಣಲು ಕೈ ಜೋಡಿಸುತ್ತಾರೆ. ಕೃಷ್ಣ ಗೋಕುಲಕ್ಕೆ ಬೆಂಕಿ ಬಿದ್ದಾಗ ಗೋವರ್ಧನ ಪರ್ವತವನ್ನು ಮೇಲೆತ್ತಿ ಅದರ ತಳಗೆ ಗೋಕುಲದವರನ್ನೆಲ್ಲಾ ಇಟ್ಟು ಕಾಪಾಡಿದನಂತೆ. ಆದರೆ ಹಿಂದೂತ್ವ ಪ್ರತಿಪಾದಕರು ಸಮಾಜಕ್ಕೆ ಸಂದರ್ಭ ಒದಗಿದಾಗಲೆಲ್ಲ ಬೆಂಕಿ ಹಾಕುವ ತಯಾರಿಯಲ್ಲಿರುವವರೇ!

ಎಲ್ಲಾ ಮತ ಧರ್ಮಗಳಲ್ಲಿ ಕೆಲವು ಲೋಪ ದೋಷಗಳು ಇದ್ದೇ ಇವೆ. ಹಿಂದೂ ಧರ್ಮ ಇದಕ್ಕೆ ಹೊರತಲ್ಲ. ಹಿಂದೂ ಧರ್ಮದಲ್ಲಿ ಜಾತೀಯತೆ, ಶ್ರೇಣೀಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಹೆಣ್ಣಿನ ಬಗೆಗೆ ತಾರತಮ್ಯ, ಹೀಗೆ ಹತ್ತಾರು ಲೋಪದೋಷಗಳಿವೆ.

ಅದರ ಜೊತೆಗೆ ಹಿಂದೂ ಮತಾಂಧತೆ, ಅನ್ಯ ಧರ್ಮೀಯರ ವಿಚಾರದಲ್ಲಿ ಕ್ರೌರ್ಯ, ಅಸಹನೆ, ವೈಚಾರಿಕ ಭಿನ್ನಾಭಿಪ್ರಾಯ ಉಳ್ಳವರನ್ನು, ಹಿಂದುತ್ವ ಪ್ರತಿಪಾದಕರನ್ನು ಪ್ರಶ್ನಿಸುವವರನ್ನು ವ್ಯವಸ್ಥಿತವಾಗಿ ಕೊಲೆ ಮಾಡುವುದು, ಸೆರೆಮನೆಗೆ ದೂಡುವುದು, ಖಟ್ಲೆಗಳನ್ನು ಹಾಕುವುದು ಅವ್ಯಾಹತವಾಗಿ ನಡೆದಿದೆ. ಇಷ್ಟೆಲ್ಲಾ ಅನಾಹುತ ಹಿಂದುತ್ವ ಪ್ರತಿಪಾದಕರಿಂದ ಮೇಲಿಂದ ಮೇಲೆ ನಡೆಯುತ್ತಿದ್ದರೂ, ಪ್ರಧಾನಿ ಮೋದಿಯವರು ಒಂದು ಸಾರಿಯೂ ಈ ಕುರಿತು ಪ್ರಸ್ತಾಪಿಸಿದ್ದೇ ಇಲ್ಲ. ಇಷ್ಟೇ ಅಲ್ಲ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಅವರೂ ಅಮಿತ್ ಷಾರವರು ಕೂಡಿಕೊಂಡು ವ್ಯವಸ್ಥಿತವಾಗಿ ಮುಸ್ಲಿಮರ ಸಾಲ್ಗೊಲೆ ಮಾಡಿಸಿದ್ದೂ ಜಗಜ್ಜಾಹೀರಾಗಿದೆ. ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಈ ಎಲ್ಲ ಪಿಡುಗುಗಳಿಂದ ಹಿಂದೂ ಮತವನ್ನು ಪಾರು ಮಾಡಲೇಬೇಕಾದ್ದು ಮತದಾರರ ಆದ್ಯ ಕರ್ತವ್ಯವಾಗಿದೆ. ಆಸ್ಟ್ರೇಲಿಯಾ ಪ್ರಜೆಯೊಬ್ಬ ನ್ಯೂಜಿಲೆಂಡಿನಲ್ಲಿ ನೌಕರಿ ಮಾಡುತ್ತಿದ್ದು, ಕಳೆದ ಶುಕ್ರವಾರ 2 ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಮುಸ್ಲಿಂ ಮುಗ್ಧರನ್ನು ಬಂದೂಕಿನಿಂದ ಹೊಡೆದು ಕೊಂದಿದ್ದಾನೆ. ಅವನು ಇವರನ್ನು ಏಕೆ ಕೊಂದನೆಂಬುದಕ್ಕೆ, ಬಿಳಿಯರಿಗೆ ಮಾತ್ರ ಈ ದೇಶ ಇರುವುದು ಎಂದು ಹೇಳಿದ್ದಾನೆ.

ಭಾರತದಲ್ಲಿ ಆರ್‍ಎಸ್‍ಎಸ್, ಬಿಜೆಪಿ, ಮೋದಿ ಹೇಳುವುದೂ ಇದನ್ನೇ. ಭಾರತ ಹಿಂದೂಗಳ ರಾಷ್ಟ್ರ, ಇಲ್ಲಿ ಬೇರೆಯವರಿಗೆ ಇರಲು ಅವಕಾಶವಿಲ್ಲ, ಇದ್ದರೂ ಅವರು 2ನೇ ದರ್ಜೆಯ ಪ್ರಜೆಗಳಾಗಿ ಇರಬೇಕು.

ಈ ವಿಚಿತ್ರ ನಿಲುವಿನ ಕೊಲೆಗಡುಕ ಜನ ಅಲ್ಲೊಬ್ಬರು ಇಲ್ಲೊಬ್ಬರು ಇದ್ದರೆ, ಭಾರತದಲ್ಲಿ ಇಂತಹ ತಲೆ ಕೆಟ್ಟವರ ಸಂಘಟನೆಗಳೇ ಇವೆ. ರಾಜಕೀಯದಲ್ಲಿ ವಿಷ ಸೇರಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...