Homeಚಳವಳಿಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

ಬಾಲಿವುಡ್ ನಟ, ಗಾಯಕ ದಿಲ್ಜಿತ್ ದೋಸಾಂಜ್, ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ಒಂದು ಕೋಟಿ ರೂಪಾಯಿ ನೀಡಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ 14 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಚಳಿ, ಮಳೆಯನ್ನೂ ಲೆಕ್ಕಿಸದ ರೈತರ ಬೆಂಬಲಕ್ಕೆ ಹಲವಾರು ಮಂದಿ ಸಹಾಯಹಸ್ತ ಚಾಚಿದ್ದಾರೆ. ಪಂಜಾಬ್‌ನ ಒಂದು ಕುಟುಂಬ ಇದಕ್ಕೂ ಮುಂದೆ ಹೋಗಿ, ಮದುವೆಯಲ್ಲಿ ಉಡುಗೊರೆಗಳ ಬದಲು ರೈತರಿಗಾಗಿ ದೇಣಿಗೆ ಸಂಗ್ರಹ ಮಾಡಿದೆ.

ಮದುವೆಗೆ ಬಂದ ಸಂಬಂಧಿಕರು, ಸ್ನೇಹಿತರು ಹಾಗೂ ಅತಿಥಿಗಳಿಂದ ವಿವಾಹದ ಉಡುಗೊರೆಗಳ ಬದಲಾಗಿ ಈ ದೇಣಿಗೆ ಹಣ ಸಂಗ್ರಹಕ್ಕೆ ಮುಂದಾಗಿದೆ. ವೇದಿಕೆಯ ಮುಂದೆಯೇ ವಿಶೇಷ ದೇಣಿಗೆ ಪೆಟ್ಟಿಗೆಯನ್ನು ಸ್ಥಾಪಿಸಿ, ಉದಾರವಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಮದುವೆ ಸಮಾರಂಭದಲ್ಲಿ ಆಯೋಜಿಸಲಾಗಿದ್ದ ಡಿಜೆ ಸಂಗೀತ ಕಾರ್ಯಕ್ರಮದ ವೇದಿಕೆಯಿಂದ ವ್ಯಕ್ತಿಯೊಬ್ಬರು ’ “ದಂಪತಿಗಳಿಗೆ ‘ಶಾಗುನ್’ (ಮುಯ್ಯಿ) ಹಣವನ್ನು ನೀಡುವ ಬದಲು, ದಯವಿಟ್ಟು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗಾಗಿ ಹಣ ನೀಡಿ. ಈ ಹಣವನ್ನು ರೈತರಿಗೆ ಆಹಾರ, ಬೆಚ್ಚಗಿನ ಬಟ್ಟೆ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಬಳಸಲಾಗುತ್ತದೆ” ಎಂದು ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

 

ಚಂಡಿಗಢದಿಂದ 250 ಕಿಲೋಮೀಟರ್ ದೂರದಲ್ಲಿರುವ ಪಂಜಾಬ್​​ನ ಮುಕ್ತ್​​ಸರ್​​​ನಲ್ಲಿ ನಡೆದ ವಿವಾಹ ಸಮಾರಂಬದಲ್ಲಿ ಈ ವಿಶೇಷ ಘಟನೆ ನಡೆದಿದೆ.

ಇತ್ತಿಚೆಗೆ ಬಾಲಿವುಡ್ ನಟ, ಗಾಯಕ ದಿಲ್ಜಿತ್ ದೋಸಾಂಜ್, ಕೊರೆಯುವ ಚಳಿಯಲ್ಲೂ ಕೇಂದ್ರ ಸರ್ಕಾರದ ದೌರ್ಜನ್ಯಗಳಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ಒಂದು ಕೋಟಿ ರೂಪಾಯಿ ಸಹಾಯ ಹಸ್ತ ಚಾಚಿದ್ದರು.

ಕೃಷಿ ಮಸೂದೆಗಳನ್ನು ವಿರೋಧಿಸಿರುವ ಪ್ರತಿಭಟನಾ ನಿರತ ರೈತರು ಮತ್ತು ಕೇಂದ್ರದ ನಡುವೆ ಹಲವಾರು ಸುತ್ತಿನ ಮಾತುಕತೆ ನಡೆದಿದೆ. ಆದರೆ, ಇಲ್ಲಿಯವರೆಗೆ ಕೇಂದ್ರ ಸಚಿವರು, ಕೃಷಿ ಮಸೂದೆಗಳು ರೈತರ ಪರವಾಗಿವೆ ಎಂದು ಸರ್ಮರ್ಥಿಸಲು ಸಫಲರಾಗಿಲ್ಲ.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಲೇ ಬೇಕು ಎಂದು ಪ್ರತಿಭಟನಾ ನಿರತ ರೈತ ಸಂಘಟನೆಗಳು ಆಗ್ರಹಿಸಿವೆ.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...