Homeಕರ್ನಾಟಕತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

ತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

- Advertisement -
- Advertisement -

ಹೌದು, ಬಿಜೆಪಿ ಮತ್ತು ಸಂಘಪರಿವಾರದ ಒಳಗೆ ಇದೇನೂ ಗುಟ್ಟಿನ ವಿಷಯವಾಗುಳಿದಲ್ಲ. ಸೋಮಣ್ಣರ ಬಹಿರಂಗ ಅಸಮಾಧಾನ ಚಾನೆಲ್‍ಗಳಲ್ಲಿ ಸುದ್ದಿಯಾಗಿದೆ. ಆದರೆ, ಚಕ್ರವರ್ತಿ ಸೂಲಿಬೆಲೆ ಸ್ವತಃ ವಾಟ್ಸಾಪ್ ಸಂದೇಶ ಹರಿಬಿಟ್ಟಿರುವುದು ಮತ್ತು ಅವುಗಳ ಸ್ಕ್ರೀನ್‍ಷಾಟ್‍ಗಳೂ ಓಡಾಡುತ್ತಿರುವುದು ಇನ್ನೂ ಅವರ ವಲಯದೊಳಗೇ ಇದೆ. ಮೇ 23ರಂದು ತೇಜಸ್ವಿ ಹರಕೆಯ ಕುರಿಯಾದರೆ ಬಿಜೆಪಿ ಪರಿವಾರದೊಳಗಿನ ಆತನ ವಿರೋಧಿಗಳು ಸಂಪನ್ನರಾಗುವುದರಲ್ಲಿ ಸಂದೇಹವೇ ಇಲ್ಲ. ತೇಜಸ್ವಿನಿ ಅನಂತಕುಮಾರ್‍ರಿಗೆ ಟಿಕೆಟ್ ನಿರಾಕರಣೆಯಾಗಿದ್ದರಿಂದ, ಈಗಾಗಲೇ ಸೋಲಿನ ಸುಳಿಯಲ್ಲಿ ಸಿಕ್ಕಿಕೊಂಡಿರುವ ತೇಜಸ್ವಿ ಸೂರ್ಯನ ವಿರುದ್ಧ ಸಂಘಪರಿವಾರದ ಹುಡುಗರು ಮತ್ತು ಯುವ ಬ್ರಿಗೇಡ್ ಬಾಯ್ಸ್ ಸಹಾ ತೊಡೆತಟ್ಟಿದ್ದಾರೆ.

ಟಿಕೆಟ್ ಘೋಷಣೆಯಾದ ತಕ್ಷಣ ನಿದ್ದೆ ಬರ್ತಿಲ್ಲ, ನಂಗೆ ನಿದ್ದೆ ಬರ್ತಿಲ್ಲ ಎಂದು ಟ್ವೀಟ್ ಮಾಡಿದ್ದ ಎಳಸು ವ್ಯಕ್ತಿ ಈತ. ಅಲ್ಲಿಂದಾಚೆಗೆ ಟ್ವಿಟ್ಟರ್‍ನಲ್ಲಿ ಕೆಲವರು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಉತ್ತರವಾಗಿ ತೇಜಸ್ವಿ ಸೂರ್ಯನಿಂದ ತಾನು ಮೋಸ ಹೋಗಿದ್ದಾಗಿ ಸೋಮ್ ದತ್ತ ಎಂಬ ಉದ್ಯಮಿ ಟ್ವೀಟ್ ಮಾಡಿದ್ದು ಎಲ್ಲೆಡೆ ಸುದ್ದಿಯಾಗಿದೆ. ಆದರೆ, ಆಕೆ ಹೇಳಿರುವ ಮತ್ತೊಂದು ಮಾತು ಈ ರೀತಿ ಮೋಸ ಹೋಗಿರುವುದರಲ್ಲಿ ತಾನು ಮೊದಲನೆಯವಳೂ ಅಲ್ಲ, ಕೊನೆಯವಳೂ ಅಲ್ಲ ಎಂದು. ಇದರ ಕುರಿತು ಹೊರಗಿನ ವಲಯಕ್ಕೆ ಹೆಚ್ಚು ಗೊತ್ತಿಲ್ಲದಿದ್ದರೂ, ಸಂಘಪರಿವಾರದ ವಾಟ್ಸಾಪ್ ಗುಂಪುಗಳಲ್ಲಿ ಹೆಚ್ಚಿನ ಸುದ್ದಿ ಹರಿದಾಡುತ್ತಿದೆ. ಪ್ರಮುಖವಾಗಿ ರಿಪಬ್ಲಿಕ್ ಟಿವಿಯ ಮತ್ತೊಂದು ಹುಡುಗಿಯ ಬಗ್ಗೆ ಸಹಾ ಸುದ್ದಿ ಓಡಾಡುತ್ತಿದೆ. ಅದರ ಸ್ಕ್ರೀನ್‍ಷಾಟ್‍ನಲ್ಲಿ ಹೆಸರು ಇತ್ಯಾದಿಗಳ ವಿವರವಿದೆಯಾದ್ದರಿಂದ ಇಲ್ಲಿ ಪ್ರಕಟಿಸುತ್ತಿಲ್ಲ.

ಅರಬ್ ಮುಸ್ಲಿಂ ಮಹಿಳೆಯರ ಲೈಂಗಿಕತೆಯ ಕುರಿತೆಲ್ಲಾ ಅಸಭ್ಯವಾಗಿ ಟ್ವೀಟ್ ಮಾಡಿದ್ದ ತೇಜಸ್ವಿಯ ಮನಸ್ಥಿತಿ ನೋಡಿದರೆ ಇಂತಹವು ಇನ್ನೂ ಹೆಚ್ಚಿರಬಹುದೆಂದು ಯಾರಿಗೂ ಗೊತ್ತಾಗುತ್ತದೆ. ಆತ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಆತನ ವಿರುದ್ಧ ಸೋಷಿಯಲ್ ಮಿಡಿಯಾದಲ್ಲಿ ಟ್ರೋಲ್‍ಗಳ ಸುರಿಮಳೆಯಾಗಿದೆ. ಅಂಬೇಡ್ಕರ್ ಬಗ್ಗೆ ಹೇಳಿಕೆ, ಸಂವಿಧಾನ ಬದಲಿಸುವುದು, ಮಹಿಳೆಯರಿಗೆ ಮೀಸಲಾತಿ ನೀಡಬಾರದು ಎಂಬೆಲ್ಲಾ ವಿಷಯಗಳಲ್ಲಿ ಆತ ಹಿಂದೆ ಹೇಳಿದ್ದ ಮಾತು ವಿಡಿಯೋಗಳನ್ನೆಲ್ಲಾ ತಂದು ಸುರಿದು ಅಪಹಾಸ್ಯ ಮಾಡುತ್ತಿದ್ದಾರೆ. ಮಹಿಳೆಯರ ಕುರಿತ ಈತನ ಅಸಭ್ಯ ನಡವಳಿಕೆ ಹೇಸಿಗೆ ಹುಟ್ಟಿಸುವಂತಿದೆ. ಇನ್ನು ಮೋದಿ ಮೆಚ್ಚಿಸಲು ಕನ್ನಡ ವಿರೋಧಿ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿದೆ.

ಮಹತ್ವದ ವಿಷಯವೆಂದರೆ ಚಕ್ರವರ್ತಿ ಸೂಲಿಬೆಲೆಗೂ ತೇಜಸ್ವಿ ಸೂಯರ್ಂಗೂ ಮೊದಲಿಂದಲೂ ಮುಸುಕಿನ ಜಗಳ ಒಳಗೊಳಗೆ ಮೊದಲಿಂದಲೂ ಇತ್ತು. ತೇಜಸ್ವಿಗೆ ಟಿಕೆಟ್ ಘೋಷಣೆಯಾದ ದಿನ ನಿದ್ದೆ ಬಾರದೇ ಇದ್ದುದು ತೇಜಸ್ವಿಗಲ್ಲ, ಸೂಲಿಬೆಲೆಗೆ ಎಂಬುದು ಪರಿವಾರದ ಒಳಗಿನ ಮಾತು. ಇವರಿಬ್ಬರ ನಡುವೆ ಪರಸ್ಪರ ಅವಕಾಶ ಕಸಿಯುವುದು, ತಪ್ಪಿಸುವುದು ಹಿಂದಿನಿಂದಲೂ ನಡೆದೇ ಇತ್ತು. ಸುಳ್ಳುಗಳನ್ನು ಹರಡುವುದರಲ್ಲಿ, ಭಾಷಣಗಳನ್ನು ಮಾಡುವುದರಲ್ಲಿ, ವಯಸ್ಸಿನಲ್ಲಿ ಎಲ್ಲಾ ರೀತಿಯಲ್ಲಿಯೂ ಮೇಲಾಗಿದ್ದ ಸೂಲಿಬೆಲೆಗೆ ಟಿಕೆಟ್ ಸಿಗದೇ ತೇಜಸ್ವಿಗೆ ದಕ್ಕಿದ್ದು ಸೂಲಿಬೆಲೆಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ವಾಸ್ತವದಲ್ಲಿ ಒಂದು ವರ್ಷಕ್ಕೂ ಹಿಂದಿನಿಂದಲೇ ಚಕ್ರವರ್ತಿ ಸೂಲಿಬೆಲೆ ಫಾರ್ ಸಿಎಂ ಎಂಬ ಪೇಜ್‍ಗಳೆಲ್ಲಾ ಇದ್ದು, ಅಂತಹ ಮಹತ್ವಾಕಾಂಕ್ಷೆ ಆತನಿಗೂ ಅತಿಯಾಗಿಯೇ ಇದೆ. ಅದಕ್ಕೆ ಸೂಜಿ ಚುಚ್ಚಿದಂತಾಗಿದ್ದು, ಸೂಲಿಬೆಲೆ ತನ್ನ ಭಾಷಣಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಮಂಡ್ಯವನ್ನು ಉಲ್ಲೇಖಿಸುತ್ತಿದ್ದಾನೇ ಹೊರತು ಅಪ್ಪಿತಪ್ಪಿಯೂ ತೇಜಸ್ವಿ ಕುರಿತು ಒಂದೂ ಮಾತಾಡಿಲ್ಲ.

ತೇಜಸ್ವಿ ಪಕ್ಕಾ ಸಂಘದ ಉತ್ಪನ್ನ. ಸಂತೋಷ್ ಜಿ ಬಿಟ್ರೆ ಸೂರ್ಯನೆ ಟಿಪಿಕಲ್ ಸಂಘಿ ರಾಜಕಾರಣಿ. ತೇಜಸ್ವಿ ಸೂರ್ಯ ಪಿಯುಸಿ ದಿನಗಳಲ್ಲೇ ಎಂ ಎಲ್ ಎ – ಎಂ ಪಿ ಆಗ್ಬೇಕು ಅಂತ ಮಹತ್ವಾಕಾಂಕ್ಷೆ ಇಟ್ಕೊಂಡಿದ್ದ. ಅದಕ್ಕಾಗಿ ಸಂಘದ ಬೇರೆ ಹುಡುಗರನ್ನು ತುಳಿದು ಮೇಲೆ ಬರದಂತೆ ತಡೀತಿದ್ದ ಅನ್ನೋ ಆರೋಪವಿದೆ. ಸಂಘ ಪರಿವಾರದ ಸಿದ್ಧಾಂತಕ್ಕೆ ತಕ್ಕಂತೆ ಸುಳ್ಳೋ, ನಿಜವೋ ಅದನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುವುದರಲ್ಲಿ ಈತನಿಗಿದ್ದ ಸಾಮಥ್ರ್ಯದ ಆಧಾರದ ಮೇಲೆ ಬಿಜೆಪಿ ಸೋಶಿಯಲ್ ಮೀಡಿಯಾ ಜವಾಬ್ದಾರಿ ವಹಿಸಲಾಗಿತ್ತು. ಹಸಿ ಸುಳ್ಳುಗಳ ತಯಾರಿಕೆಯ ಆರೋಪದಲ್ಲಿ ಮಹೇಶ್ ವಿಕ್ರಮ ಹೆಗಡೆ ಜೈಲುಪಾಲಾದಾಗ ಆತನ ಪರವಾಗಿ ವಕೀಲಿಕೆ ಮಾಡಿದವನು ಇದೇ ತೇಜಸ್ವಿ ಸೂರ್ಯ.

ಈತನ ಮಾತು ಮಾತ್ರ ಸನಾತನ. ಜೀವನಶೈಲಿ ಮಾತ್ರ ಗಾಬರಿಯಾಗಬಹುದಾದಷ್ಟು ಆಧುನಿಕ. ವಿಲಾಸಿ, ಸ್ವೇಚ್ಛೆ. ಇವೆಲ್ಲಾ ಕಾರಣಗಳಿಂದ ಈತನನ್ನು ಕಂಡರೆ 50% ಬಿಜೆಪಿಗರಿಗೆ ಆಗಲ್ಲ. ಇನ್ನು 50% ಬಿಜೆಪಿಗರಿಗೆ ಅವನ್ಯಾರೆಂದೇ ಗೊತ್ತಿಲ್ಲ. ಬೆಂಗಳೂರಿನಲ್ಲಿ ಸರಿಯಾದ ಕಾರಣ ಸಿಗುವವರೆಗೂ ಪ್ರಚಾರ ಮಾಡುವುದಿಲ್ಲವೆಂದು ಈಗಾಗಲೇ ವಿ. ಸೋಮಣ್ಣ ಬಂಡಾಯವೆದ್ದಿದಾಗಿದೆ. ಆರ್.ಅಶೋಕ್‍ಗಂತೂ ಮುಂದೆ ಈತ ಗೆದ್ದರೆ ಈತನೆದುರು ತಾವು ಕೈ ಕಟ್ಟಿ ನಿಲ್ಲುವ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ತಯಾರಿಲ್ಲ. ಅದಕ್ಕಾಗಿ ಈ ಬಾರಿ ತೇಜಸ್ವಿ ಸೂರ್ಯನನ್ನು ಸೋಲಿಸಲು ಸೂಲಿಬೆಲೆ, ಸೋಮಣ್ಣ, ಅಶೋಕ್‍ಆದಿಯಾಗಿ ಎಲ್ಲರೂ ನಾ ಮುಂದು, ತಾ ಮುಂದು ಎಂದು ಪೈಪೋಟಿಗಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...