Homeಕರ್ನಾಟಕಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ - ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

"ಯಡಿಯೂರಪ್ಪನವರ ಜೊತೆ ನಿಮ್ಮ ಡೀಲ್ ಎಷ್ಟಕ್ಕೆ? ಎಷ್ಟು ಜನರನ್ನು ಮಾರಾಟಕ್ಕೆ ಇಟ್ಟಿದ್ದೀರಿ? ನೂರಕ್ಕೆ ನೂರು ಇದು ಡೀಲ್ ರಾಜಕಾರಣ"

- Advertisement -
- Advertisement -

ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಮತ ಹಾಕಿದ್ದು, ಈ ನಿರ್ಣಯದ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದಾರೆ. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಆಕ್ರೋಶ ಹೊರಹಾಕಿದ್ದಾರೆ.

ನಿನ್ನೆ ಮಧ್ಯಾಹ್ನದವರೆಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿದ್ದ ಜೆಡಿಎಸ್, ಸಂಜೆಯ ವೇಳೆಗೆ ತನ್ನ ನಿಲುವನ್ನು ಬದಲಿಸಿತ್ತು. ಹೀಗಾಗಿ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಕುಮಾರಸ್ವಾಮಿ ವಿರುದ್ಧ ಆಕ್ರೋಶಗೊಂಡಿವೆ.

ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನಗಳ ವಿರುದ್ಧ ಇಂದು ಬಾರುಕೋಲು ಚಳುವಳಿ ನಡೆಸಲು ಮುಂದಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳೊಂದಿಗೆ ಮಾತನಾಡಿ, “ಯಡಿಯೂರಪ್ಪನವರ ಜೊತೆ ನಿಮ್ಮ ಡೀಲ್ ಎಷ್ಟಕ್ಕೆ? ಎಷ್ಟು ಜನರನ್ನು ಮಾರಾಟಕ್ಕೆ ಇಟ್ಟಿದ್ದೀರಿ? ನೂರಕ್ಕೆ ನೂರು ಇದು ಡೀಲ್ ರಾಜಕಾರಣ” ಎಂದು ಕಿಡಿಕಾರಿದರು.

“ಭೂಸ್ವಾಧೀನ ಕಾಯ್ದೆ ಜಾರಿಗೆ ತಂದಿದ್ದು ಕುಮಾರಸ್ವಾಮಿ. ಕುಮಾರಸ್ವಾಮಿ ರೈತರ ಹೆಸರು ಹೇಳಿಕೊಂಡು ಅಚ್ಚುಕಟ್ಟಾಗಿ ಅಧಿಕಾರ ಅನುಭವಿಸಿದ್ದಾರೆ. ದೇವೇಗೌಡರು ಕರೆದು ಬುದ್ದಿ ಹೇಳಬೇಕಿತ್ತು. ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ. ಇದು ಕುಮಾರಸ್ವಾಮಿಯವರ ಕೊನೆಯ ರಾಜಕಾರಣ. ಅವರು ರೈತರ ಬಾಯಿಗೆ ಮಣ್ಣು ಹಾಕಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ಇನ್ನು ಸಿಎಂ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರಶೇಖರ್, “ಅವರ ವಾದ ಅವ್ರು ಬಿಡ್ತಿಲ್ಲ. ಅವರು ಅಂದುಕೊಂಡಿದ್ದನ್ನೇ ಮಾಡ್ತಿದಾರೆ ಸಿಎಂ. ಚಳವಳಿ ನಡೆಯುವಾಗಲೇ ಭೂಸುಧಾರಣಾ ಕಾಯ್ದೆ ಅಂಗೀಕಾರ ಯಾಕೆ ಮಾಡಿದ್ರು?” ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಬಹುಮತ ದೊರೆತು ಅಂಗೀಕಾರವಾಗಿದೆ. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಪಕ್ಷದ ಈ ನಡೆಯನ್ನು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, “ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...