Homeಕರ್ನಾಟಕಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ - ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ – ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

"ಯಡಿಯೂರಪ್ಪನವರ ಜೊತೆ ನಿಮ್ಮ ಡೀಲ್ ಎಷ್ಟಕ್ಕೆ? ಎಷ್ಟು ಜನರನ್ನು ಮಾರಾಟಕ್ಕೆ ಇಟ್ಟಿದ್ದೀರಿ? ನೂರಕ್ಕೆ ನೂರು ಇದು ಡೀಲ್ ರಾಜಕಾರಣ"

- Advertisement -
- Advertisement -

ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಮತ ಹಾಕಿದ್ದು, ಈ ನಿರ್ಣಯದ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದಾರೆ. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಆಕ್ರೋಶ ಹೊರಹಾಕಿದ್ದಾರೆ.

ನಿನ್ನೆ ಮಧ್ಯಾಹ್ನದವರೆಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿದ್ದ ಜೆಡಿಎಸ್, ಸಂಜೆಯ ವೇಳೆಗೆ ತನ್ನ ನಿಲುವನ್ನು ಬದಲಿಸಿತ್ತು. ಹೀಗಾಗಿ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಕುಮಾರಸ್ವಾಮಿ ವಿರುದ್ಧ ಆಕ್ರೋಶಗೊಂಡಿವೆ.

ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನಗಳ ವಿರುದ್ಧ ಇಂದು ಬಾರುಕೋಲು ಚಳುವಳಿ ನಡೆಸಲು ಮುಂದಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳೊಂದಿಗೆ ಮಾತನಾಡಿ, “ಯಡಿಯೂರಪ್ಪನವರ ಜೊತೆ ನಿಮ್ಮ ಡೀಲ್ ಎಷ್ಟಕ್ಕೆ? ಎಷ್ಟು ಜನರನ್ನು ಮಾರಾಟಕ್ಕೆ ಇಟ್ಟಿದ್ದೀರಿ? ನೂರಕ್ಕೆ ನೂರು ಇದು ಡೀಲ್ ರಾಜಕಾರಣ” ಎಂದು ಕಿಡಿಕಾರಿದರು.

“ಭೂಸ್ವಾಧೀನ ಕಾಯ್ದೆ ಜಾರಿಗೆ ತಂದಿದ್ದು ಕುಮಾರಸ್ವಾಮಿ. ಕುಮಾರಸ್ವಾಮಿ ರೈತರ ಹೆಸರು ಹೇಳಿಕೊಂಡು ಅಚ್ಚುಕಟ್ಟಾಗಿ ಅಧಿಕಾರ ಅನುಭವಿಸಿದ್ದಾರೆ. ದೇವೇಗೌಡರು ಕರೆದು ಬುದ್ದಿ ಹೇಳಬೇಕಿತ್ತು. ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡೋಕೆ. ಇದು ಕುಮಾರಸ್ವಾಮಿಯವರ ಕೊನೆಯ ರಾಜಕಾರಣ. ಅವರು ರೈತರ ಬಾಯಿಗೆ ಮಣ್ಣು ಹಾಕಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ಇನ್ನು ಸಿಎಂ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರಶೇಖರ್, “ಅವರ ವಾದ ಅವ್ರು ಬಿಡ್ತಿಲ್ಲ. ಅವರು ಅಂದುಕೊಂಡಿದ್ದನ್ನೇ ಮಾಡ್ತಿದಾರೆ ಸಿಎಂ. ಚಳವಳಿ ನಡೆಯುವಾಗಲೇ ಭೂಸುಧಾರಣಾ ಕಾಯ್ದೆ ಅಂಗೀಕಾರ ಯಾಕೆ ಮಾಡಿದ್ರು?” ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಬಹುಮತ ದೊರೆತು ಅಂಗೀಕಾರವಾಗಿದೆ. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಪಕ್ಷದ ಈ ನಡೆಯನ್ನು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, “ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...