Homeಕರ್ನಾಟಕಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

ಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

’ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ’

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟ ಪ್ರತಿಭಟನೆ ನಡೆಸಿತು.

ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಸಹಭಾಗಿ ಸಂಘಟನೆಗಳಾದ, ದ್ರಾವಿಡ ವಿಡುದಲೈ ಕಳಗಂ, ಮಾಕ್ಸ್ ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಪ್ರಜಾ ತಾಂತ್ರಿಕ ಜನರ ವೇದಿಕೆ, ಕರ್ನಾಟಕ ತಮಿಳು ಮಕ್ಕಳು ಇಯೆಕಂ, ಪ್ರಜಾ ವಿಮೋಚನ ಚಳುವಳಿ, ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ಜನ ಜಾಗೃತಿ ವೇದಿಕೆ, ಫ್ಯಾಂಥರ್ ಆಫ್ ಇಂಡಿಯಾ, ಭಾರತೀಯ ದಲಿತ ಪ್ಯಾಂಥರ್ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾ ವಿಮೋಚನಾ ಸಮಿತಿಯ ಮಧುರೆ ಮಾತನಾಡಿ, “ಕಾರ್ಪೋರೇಟ್ ಮಾಧ್ಯಮಗಳ ಸಹಾಯದಿಂದ ದೇಶಾದ್ಯಂತ ಕೋಮುವಾದವನ್ನು ಪ್ರಚೋದಿಸಿ ಕಾರ್ಪೋರೇಟ್ ಕಂಪನಿಗಳ ಹಣಬಲದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದೇಶದ ಎಲ್ಲಾ ಸಂಪನ್ಮೂಲಗಳನ್ನು ಕಾರ್ಪೋರೇಟ್ ಕಂಪನಿಗಳಿಗೆ ಧಾರೆ ಎರೆಯಲು ಅನೇಕ ಅನೇಕ ಜನ ವಿರೋಧಿ ಕಾಯಿದೆಗಳನ್ನು ಜಾರಿ ಮಾಡುತ್ತಿದೆ” ಎಂದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

“ಕಾರ್ಪೋರೇಟ್ ಶಕ್ತಿಗಳ ಅನುಕೂಲಕ್ಕಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ” ಎಂದು ಆರೋಪಿಸಿದರು.

ಕಾಯ್ದೆ ವಿರೋಧಿಸಿ ಕೆನಡಾ, ಇಂಗ್ಲೇಂಡ್, ಆಸ್ಟ್ರೇಲಿಯಾ, ಅಮೆರಿಕಾ ಮತ್ತು ಇತರೆ ದೇಶಗಳ ಜನರು ಈ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಮೇಲೆ ಸರ್ಕಾರ ನಡೆಸುತ್ತಿರುವ ದಮನಕಾರಿ ನೀತಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟಗಳ ಹಕ್ಕೊತ್ತಾಯಗಳು

1. ಮೂರು ಜನವಿರೋಧಿ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯಿದೆಗಳನ್ನು ರದ್ದುಗೊಳಿಸಬೇಕು.
2. ಸ್ವಾಮಿನಾಥನ್ ವರದಿಯನ್ನು ಅನುಷ್ಠಾನಗೊಳಿಸಬೇಕು.
3. ವಿದ್ಯುತ್ ತಿದ್ದುಪಡಿ ಕಾಯ್ದೆ-2020 ರದ್ದುಗೊಳಿಸಬೇಕು.
4. ಭೂ ಸುಧಾರಣಾ ತಿದ್ದುಪಡಿ ರದ್ದಾಗಬೇಕು.
5. ರೈತ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು.

ರಾಜ್ಯದಲ್ಲಿ ಇಂದು ಕೂಡ ಕರ್ನಾಟಕ ರಕ್ಷಣ ವೇದಿಕೆಯಿಂದ ಕಾಲ್ನಡಿಗೆ ಜಾಥಾ ನಡೆಸಿ ಕಾಯ್ದೆಗಳನ್ನು ವಿರೋಧಿಸಿತು. ಐಕ್ಯಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬಾರುಕೋಲು ಚಳವಳಿ ನಡೆಸಲಾಯಿತು. ನಾಳೆಯು ಕೂಡ ರಾಜಭವನ ಮುತ್ತಿಗೆ ಹಾಕಲಾಗುತ್ತದೆ ಎಂದು ಐಕ್ಯ ಹೋರಾಟ ವೇದಿಕೆ ಕರೆ ಕೊಟ್ಟಿದೆ.


ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ ಪವಾರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...