Homeಕರ್ನಾಟಕಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

ಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

’ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ’

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟ ಪ್ರತಿಭಟನೆ ನಡೆಸಿತು.

ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಸಹಭಾಗಿ ಸಂಘಟನೆಗಳಾದ, ದ್ರಾವಿಡ ವಿಡುದಲೈ ಕಳಗಂ, ಮಾಕ್ಸ್ ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಪ್ರಜಾ ತಾಂತ್ರಿಕ ಜನರ ವೇದಿಕೆ, ಕರ್ನಾಟಕ ತಮಿಳು ಮಕ್ಕಳು ಇಯೆಕಂ, ಪ್ರಜಾ ವಿಮೋಚನ ಚಳುವಳಿ, ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ಜನ ಜಾಗೃತಿ ವೇದಿಕೆ, ಫ್ಯಾಂಥರ್ ಆಫ್ ಇಂಡಿಯಾ, ಭಾರತೀಯ ದಲಿತ ಪ್ಯಾಂಥರ್ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾ ವಿಮೋಚನಾ ಸಮಿತಿಯ ಮಧುರೆ ಮಾತನಾಡಿ, “ಕಾರ್ಪೋರೇಟ್ ಮಾಧ್ಯಮಗಳ ಸಹಾಯದಿಂದ ದೇಶಾದ್ಯಂತ ಕೋಮುವಾದವನ್ನು ಪ್ರಚೋದಿಸಿ ಕಾರ್ಪೋರೇಟ್ ಕಂಪನಿಗಳ ಹಣಬಲದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದೇಶದ ಎಲ್ಲಾ ಸಂಪನ್ಮೂಲಗಳನ್ನು ಕಾರ್ಪೋರೇಟ್ ಕಂಪನಿಗಳಿಗೆ ಧಾರೆ ಎರೆಯಲು ಅನೇಕ ಅನೇಕ ಜನ ವಿರೋಧಿ ಕಾಯಿದೆಗಳನ್ನು ಜಾರಿ ಮಾಡುತ್ತಿದೆ” ಎಂದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

“ಕಾರ್ಪೋರೇಟ್ ಶಕ್ತಿಗಳ ಅನುಕೂಲಕ್ಕಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ” ಎಂದು ಆರೋಪಿಸಿದರು.

ಕಾಯ್ದೆ ವಿರೋಧಿಸಿ ಕೆನಡಾ, ಇಂಗ್ಲೇಂಡ್, ಆಸ್ಟ್ರೇಲಿಯಾ, ಅಮೆರಿಕಾ ಮತ್ತು ಇತರೆ ದೇಶಗಳ ಜನರು ಈ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಮೇಲೆ ಸರ್ಕಾರ ನಡೆಸುತ್ತಿರುವ ದಮನಕಾರಿ ನೀತಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟಗಳ ಹಕ್ಕೊತ್ತಾಯಗಳು

1. ಮೂರು ಜನವಿರೋಧಿ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯಿದೆಗಳನ್ನು ರದ್ದುಗೊಳಿಸಬೇಕು.
2. ಸ್ವಾಮಿನಾಥನ್ ವರದಿಯನ್ನು ಅನುಷ್ಠಾನಗೊಳಿಸಬೇಕು.
3. ವಿದ್ಯುತ್ ತಿದ್ದುಪಡಿ ಕಾಯ್ದೆ-2020 ರದ್ದುಗೊಳಿಸಬೇಕು.
4. ಭೂ ಸುಧಾರಣಾ ತಿದ್ದುಪಡಿ ರದ್ದಾಗಬೇಕು.
5. ರೈತ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು.

ರಾಜ್ಯದಲ್ಲಿ ಇಂದು ಕೂಡ ಕರ್ನಾಟಕ ರಕ್ಷಣ ವೇದಿಕೆಯಿಂದ ಕಾಲ್ನಡಿಗೆ ಜಾಥಾ ನಡೆಸಿ ಕಾಯ್ದೆಗಳನ್ನು ವಿರೋಧಿಸಿತು. ಐಕ್ಯಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬಾರುಕೋಲು ಚಳವಳಿ ನಡೆಸಲಾಯಿತು. ನಾಳೆಯು ಕೂಡ ರಾಜಭವನ ಮುತ್ತಿಗೆ ಹಾಕಲಾಗುತ್ತದೆ ಎಂದು ಐಕ್ಯ ಹೋರಾಟ ವೇದಿಕೆ ಕರೆ ಕೊಟ್ಟಿದೆ.


ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ ಪವಾರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...