Homeಚಳವಳಿಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರದ "ಹೊಸ" ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಖಂಡಿಸಿ, ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಮೋದಿ ಸರ್ಕಾರವು ಹಳೆಯ ಪ್ರಸ್ತಾಪಗಳನ್ನೇ ಹೊಸ ಬಟ್ಟೆ ಧರಿಸಿದಂತೆ ಮಾಡಿ ಅವುಗಳನ್ನೆ ಮತ್ತೆ ಕೊಟ್ಟಿದೆ. ಇವುಗಳನ್ನು ಎಲ್ಲಾ ರೈತ ಸಂಘಟನೆಗಳು ಒಮ್ಮತವಾಗಿ ತಿರಸ್ಕರಿಸಿವೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ AIKSCC ಹೇಳಿದೆ.

AIKSCC ಮತ್ತು ಎಲ್ಲಾ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಮತ್ತು ವಿದ್ಯತ್ ಕಾಯ್ದೆ 2020 ಅನ್ನು ರದ್ದುಗೊಳಿಸುವ ತಮ್ಮ ಬೇಡಿಕೆಯನ್ನು ಮತ್ತೆ ಸರ್ಕಾರದ ಮುಂದಿಡುತ್ತಿವೆ ಎಂದಿದೆ. ಜೊತೆಗೆ ಪ್ರತಿಭಟನೆಗೆ ದೆಹಲಿಯಲ್ಲಿ ಹೆಚ್ಚಿನ ರೈತರು ಸೇರಬೇಕು ಎಂದು ಕರೆ ನೀಡಿದೆ. ಇಲ್ಲವಾದಲ್ಲಿ ಎಲ್ಲಾ ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ರೈತ ಧರಣಿಗಳನ್ನುಪ್ರಾರಂಭಿಸಲು ಕರೆ ನೀಡಿದೆ.

ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಎಐಸಿಸಿಸಿಯ ರಾಷ್ಟ್ರೀಯ ಕಾರ್ಯನಿರತ ಸಂಘವು ಸಭೆ ಸೇರಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

೧. ಎಐಕೆಎಸ್‌ಸಿಸಿ ಕೇಂದ್ರ ಸರ್ಕಾರದ “ಹೊಸ” ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಅದನ್ನು ಖಂಡಿಸಿ, ತಿರಸ್ಕರಿಸಿದ್ದಾರೆ.

೨. ರೈತ ಸಂಘಟನೆ ಎಐಕೆಎಸ್‌ಸಿಸಿ ಮೋದಿ ಸರ್ಕಾರವನ್ನು ಬಹಿರಂಗ ಪಡಿಸಲು, ರಾಷ್ಟ್ರವ್ಯಾಪಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ (ಸರ್ಕಾರದ ನಿಜವಾದ ಅಸಹಾಯಕತೆ-ಅದಾನಿ, ಅಂಬಾನಿ, ಜಮಾಖೋರಿ) ಎಂಬ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

೩. ಎಐಕೆಎಸ್‌ಸಿಸಿ ಎಲ್ಲಾ ಜಿಲ್ಲೆಗಳು ಮತ್ತು ರಾಜ್ಯ ರಾಜಧಾನಿಗಳಲ್ಲಿ ನಿರಂತರ ರೈತ ಪ್ರತಿಭಟನೆ ಆಯೋಜಿಸಲು ರೈತ ಸಂಘಟನೆಗಳಿಗೆ ಕರೆ ನೀಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ರೈತರಿಗೆ ಬೆಂಬಲ ನೀಡುವ ಇತರ ಸಂಸ್ಥೆಗಳೊಂದಿಗೆ ಜಂಟಿಯಾಗಿ ಧರಣಿ ಆರಂಭಿಸಲು ಕರೆ ನೀಡಿದೆ.

೪. ಡಿಸೆಂಬರ್ 8 ರ ’ಭಾರತ್ ಬಂದ್’ ಜನಪ್ರಿಯ ರೈತರ ಪ್ರತಿಭಟನೆಯಾಗಿ ಯಶಸ್ವಿಯಾಗಿದೆ. ರೈತ ಸಂಘಟನೆ ಎಲ್ಲಾ ವರ್ಗದವರ ಬೆಂಬಲವನ್ನು ಅಭಿನಂದಿಸುತ್ತದೆ ಎಂದಿದೆ.

೫. ಭಾರತ್ ಬಂದ್‌ನಲ್ಲಿ ಸಾಮೂಹಿಕ ಭಾಗವಹಿಸುವಿಕೆಯನ್ನು ಗಮನಿಸಿದ ರೈತ ಸಂಘವು ಪ್ರತಿಭಟನೆ ತೀವ್ರಗೊಳಿಸಲು ದೆಹಲಿಗೆ “ಫಾರ್ಮರ್ಸ್ ಮಾರ್ಚ್” ಆಯೋಜಿಸಲು ಎಲ್ಲಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಕರೆ ನೀಡಿದೆ.

ಇನ್ನೂ, ಡಿಸೆಂಬರ್ 12 ರಂದು ಪ್ರತಿಭಟನೆ ನಡೆಸಿ ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ನಿರ್ಬಂಧಿಸುತ್ತೇವೆ ಎಂದು ಸಿಂಘ ಗಡಿಯಲ್ಲಿ ರೈತ ಮುಖಂಡರು ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...