Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...