Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...