Homeಮುಖಪುಟರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು - ಸಂಜಯ್ ರಾವತ್

- Advertisement -
- Advertisement -

ದೆಹಲಿಯಲ್ಲಿ ಹೋರಾಡುತ್ತಿರುವ ರೈತರಿಗೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ. ಅಲ್ಲಿಂದ ಹಣ ಸರಬರಾಜು ಆಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸಿಖ್‌ ಗುರುದ್ವಾರಗಳು ಮತ್ತು ಶಿವಸೇನೆ ತೀವ್ರ ರೀತಿಯಲ್ಲಿ ಪ್ರತಿಕ್ರಿಯಿಸಿವೆ. ಇದು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.

“ರೈತರ ಆಂದೋಲನದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ಇದ್ದರೆ, ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಇನ್ನು ಕೇಂದ್ರ ಸಚಿವರ ಈ ಹೇಳಿಕೆಯನ್ನು ದೆಹಲಿ ಸಿಖ್ ಗುರುದ್ವಾರ ಆಡಳಿತ ಮಂಡಳಿ ಖಂಡಿಸಿದೆ. “ರೈತರು ಹಲವು ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರ ಅವರಿಗೆ ನ್ಯಾಯ ಕೊಡಲು ವಿಫಲವಾಗಿದೆ. ದೇಶಕ್ಕಾಗಿ ಆಹಾರ ಬೆಳೆಯುವ ಮತ್ತು ತಮಗಾಗಿ ಹೋರಾಡುವ ರೈತರನ್ನು, ದೇಶಕ್ಕಾಗಿ ಪ್ರಾಣ ನೀಡುತ್ತಿರುವ ಅವರ ಮಕ್ಕಳನ್ನು ದೇಶದ್ರೋಹಿಗಳಂತೆ ಚಿತ್ರಿಸಬೇಡಿ” ಎಂದು ಆಡಳಿತ ಮಂಡಳಿ ಅಧ್ಯಕ್ಷ ಮಂಜಿಂಧರ್ ಸಿಂಗ್ ತಿಳಿಸಿದ್ದಾರೆ.

ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ಮಹಾರಾಷ್ಟ್ರದಲ್ಲಿ ಆರೋಗ್ಯ ಕೇಂದ್ರವೊಂದನ್ನು ಉದ್ಘಾಟನೆ ಮಾಡುವ ವೇಳೆ “ರೈತರ ಹೋರಾಟದ ಹಿಂದೆ ಕೆಲ ರಾಷ್ಟ್ರಗಳ ಪಿತೂರಿಯಿದೆ. ಈ ಹಿಂದೆ ಮುಸ್ಲಿಮರು ಸಹ ಸಿಎಎ, ಎನ್‌ಆರ್‌ಸಿ ಹೆಸರಿನಲ್ಲಿ ದೇಶವನ್ನು ದಿಕ್ಕುತಪ್ಪಿಸಲು ನೋಡಿದ್ದರು” ಎಂದು ಆರೋಪಿಸಿದ್ದರು.

ಇನ್ನು ನಿನ್ನೆ ನಡೆದ ರೈತರು-ಕೇಂದ್ರ ಸಚಿವರ ನಡುವಿನ ಸಭೆಯಲ್ಲಿ “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ” ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಡಿಸೆಂಬರ್ 08 ರಂದು ನಡೆದ ಭಾರತ್ ಬಂದ್ ಯಶಸ್ವಿಯಾಗಿದ್ದು ರೈತರ ಈಗ ಅಂಬಾನಿ ಅದಾನಿಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.


ಇದನ್ನೂ ಓದಿ; ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...