Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...