Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...