Homeನಿಜವೋ ಸುಳ್ಳೋಬಿರಿಯಾನಿಯ ಸುಳ್ಳು ಕಥೆಗಳು

ಬಿರಿಯಾನಿಯ ಸುಳ್ಳು ಕಥೆಗಳು

- Advertisement -
- Advertisement -

ಎರಡು ಬಿರಿಯಾನಿ ಕಥೆಗಳು ಸುದ್ದಿಯಲ್ಲಿವೆ. ಅದರಲ್ಲಿ ಒಂದು ಕಥೆಯು ಮತ್ತೆ ಮತ್ತೆ ಕೇಳಿ ಬರುತ್ತಿದ್ದು, ಎರಡು ದಿನಗಳ ಹಿಂದೆ ಸ್ವತಃ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ಮತ್ತು ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅದರ ಕುರಿತು ‘ದಿ ಕ್ವಿಂಟ್’ ವೆಬ್ ಪತ್ರಿಕೆಯು ವಿವರವಾದ ‘ಫ್ಯಾಕ್ಟ್ ಚೆಕ್’ ಮಾಡಿ ಸತ್ಯ ಸಂಗತಿ ತಿಳಿಸಿದ್ದಾರೆ. ಅದನ್ನು ಕೆಳಗೆ ನೀಡಲಾಗಿದೆ.

ಇನ್ನೊಂದು ಬಿರಿಯಾನಿ ಕಥೆ, ನರೇಂದ್ರ ಮೋದಿಯವರು ಆಹ್ವಾನವೇ ಇಲ್ಲದೇ ನವಾಜ್ ಷರೀಫ್ ಮನೆ ಮದುವೆಗೆ ಹೋಗಿ ಬಿರಿಯಾನಿ ತಿಂದರೆಂಬುದು. ಅದರ ಫ್ಯಾಕ್ಟ್ ಚೆಕ್ ನಾವು ಮಾಡಿದ್ದೇವೆ. ಅದನ್ನು ನಂತರ ತಿಳಿಸುತ್ತೇವೆ.

ಕ್ವಿಂಟ್‍ನ ವೆಬ್‍ಕೂಫ್‍ನಲ್ಲಿ ಬಂದದ್ದು.

ಷಾ ಮತ್ತು ಯೋಗಿ ಹೇಳುತ್ತಿರುವ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಯಿತು’ ಎಂಬುದು ಒಂದು ಸುಳ್ಳಿನ ಮೇಲೆ ಆಧರಿಸಿದ ಸುಳ್ಳು

ಮಾರ್ಚ್ 26ರಂದು ಉ.ಪ್ರದೇಶದ ಮೊರಾದಾಬಾದ್‍ನಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತಾಡಿದ ಬಿಜೆಪಿಯ ಅಧ್ಯಕ್ಷ ಕಾಂಗ್ರೆಸ್ & ಇತರ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ಮಾಡುತ್ತಾ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ ಕಾಲ ಹೋಯಿತು, ಈಗೇನಿದ್ದರೂ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೋದಿಯ ಕಾಲ’ ಎಂದು ಗುಡುಗಿದರು.

ಇದರ ಮೂಲ ಎಲ್ಲಿದೆ?

ವಾಸ್ತವದಲ್ಲಿ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ’ ಕಥೆ ಶುರುವಾಗುವುದು ಆಗಸ್ಟ್ 2009ರಲ್ಲಿ. 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ಅಜ್ಮಲ್ ಕಸಬ್‍ನ ವಿಚಾರಣೆ ನಡೆಯುತ್ತಿದ್ದಾಗ, ಪಿಟಿಐ ನ್ಯೂಸ್ ಏಜೆನ್ಸಿಯಿಂದ ಒಂದು ವರದಿ ಬಂದಿತು. ಆ ವರದಿಯನ್ನು ಇಂಡಿಯಾ ಟುಡೇ ಸೇರಿದಂತೆ ಹಲವರು ತಮ್ಮಲ್ಲೂ ಹಾಕಿಕೊಂಡರು. ಅದರಲ್ಲಿ ಕಸಬ್ ತನಗೆ ಮಟನ್ ಬಿರಿಯಾನಿ, ಬಾಸ್ಮತಿ ಅನ್ನ ಬೇಕೆಂದು ಕೇಳಿದನೆಂತಲೂ, ಅದನ್ನು ಪೂರೈಸಲಾಯಿತೆಂತಲೂ ಹೇಳಲಾಗಿತ್ತು. ಈ ಮಾತನ್ನು ಹೇಳಿದವರು, ಆ ಕೇಸಿನ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ. ಆ ವಿಚಾರಣೆಯ ನಂತರ ಆತ ತಪ್ಪಿತಸ್ಥೆನೆಂದು ಸಾಬೀತಾಯಿತು. ಮತ್ತು ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಯಿತು.

ಅಲ್ಲಿಂದ ಶುರುವಾಯಿತು ಬಿರಿಯಾನಿ ಕಥೆ

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಿರಿಯಾನಿಯ ಕಥೆಯನ್ನು ಹಲವು ಸಾರಿ ಹೇಳಿದ್ದಾರೆ. ಮಾರ್ಚ್ 26ರಂದು ಗೋರಖ್‍ಪುರದಲ್ಲಿ ಇನ್ನು ಹೇಳಿದ್ದಾರೆ, ಸಹ್ರಾನ್‍ಪುರದಲ್ಲಿ ಮಾರ್ಚ್ 24ರಂದು ನಡೆದ ರ್ಯಾಲಿಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ‘ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿತ್ತು, ಮೋದಿ ಸರ್ಕಾರ ಬುಲೆಟ್, ಬಾಂಬುಗಳನ್ನು ತಿನ್ನಿಸಿದೆ’.

ನವೆಂಬರ್ 2018ರಲ್ಲೂ ರಾಜಸ್ತಾನದ ಮಕ್ರಾನಾದಲ್ಲಿ ನಡೆದ ಸಭೆಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ಆಗಸ್ಟ್ 2012ರಲ್ಲಿ ಬಿಜೆಪಿ ನಾಯಕ ಮುಕ್ತಾರ್ ನಕ್ವಿ ಸಹಾ ಇದೇ ಮಾತನ್ನು ಹೇಳಿ, ‘ಬಿರಿಯಾನಿ ತಿನ್ನಿಸಿದ್ದು ಸಾಕು, ಬೇಗನೇ ಗಲ್ಲಿಗೇರಿಸಬೇಕು’ ಎಂದಿದ್ದರು.

ವಾಸ್ತವವೇನು?

ಮಾರ್ಚ್ 2015ರಲ್ಲಿ ಉಜ್ವಲ್ ನಿಕಮ್ ಅವರು ವರದಿಗಾರರಿಗೆ (ಟೈಮ್ಸ್ ಆಫ್ ಇಂಡಿಯಾದಲ್ಲಿ ವಿವರವಾಗಿ ಪ್ರಕಟಗೊಂಡಿದೆ) ಹೇಳಿದ ಮಾತು ಏನಿತ್ತು ನೋಡೋಣ. ‘ಕಸಬ್‍ನ ಪರವಾಗಿ ಒಂದು ಭಾವನಾತ್ಮಕ ಅಲೆ ಏಳುತ್ತಿದೆಯೆಂದು ನನಗೆ ಅನ್ನಿಸಿತು. ರಕ್ಷಾಬಂಧನದ ದಿನ ಆತನ ಕಣ್ಣುಗಳಲ್ಲಿ ನೀರಿತ್ತು ಎಂದೆಲ್ಲಾ ಪತ್ರಕರ್ತರು ಬರೆಯುತ್ತಿದ್ದರು. ಆಗ ನಾನು ಆತ ಬಿರಿಯಾನಿ ಕೇಳಿದನೆಂದೂ, ಅದನ್ನು ಒದಗಿಸಲಾಗಿದೆಯೆಂದೂ ಒಂದು ಸುಳ್ಳನ್ನು ಹರಿಯಬಿಟ್ಟೆ. ಅವತ್ತು ಅದರ ಅಗತ್ಯವಿತ್ತೆಂದು ನನಗನ್ನಿಸಿತು’

ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ‘ಅವರಿಗೆ ಬಿರಿಯಾನಿಯೇಕೆ ಉಣ್ಣಿಸಬೇಕು?’ ಎಂಬ ಟೈಟಲ್ ಜೊತೆಗೆ ಬಂದ ವರದಿಯು ಸಾರ್ವಜನಿಕ ವಲಯದಲ್ಲಿ ಸಿಟ್ಟೆಬ್ಬಿಸುತ್ತು. ಉಜ್ವಲ್ ನಿಕಂರ ಈ ಹೇಳಿಕೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಸ್ಪಷ್ಟೀಕರಣ ಕೇಳಿತ್ತೆಂದು ಹೇಳಲಾಗುತ್ತಿದೆ. ಇದೊಂದು ಸುಳ್ಳು ಕಥೆಯಾಗಿತ್ತು.

ಇನ್ನು ಎರಡನೇ ಸುಳ್ಳು ಬಿರಿಯಾನಿ ಕಥೆ.

ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ನವಾಜ್ ಷರೀಫ್‍ರ ಹುಟ್ಟು ಹಬ್ಬದ ದಿನ ಲಾಹೋರಿನ ಅವರ ಮನೆಗೆ ಭೇಟಿ ಕೊಟ್ಟಾಗ ಬಿರಿಯಾನಿ ತಿಂದುಬಂದರೆಂಬುದು. ಇದೂ ಸುಳ್ಳು. ನರೇಂದ್ರ ಮೋದಿಯವರು ಸಸ್ಯಾಹಾರಿಯಾಗಿದ್ದು, ಅವರು ಬಿರಿಯಾನಿ ತಿಂದಿಲ್ಲ. ಅಂದು ನವಾಜ್ ಷರೀಫ್‍ರ ಮನೆಯಲ್ಲಿ ಮೋದಿಯವರಿಗೆ ಅವರ ಇಷ್ಟದ ಸಾಗ್, ದಾಲ್ ಅನ್ನು ಬಡಿಸಲಾಗಿತ್ತು. ಷರೀಫ್‍ರ ಮನೆಗೆ ಅಂದು ಮೋದಿಯವರ ಜೊತೆಗೆ ಬಂದಿದ್ದ 11 ಜನರಿಗೆ ಅಲ್ಲಿ ಈ ತಿನಿಸನ್ನು ಶುದ್ಧ ತುಪ್ಪದಿಂದ ಮಾಡಿ ಬಡಿಸಲಾಯಿತೆಂದು ಅವರ ಮನೆ ಜಾತಿ-ಉಮ್ರ್‍ನ ಮೂಲಗಳು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

https://food.ndtv.com/food-drinks/pm-modis-favourite-dish-served-at-pakistani-pm-nawaz-sharifs-home-1259189http://

ಮೋದಿಯವರು ನವಾಜ್ ಷರೀಫ್‍ರ ಮನೆಗೆ ಹೋಗಿದ್ದು ನಿಜ, ಅಲ್ಲಿ ಅವರಿಗಿಷ್ಟವಾದ ತಿಂಡಿಯನ್ನು ಮಾಡುವಷ್ಟು ಪೂರ್ವನಿರ್ಧಾರಿತವಾಗಿ ಆ ಭೇಟಿ ಇದ್ದಿತ್ತು. ಆದರೆ ಬಿರಿಯಾನಿ ತಿನ್ನಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...