Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...