Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...