Homeಕರ್ನಾಟಕಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಕಳೆದ ಇಲೆಕ್ಷನ್‌ನಲ್ಲಿ ಶೇಕಡಾ 80ರಷ್ಟು ಗ್ರಾಮ ಪಂಚಾಯತ್ ಪಾರುಪತ್ಯ ನಡೆಸಿದ್ದ ಕಾಂಗ್ರೆಸ್ ಈ ಬಾರಿ ಶೇ.50ರಷ್ಟು ಗೆಲ್ಲುವುದೂ ಅನುಮಾನ. ಬಿಜೆಪಿಯ ಆಕ್ರಮಣಶೀಲ ಧರ್ಮಕಾರಣದೆದುರು ಕಾಂಗ್ರೆಸ್ ಚೇತರಿಸಿಕೊಳ್ಳುವುದು ಕಷ್ಟ.

- Advertisement -
- Advertisement -

ಉತ್ತರ ಕನ್ನಡದ ಗ್ರಾಮಾಂಗಣಗಳಲ್ಲೀಗ ತರಹೇವಾರಿ “ಕಂಟ್ರಿ ಪಾಲಿಟಿಕ್ಸ್” ಶುರುವಿಟ್ಟುಕೊಂಡಿದೆ! ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ‘ಹಣಾ’ಹಣಿ ನಡೆಯುತ್ತಿರುವಂತೆ ಮೇಲ್ನೋಟಕ್ಕೆ ಭಾಸವಾಗುತ್ತದೆ. ಆದರೆ, ಮತ್ತೊಂದು ಕೋನದಿಂದ ಯುದ್ಧ ಭೂಮಿಯತ್ತ ಕಣ್ಣು ಹಾಯಿಸಿದರೆ ಆಧಿಕಾರ ಬಲ, ಧರ್ಮ ಕಾರಣದ ಹಿಕಮತ್ತು ಕರಗತ ಮಾಡಿಕೊಂಡಿರುವ ಆಳುವ ಬಿಜೆಪಿಗೆ ಎದುರಾಳಿಯೇ ಇಲ್ಲವೇನೊ ಅನ್ನಿಸುತ್ತದೆ! ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕಾಗ್ರೇಸರು ಗ್ರಾಪಂ, ಮುಸ್ಸಿಪಾಲಿಟಿ ಮಟ್ಟಕ್ಕೆ ಇಳಿದಿರುವ ಈ ಕಾಲಮಾನದಲ್ಲಿ ಎದುರಾಗಿರುವ ಗ್ರಾಪಂ ಚುನಾವಣೆ ಎರಡು ಕಾರಣಕ್ಕೆ ಕುತೂಹಲ ಕೆರಳಿಸಿದೆ!

ಒಂದು, ಗ್ರಾಪಂಗಳಿಗೆ ಕಡು ಕೇಸರಿ ಬಣ್ಣ ಬಳಿಯುವ ಪಕ್ಕಾ ಪ್ಲಾನು ಹಾಕಿಕೊಂಡಿರುವ ಸಂಘಪರಿವಾರದ ಹಿಂದುತ್ವದ ಅಂತರ್ಜಾಲ ಅತಿ ಸಕ್ರಿಯವಾಗಿರುವುದು. ಮತ್ತೊಂದು, ಈ ಗ್ರಾಪಂ ಚುನಾವಣೆ ನಡೆದು ಇನ್ನೆರಡು ವರ್ಷದಲ್ಲಿ ಬರಲಿರುವ ಅಸೆಂಬ್ಲಿ ಇಲೆಕ್ಷನ್‌ನ ದಿಕ್ಸೂಚಿ ಎಂಬಂತಾಗಿರುವುದು. ಒಂದಂತೂ ಖರೆ – ಹದಗೊಳ್ಳುತ್ತಿರುವ ಅಖಾಡ ಉತ್ತರಕನ್ನಡದ ರಾಜಕೀಯ ಸಮೀಕರಣ ಬದಲಿಸುತ್ತಿದೆ; ಬಿಜೆಪಿ-ಕಾಂಗ್ರೆಸ್ ಒಳಗಿನ ಆಯಕಟ್ಟಿನಲ್ಲಿ ಗಮನಾರ್ಹ ಬದಲಾವಣೆ ತರುವ ಎಲ್ಲ ಸಂಕೇತಗಳೂ ಸ್ಪಷ್ಟವಾಗುತ್ತಿದೆ. ಹಳ್ಳಿಗಳ ರಸ್ತೆ, ಶಾಲೆ, ಕರೆಂಟು ಮುಂತಾದ್ದೆಲ್ಲ ಎಂಪಿ ಮಟ್ಟದ್ದಲ್ಲ; ಅದೆಲ್ಲ ಏನಿದ್ದರೂ ಎಂಎಲ್‌ಎ ಸರಿಪಡಿಸಬೇಕು. ಎಂಪಿ ಸಾಹೇಬರು ದಿಲ್ಲಿಯಲ್ಲಿ ಕುಂತು ಸಂವಿಧಾನ ಬದಲಿಸುವುವವರು ಎಂದು ದೊಡ್ಡಸ್ತಿಕೆ ಪ್ರವರ ಪ್ರದರ್ಶಿಸುತ್ತಿದ್ದ ಸಂಸದ ಅನಂತ ಹೆಗಡೆಯೂ ಈ ಸಲ ಗ್ರಾಮಗಳ ಸಣ್ಣ ಲೆವೆಲ್‌ನ ರಾಜಕೀಯಕ್ಕೆ ಇಳಿದಿದ್ದಾರೆ.

ಬಿಜೆಪಿ ಹಳ್ಳಿಗಳ ಆಡಳಿತ ವಶಪಡಿಸಿಕೊಳ್ಳಲು ವ್ಯವಸ್ಥಿತ ಕಾರ್ಯಾಚರಣೆ ಆರಂಭಿಸಿರುವಾಗ ಎದುರಾಳಿ ಕಾಂಗ್ರೆಸ್ ಉಮೇದುದಾರರಿಗಾಗಿ ತಡಕಾಡುತ್ತಿದೆ. ದೇಶಪಾಂಡೆ ಮತ್ತು ಮಾರ್ಗರೆಟ್ ಆಳ್ವರ ಭಸ್ಮಾಸುರ ಮೇಲಾಟದಿಂದ ಇಡೀ ಪಕ್ಷವೀಗ ಬರಡಾಗಿಹೋಗಿದೆ! ಆದರೂ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಎಂಎಲ್‌ಎಯಾಗುವ ಆಸೆಯಿಟ್ಟುಕೊಂಡಿರುವ ಮಾಜಿ ಶಾಸಕರು ಮಣ್ಣು ರಸ್ತೆಯಲ್ಲಿ “ಮಣ್ಣು” ಹೊರುತ್ತಿದ್ದಾರೆ. ಬಿಜೆಪಿಯ ಹಾಲಿ ಶಾಸಕರು ತಮ್ಮ ಹಿಡಿತ ಹಳ್ಳಿಗಳಲ್ಲಿ ಬಿಗಿಮಾಡಿಕೊಂಡರೆ ಮತ್ತೆ ಟಿಕೆಟ್ ಕ್ಲೇಮ್ ಮಾಡಬಹುದೆಂಬ ಲೆಕ್ಕಾಚಾರದಲ್ಲಿ ಹಳ್ಳಿಗಾಡಿನಲ್ಲಿ ಬೆವರಿಳಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜಿಲ್ಲೆಯಲ್ಲಿ ಸುತ್ತು ಹೊಡೆದು ಹೋಗಿದ್ದಾರೆ.

ಉತ್ತರಕನ್ನಡದಲ್ಲಿ ಒಟ್ಟು 231 ಗ್ರಾಪಂಗಳಿವೆ. 8,65,329 ಮತದಾರರಿದ್ದಾರೆ. ಕರಾವಳಿಯ ಐದು ತಾಲ್ಲೂಕುಗಳ 105 ಗ್ರಾಪಂಗಳಿಗೆ ಡಿ.22 ರಂದು ಮತದಾನ; ಗಟ್ಟದ ಮೇಲಿನ ಏಳು ತಾಲ್ಲೂಕುಗಳ 126 ಗ್ರಾಪಂ ರಚನೆಗೆ ಡಿ.27 ರಂದು ಜನಾದೇಶ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಪಕ್ಷದ ಚಿನ್ಹೆಗಳ ಮೇಲೆ ಚುನಾವಣೆ ನಡೆಯದಾದರೂ ಅತೀ ಹೆಚ್ಚು ಜವಾರಿ ಜಗಳವನ್ನು ಮಾಜಿ-ಹಾಲಿ ಎಮ್ಮೆಲ್ಲೆಗಳು, ಎಂಪಿ, ಮಂತ್ರಿಗಳು ಹುಟ್ಟುಹಾಕಿ ತಾಕತ್ತು ತೋರಿಸಲು ಹವಣಿಸುತ್ತಿದ್ದಾರೆ. ಐದಾರು ತಿಂಗಳಲ್ಲಿ ಬರಲಿರುವ ತಾಪಂ ಮತ್ತು ಜಿಪಂ ಹೋರಾಟಕ್ಕೆ ರಣವೀಳ್ಯ ಕೊಡುವಂತಿದೆ. ಸದರಿ ಗ್ರಾಪಂ ಇಲೆಕ್ಷನ್ ಮೂಲಕ ಹಳ್ಳಿಗಳಲ್ಲಿ ಬಿಜೆಪಿ ನೆಲೆಯನ್ನು ಮಜಬೂತು ಮಾಡಿಕೊಂಡರೆ ವಲಸಿಗ ಶಾಸಕರ ಹಂಗಿರುವುದಿಲ್ಲ ಎಂಬ ಕರಾರುವಾಕ್ ಲೆಕ್ಕಾಚಾರ ಆರ್‌ಎಸ್‌ಎಸ್ ತಂತ್ರಗಾರರದು.

ಕಳೆದ ಅಸೆಂಬ್ಲಿ ಇಲೆಕ್ಷನ್‌ನಲ್ಲಿ ಕರಾವಳಿಯಲ್ಲಿ ಗೆದ್ದ ಬಿಜೆಪಿಯ ಮೂರು ಶಾಸಕರು ಮೂಲ ಸಿದ್ಧಾಂತದವರಲ್ಲ. ಇವರೆಲ್ಲ ವಲಸಿಗರು. ಇಲೆಕ್ಷನ್ ಹತ್ತಿರ ಬಂದಾಗಲೇ ನಿಗೂಢವಾಗಿ ಸತ್ತುಹೋದ ಹೊನ್ನಾವರದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಸಂಘಪರಿವಾರ ಹುಟ್ಟು ಹಾಕಿದ ಹಿಂದುತ್ವದ ಹುಚ್ಚು ಅಲೆಯೇರಿ ದಡ ತಲುಪಿದವರು. ಇವರಿಂದ ಪಾರ್ಟಿ ಬೆಳೆಯುತ್ತದೆ ಮತ್ತು ಇವರೆಲ್ಲ ಮತ್ತೆ ಗೆಲ್ಲುತ್ತಾರೆಂಬ ನಂಬಿಕೆ ಸಂಘ ಪರಿವಾರದ ಕಟ್ಟರ್ ಸರದಾರರಿಗಿಲ್ಲ. ಈಗಾಗಲೇ ಕಾರವಾರದ ರೂಪಾಲಿನಾಯ್ಕ್ ಮತ್ತು ಭಟ್ಕಳದ ಸುನೀಲ್ ನಾಯ್ಕ್ರನ್ನು ಅನ್‌ಪಾಪ್ಯುಲರ್ ಮಾಡುವ ಮಸಲತ್ತು ನಡೆದಿದೆ. ಕುಮಟೆಯ ಸಣ್ಣ ಗಾಣಿಗ ಜಾತಿಯ ದಿನಕರ ಶೆಟ್ಟಿಯ ದುಡ್ಡಿನ ವ್ಯಾಮೋಹಕ್ಕೆ ಹೆದರಿ ಬಹುಸಂಖ್ಯಾತ ಬ್ರಾಹ್ಮಣ ಅಥವಾ ಕೊಂಕಣಿ ಒಬ್ಬನಿಗೆ ಟಿಕೆಟ್ ಕೊಡುವ ನಿರ್ಧಾರ ಸಂಘ ಪರಿವಾರದ ಬೈಠಕ್‌ನಲ್ಲಿ ಅದೆಂದೋ ತೀರ್ಮಾನ ಆಗಿಹೋಗಿದೆ!!

ಆಪರೇಷನ್ ಕಮಲ ಮಾಡಿಕೊಂಡ ಹದಿನೇಳು ಅನರ್ಹ ಶಾಸಕರ ತಂಡದಲ್ಲಿರುವ ಯಲ್ಲಾಪುರದ ಮಂತ್ರಿ ಶಿವರಾಮ ಹೆಬ್ಬಾರ್ ಬಿಜೆಪಿಯಲ್ಲಿ ಯಡಿಯೂರಪ್ಪನವರ ಯುಗ ಮುಗಿದ ನಂತರ ನೆಲೆ-ಬೆಲೆ ಕಳೆದುಕೊಳ್ಳುತ್ತಾರೆಂಬುದು ಯಲ್ಲಾಪುರದ ಕಾಳಮ್ಮದೇವಿಗೂ ಪಕ್ಕಾ ಆಗಿಹೋಗಿದೆ!! ಸ್ಪೀಕರ್ ಕಾಗೇರಿಯವರನ್ನು ಶಿರಸಿ ಶಾಸಕನ ಸೀಟಿಂದ ಎಳೆದುಹಾಕಿ ತಾನು ಅಲ್ಲಿ ಕುಳಿತುಕೊಳ್ಳುವ ಕನಸು ಹಲವು ದಿನದಿಂದ ಕಾಣುತ್ತಿರುವ ಸಂಸದ ಅನಂತ್ ಹೆಗಡೆ ಈ ಗ್ರಾಪಂ ಇಲೆಕ್ಷನ್‌ನಿಂದ ಆ ಗುರಿ ಈಡೇರಿಸಿಕೊಳ್ಳು ಸ್ಕೆಚ್ ಹೆಣೆದಿದ್ದಾರೆ. ಬಿಜೆಪಿಗೆ ನೆಲೆಯಿಲ್ಲದ ಹಳಿಯಾಳದಲ್ಲಿ ಕಾಂಗ್ರೆಸ್‌ನ ಹಳೆ ಹುಲಿ ಆರ್.ವಿ ದೇಶಪಾಂಡೆ ಮತ್ತು ಅವರೇ ಸಾಕಿಸಲುಹಿ ಎರಡು ಬಾರಿ ಎಂಎಲ್‌ಸಿ ಮಾಡಿರುವ ಎಸ್.ಎಲ್ ಘೋಟನೇಕರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. 1983ರಿಂದ ಒಮ್ಮೆ ಮಾತ್ರ ಸೋತಿರುವ ದೇಶಪಾಂಡೆಗೆ ರಾಜಕೀಯ ನಿವೃತ್ತಿ ಕೊಡಿಸಿ ಹಳಿಯಾಳದ ಎಂಎ¯ ಎಯಾಗುವ ಯೋಚನೆ ಘೋಟನೇಕರ್ ಮಾಡುತ್ತಿದ್ದಾರೆ.

ಬೆಂಗಳೂರು ಮಟ್ಟದ ರಾಜಕಾರಣಿಯಾಗಿರುವ ದೇಶಪಾಂಡೆ ಅಮವಾಸ್ಯೆಗೊಮ್ಮೆ ಹುಣ್ಣಿಮೆಗೊಮ್ಮೆ ಕ್ಷೇತ್ರಕ್ಕೆ ಬಂದು ಹೋಗುತ್ತಿದ್ದಾರೆ. ಘೋಟನೇಕರ್ ಜನರ ನಡುವೆ ಓಡಾಡಿಕೊಂಡಿದ್ದಾರೆ. ಬಹುಸಂಖ್ಯಾತ ಮರಾಠ ಕೋಮಿನ ಘೋಟನೇಕರ್ ಅವರ ಆಟ ಅರಿತಿರುವ ದೇಶಪಾಂಡೆ, ಅವರಿಗೆ ಮೂಗುದಾರ ಹಾಕಲು ನೋಡುತ್ತಿದ್ದಾರೆ. ಗ್ರಾಪಂ ಇಲೆಕ್ಷನ್‌ನಲ್ಲಿ ಹಳಿಯಾಳದ ಉಸ್ತುವಾರಿಯಾಗಿ ಕ್ಷೇತ್ರದಲ್ಲಿ ಭಾವಿ ಶಾಸಕನ ಗೆಟಪ್ ಪ್ರದರ್ಶಿಸಲು ಹೊರಟ ಘೋಟೇಕರ್‌ಗೆ ದೇಶಪಾಂಡೆ ಪಕ್ಕದ ಯಲ್ಲಾಪುರ ಕ್ಷೇತ್ರಕ್ಕೆ ಸಾಗಾಕಿಸಿದ್ದಾರೆ. ಹೆಬ್ಬಾರ್ ಕಾಂಗ್ರೆಸ್‌ನಲ್ಲಿದ್ದಷ್ಟು ದಿನ ಆತನೊಂದಿಗೆ ಸೇರಿ ತನ್ನನ್ನ ಕಾಡಿದ ಘೋಟನೇಕರ್‌ನನ್ನು ಈಗ ಹೆಬ್ಬಾರ್‌ನ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಮಾಡಿ ದೇಶಪಾಂಡೆ ಪರಿಣಾಮಗಳಿಗಾಗಿ ಕಾದಿದ್ದಾರೆ. ಮರಾಠರು ಹೆಚ್ಚಿರುವ ಯಲ್ಲಾಪುರ, ಮುಂಡಗೋಡಲ್ಲಿ ಗೆಳೆಯ ಹೆಬ್ಬಾರ್ ಎದುರು ಸ್ಪರ್ಧಿಸುವ ಹಾಗೆ ಮಾಡಿ ಘೋಟನೇಕರ್‌ನ ಇಕ್ಕಟ್ಟಿಗೆ ಸಿಲುಕಿಸಲು ದೇಶಪಾಂಡೆ ಯೋಚನೆ ಹಾಕಿದ್ದಾರೆ!!

ಕಾರವಾರ ಮತ್ತು ಭಟ್ಕಳದಲ್ಲಿ ಅಲ್ಲಿನ ಮಾಜಿ ಶಾಸಕರಾದ ಸತೀಶ್ ಸೈಲ್ ಹಾಗೂ ಮಂಕಾಳ ವೈದ್ಯರಿಗೆ ಕಾಂಗ್ರೆಸ್ ಗೆಲ್ಲಿಸುವ ಹೊಣೆಗಾರಿಕೆ ಕೊಡಲಾಗಿದೆ. ಮತ್ತೆ ಶಾಸಕರಾಗುವ ಹಠದಲ್ಲಿರುವ ಈ ಇಬ್ಬರೂ ತಂತಮ್ಮ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಗೆ ಪ್ರಬಲ ಮುಖಾಮುಖಿಯಾಗುವುದು ಖಂಡಿತ! ಮಾಜಿ ಶಾಸಕಿ ಶಾರದಾ ಶೆಟ್ಟಿಯವರಿಗೆ ಕುಮಟೆಯ ಉಸ್ತುವಾರಿ ತಪ್ಪಿಸಿರುವುದರ ಹಿಂದೆ ಆಕೆಯ ಹಿತಶತ್ರು ದೇಶಪಾಂಡೆಯವರ ಕುತಂತ್ರವಿದೆ ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿದೆ. ಇನ್ನೊಂದು ಊಹಾಪೋಹದಂತೆ ತನ್ನ ಆಪ್ತ ವಲಯದಲ್ಲಿರುವ ಶಾರದಾ ಶೆಟ್ಟಿಯವರಿಗೆ ಕ್ಷೇತ್ರವನ್ನು ಹದಮಾಡಿಸಲು, ಡಿಕೆಶಿ ಉಪಾಯವಾಗಿ ದೇಶಪಾಂಡೆಯವರನ್ನು ಕುಮಟಾದಲ್ಲಿ ಬಿಟ್ಟಿದ್ದಾರಂತೆ. ದೇಶಪಾಂಡೆಯವರು ಕುಮಟಾ ಕ್ಷೇತ್ರದ ಬಹುಸಂಖ್ಯಾತ ಬ್ರಾಹ್ಮಣ ಸಮುದಾಯದ ತಮ್ಮ ಶಿಷ್ಯ ಶಿವಾನಂದ ಹೆಗಡೆಯವರಿಗೆ ಮುಂದಿನ ಟಿಕೆಟ್ ಕೊಡಿಸಲು ಯೋಚಿಸಿದ್ದಾರಂತೆ. ಹಾಗೊಮ್ಮೆ ಬ್ರಾಹ್ಮಣರಿಗೆ ಟಿಕೆಟ್ ಕೊಡಬೇಕೆಂದಿದ್ದರೆ ಮಧು ಬಂಗಾರಪ್ಪ ಜತೆ ಕಾಂಗ್ರೆಸ್‌ಗೆ ಬರಲು ಸಿದ್ಧವಾಗಿರುವ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆಯೇ ಗಟ್ಟಿ ಹುರಿಯಾಳೆಂದು ದೇಶಪಾಂಡೆ ವಿರೋಧಿ ಬ್ರಾಹ್ಮಣ ಬಣ ವಾದ ಮಂಡಿಸುತ್ತಿದೆ.

ಸಣ್ಣ-ಸಣ್ಣ ಅಂತರದಲ್ಲಿ ಎರಡು ಬಾರಿ ಬಿಜೆಪಿಯಿಂದ ಕುಮಟೆಯಲ್ಲಿ ಮತ್ತು ಎರಡು ಬಾರಿ ಜೆಡಿಎಸ್‌ನಿಂದ ಶಿರಸಿಯಲ್ಲಿ ಸೋತಿರುವ ಶಶಿಭೂಷಣ ಕಾಂಗ್ರೆಸ್ ಕ್ಯಾಂಡಿಡೇಟಾದರೆ ಎರಡೂ ಕಡೆ ಗೆಲ್ಲಬಲ್ಲ ಬುದ್ಧಿವಂತ-ಜನಪರ ತರುಣ. ಬಹಳ ವರ್ಷದಿಂದ ಶಿರಸಿಯಲ್ಲಿ ದರಬಾರು ಮಾಡಿಕೊಂಡಿರುವ ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್ ಅವರಿಗೆ ರೆಸ್ಟ್ ನೀಡಲಾಗಿದೆ. ಇದು ಡಿಕೆಶಿಗೆ ತೀರಾ ಸನಿಹದಲ್ಲಿರುವ ಶಿರಸಿ ಮೂಲದ ಬೆಂಗಳೂರು ನಿವಾಸಿ ಸುಷ್ಮಾ ಹೊನ್ನಾವರ(ರೆಡ್ಡಿ) ಪ್ರಭಾವದಿಂದಾದದ್ದೆಂದು ಕಾಂಗ್ರೆಸ್‌ನಲ್ಲಿ ಗೊಣಗಾಟ ನಡೆದಿದೆ. ಮಾರ್ಗರೇಟ್ ಆಳ್ವ ಬಣದ ಸುಷ್ಮಾರೆಡ್ಡಿ ಹಣವಂತ ಮಹಿಳೆ. ಶಿರಸಿಯಿಂದ ಶಾಸಕಿಯಾಗುವ ತಯಾರಿಯಲ್ಲಿ ಆಕೆ ಈಗಾಗಲೇ ಓಡಾಟ ಆರಂಭಿಸಿದ್ದಾರೆ.

ಕಳೆದ ಇಲೆಕ್ಷನ್‌ನಲ್ಲಿ ಶೇಕಡಾ 80ರಷ್ಟು ಗ್ರಾಮ ಪಂಚಾಯತ್ ಪಾರುಪತ್ಯ ನಡೆಸಿದ್ದ ಕಾಂಗ್ರೆಸ್ ಈ ಬಾರಿ ಶೇ.50ರಷ್ಟು ಗೆಲ್ಲುವುದೂ ಅನುಮಾನ. ಬಿಜೆಪಿಯ ಆಕ್ರಮಣಶೀಲ ಧರ್ಮಕಾರಣದೆದುರು ಕಾಂಗ್ರೆಸ್ ಚೇತರಿಸಿಕೊಳ್ಳುವುದು ಕಷ್ಟ. ಒಡೆದು ಹೋಗಿ ದುರ್ಬಲಗೊಂಡಿರುವ ಕಾಂಗ್ರೆಸ್‌ಗೆ ಬಿಜೆಪಿಯ ಆರ್ಭಟ ಎದುರಿಸಲಾಗುತ್ತಿಲ್ಲವೆಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ!

  • ಶುದ್ಧೋದನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...