Homeಕರೋನಾ ತಲ್ಲಣಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತರಲಿದ್ದು, ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ತಿಳಿಸಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಏಕಾಏಕಿ ಘೋಷಣೆಯಾಗಿದ್ದ ಲಾಕ್‌ಡೌನ್ ಲಕ್ಷಾಂತರ ವಲಸೆ ಕಾರ್ಮಿಕರ ನೋವುಗಳಿಗೆ ಸಾಕ್ಷಿಯಾಗಿದೆ. ಕೊರೊನಾ ನಿಯಂತ್ರಣದ ಹೆಸರಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಸಮಯದಲ್ಲಿ ದೇಶದ 11 ರಾಜ್ಯಗಳಲ್ಲಿ ಸುಮಾರು 45 ಪ್ರತಿಶತದಷ್ಟು ಜನರು ಆಹಾರಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗಿತ್ತು ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ.

ಸಾಂಕ್ರಾಮಿಕ ಕೊರೊನಾ ಪ್ರೇರಿತ ಲಾಕ್‌ಡೌನ್‌ನಿಂದ ದೇಶದ 11 ರಾಜ್ಯಗಳಿಂದ ಸುಮಾರು 45 ಪ್ರತಿಶತದಷ್ಟು ಜನರು ಊಟ ಮಾಡಲು ಸಹ ಹಣವನ್ನು ಸಾಲ ಪಡೆಯಬೇಕಾಯಿತು ಎಂದು ಹಂಗರ್ ವಾಚ್ ನಡೆಸಿದ ಸಮೀಕ್ಷೆ ಉಲ್ಲೇಖಿಸಿದೆ.

‘ಹಂಗರ್ ವಾಚ್’ ಸಮೀಕ್ಷೆಯಲ್ಲಿ, ಲಾಕ್‌ಡೌನ್ ಮುಗಿದ ಐದು ತಿಂಗಳ ನಂತರವೂ ಅಂಚಿನಲ್ಲಿರುವ ಮತ್ತು ದುರ್ಬಲ ಸಮುದಾಯಗಳಲ್ಲಿ ಹಸಿವಿನ ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಕುಟುಂಬಗಳು ಆಹಾರವಿಲ್ಲದೆಯೇ ಹಸಿವಿನಿಂದ ಮಲಗುತ್ತಿರುವುದು ಈ 11 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ದೇಶದ ವಿವಿಧ ಭಾಗಗಳಲ್ಲಿನ ಆಹಾರ ಪರಿಸ್ಥಿತಿಯನ್ನು ಪತ್ತೆಹಚ್ಚಲು ಇತರ ಹಲವು ನೆಟ್‌ವರ್ಕ್‌ಗಳೊಂದಿಗೆ ಆಹಾರ ಹಕ್ಕು ಅಭಿಯಾನವು ಸೆಪ್ಟೆಂಬರ್ 2020 ರಲ್ಲಿ ‘ಹಂಗರ್ ವಾಚ್’ ಅನ್ನು ಪ್ರಾರಂಭಿಸಿತು.

ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್‌ಗಢ, ಜಾರ್ಖಂಡ್, ದೆಹಲಿ, ತೆಲಂಗಾಣ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಸುಮಾರು 3,994 ಜನರನ್ನು ಹಂಗರ್ ವಾಚ್ ತಂಡ ಸಂದರ್ಶನ ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ 2,186 ಜನರನ್ನು ಸಂದರ್ಶಿಸಿದರೆ, ನಗರ ಪ್ರದೇಶಗಳಿಂದ 1,808 ಜನರನ್ನು ಸಂದರ್ಶಿಸಲಾಗಿದೆ.

ಸುಮಾರು 77%  PVTG (ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳು) ಕುಟುಂಬಗಳು, 76% ದಲಿತರು, ಮತ್ತು 54% ರಷ್ಟು ಆದಿವಾಸಿಗಳು ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ತಮ್ಮ ಆಹಾರ ಸೇವನೆಯ ಪ್ರಮಾಣವು ತೀರ ಕಡಿಮೆಯಾಗಿದೆ ಎಂದು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ವರದಿಯು ಸೂಚಿಸಿದೆ. ಇದು ಸಾಂಕ್ರಾಮಿಕ ಸಮಯದಲ್ಲಿ ಅಂಚಿನಲ್ಲಿರುವವರಿಗೆ ಇನ್ನೂ ಲಭ್ಯವಿರುವ ಕೆಲವು ಸಂಪನ್ಮೂಲಗಳಲ್ಲಿ ಒಂದಾಗಿದೆ. ಕೃಷಿ ಕಾಯ್ದೆಗಳು ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಕಳೆದ 15 ದಿನಗಳಿಂದ ಸಾವಿರಾರು ರೈತರು ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಕೇಂದ್ರ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು, ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈಗಾಗಲೇ ಯಶಸ್ವಿ ಭಾರತ್ ಬಂದ್ ನಡೆಸಿರುವ ರೈತರು, ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೇ ಡಿಸೆಂಬರ್‌ 12 ರಂದು ದೆಹಲಿ – ಜೈಪುರ ಹೆದ್ದಾರಿ ಬಮದ್ ಮಾಡಲು ಮತ್ತು 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...