Homeಮುಖಪುಟದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ಫೆಬ್ರವರಿ 24 ರಿಂದ ಹಿಂಸಾಚಾರ ಉಲ್ಬಣಗೊಂಡಾಗ ಕರ್ಫ್ಯೂ ಏಕೆ ವಿಧಿಸಲಾಗಿಲ್ಲ? ಸೈನ್ಯವನ್ನು ಏಕೆ ನಿಯೋಜಿಸಲಾಗಿಲ್ಲ? ದೆಹಲಿ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳ ಹೆಚ್ಚುವರಿ ನಿಯೋಜನೆಯು ಸಹ ಸಾಕಷ್ಟು ಅಸಮರ್ಪಕವಾಗಿದೆ...

- Advertisement -
- Advertisement -

ಫೆಬ್ರವರಿ ತಿಂಗಳಿನಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ನೇರಹೊಣೆ ಎಂದು ಸತ್ಯಶೋಧನ ಸಮಿತಿಯ ವರದಿ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್) ಬಿಡುಗಡೆಗೊಳಿಸಿರುವ ಸತ್ಯಶೋಧನಾ ವರದಿಯು, ಈ ವರ್ಷದ ಫೆಬ್ರವರಿಯಲ್ಲಿ 53 ಮಂದಿಯನ್ನು ಬಲಿ ಪಡೆದ ಈಶಾನ್ಯ ದಿಲ್ಲಿ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಣೆಗಾರರನ್ನಾಗಿಸಿದೆ. ಹಿಂಸೆ ಉಲ್ಬಣಗೊಳ್ಳಲು ಹಾಗೂ ಈ ಕುರಿತಾದ ಪೊಲೀಸ್ ತನಿಖೆ ಪೂರ್ವಾಗ್ರಹಪೀಡಿತವಾಗಲು ಕೂಡ ಶಾ ಅವರೇ ಕಾರಣ ಎಂದು ಈ ವರದಿ ಆರೋಪಿಸಿದೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

“ಮಾರ್ಚ್ 11, 2020 ರಂದು, ದೆಹಲಿಯ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶಾ ಸಂಸತ್ತಿಗೆ ಮಾಹಿತಿ ನೀಡಿದ್ದರು. ಫೆಬ್ರವರಿ 24 ರಿಂದ ಹಿಂಸಾಚಾರ ಉಲ್ಬಣಗೊಂಡಾಗ ಕರ್ಫ್ಯೂ ಏಕೆ ವಿಧಿಸಲಾಗಿಲ್ಲ? ಸೈನ್ಯವನ್ನು ಏಕೆ ನಿಯೋಜಿಸಲಾಗಿಲ್ಲ? ಎಂಬುದು ಪ್ರಶ್ನೆ. ದೆಹಲಿ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳ ಹೆಚ್ಚುವರಿ ನಿಯೋಜನೆಯು ಸಹ ಸಾಕಷ್ಟು ಅಸಮರ್ಪಕವಾಗಿದೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

“ಕಮ್ಯುನಲ್ ವಯೋಲೆನ್ಸ್‌ ಇನ್ ನಾರ್ತ್ ಈಸ್ಟ್ ಡೆಲ್ಲಿ, ಫೆಬ್ರವರಿ 2020” ಎಂಬ ಶೀರ್ಷಿಕೆಯ ಈ ಸತ್ಯಶೋಧನಾ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

“ಈ ಮತೀಯ ಹಿಂಸಾಚಾರವನ್ನು ದಿಲ್ಲಿ ಹಿಂಸಾಚಾರ ಎಂದು ವರ್ಣಿಸುವುದು ತಪ್ಪು. ಎರಡೂ ಕಡೆಯವರೂ ಸಮಭಾಗಿಯಾಗಿ ನಡೆಸಿದ ಹಿಂಸಾಚಾರ ಎಂದು ಹೇಳಬಹುದು. ಆದರೆ ಇಲ್ಲಿ ಹಿಂದುತ್ವ ಗುಂಪುಗಳು ದಾಳಿ ನಡೆಸಿದರೆ ಇನ್ನೊಂದು ಸಮುದಾಯ ತನ್ನನ್ನು ದಾಳಿಗಳಿಂದ ರಕ್ಷಿಸಿಕೊಳ್ಳಲು ಯತ್ನಿಸಿದೆ. ಪೊಲೀಸರು ಹಿಂದುತ್ವ ಗುಂಪುಗಳ ಪರ ಇದ್ದರೆಂಬುದಕ್ಕೆ ಎಲ್ಲಾ ಕಡೆಗಳ ವೀಡಿಯೋ ಆಧಾರಗಳಿವೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

“ಬಿಜೆಪಿ ನಾಯಕರುಗಳಾದ ಕಪಿಲ್ ಮಿಶ್ರಾ ಮತ್ತು ಅನುರಾಗ್ ಠಾಕೂರ್ ಅವರ ಪ್ರಚೋದನಾತ್ಮಕ ಭಾಷಣಗಳು ಹಾಗೂ ಫೆಬ್ರವರಿ 21ರ ಶಿವರಾತ್ರಿ ಮೆರವಣಿಗೆಗಳ ವೇಳೆಯ ಪ್ರಚೋದನಾತ್ಮಕ ಘೋಷಣೆಗಳು ಕೂಡ ಹಿಂಸೆಗೆ ಕಾರಣವಾಯಿತು” ಎಂದು ಹೇಳಿದೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಸಂತ್ರಸ್ತರಿಗೆ ಭಾಗಶಃ ಪರಿಹಾರ ನೀಡುವಲ್ಲಿನ ವಿಳಂಬಕ್ಕೆ ದೆಹಲಿಯ ಆಮ್ ಆದ್ಮಿ ಸರಕಾರವನ್ನೂ ದೂಷಿಸಿದ್ದು, ಘಟನೆ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಬೇಕೆಂದೂ ವರದಿಯಲ್ಲಿ ಆಗ್ರಹಿಸಲಾಗಿದೆ.

ಫೆಬ್ರವರಿಯಲ್ಲಿ ನಡೆದ ಹಿಂಸಾಚಾರದಲ್ಲಿ 40 ಮುಸ್ಲಿಂ ಮತ್ತು 13 ಹಿಂದೂಗಳು ಸೇರಿದಂತೆ 53 ಜನರು ಕೊಲ್ಲಲ್ಪಟ್ಟಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಗಣ್ಯರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. तो पुलिस इसको कब अरेस्ट करेगी??? So when was police arrest him??? ಹಾಗಾದರೆ ಪೊಲೀಸ್ ಇವನನ್ನು ಯಾವಾಗ ಅರೆಸ್ಟ್ ಮಾಡುತ್ತೆ??? అయితే పోలీస్ వీడిని ఎప్పుడు అరెస్ట్ చేస్తోంది???

  2. Vilas Latthe
    12:27 PM (25 minutes ago)
    to shekhargupta

    The table compares the statewide average yields for a few major agricultural crops in India, for 2001–2002.[107]

    Crop[107] Average farm yield in Bihar Average farm yield in Karnataka Average farm yield in Punjab
    kilogram per hectare kilogram per hectare kilogram per hectare
    Wheat 2020 unknown 3880
    Rice 1370 2380 3130
    Pulses 610 470 820
    Oil seeds 620 680 1200
    Sugarcane 45510 79560 65300
    FEEL NOT BAD AGRI SECTOR COMEWS UNDER STATE LIST>>> BE NOTED!

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...