Homeಚಳವಳಿಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಿದ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ರಾಜ್ಯಪಾಲ ವಾಜುಬಾಯಿ ವಾಲಾರವರು ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ನಡೆದಾಗ 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದರು.

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ರೈತ ಮುಖಂಡ ಕುರುಬುರು ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐಕ್ಯಹೋರಾಟ ಸಮಿತಿಯ ಪರವಾಗಿ ಗುರುಪ್ರಸಾದ್ ಕೆರಗೋಡು ಮಾತನಾಡಿ “ಇಲ್ಲಿಗೆ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸುವುದಿಲ್ಲ. ರಾಜ್ಯಪಾಲರು ಭರವಸೆ ನೀಡಿದರೂ ಸಹ ಮಸೂದೆ ವಾಪಸ್ ಹೋಗುವವರೆಗೂ ನಾವು ಹಿಂದೆ ಸರಿಯಬಾರದು. ಸೂಕ್ತ ರೀತಿಯಲ್ಲಿ ಹೋರಾಟವನ್ನು ಜಾರಿಯಲ್ಲಿಡಬೇಕು” ಎಂದು ತಿಳಿಸಿದ್ದಾರೆ.

ಹೋರಾಟವನ್ನು ಜಾರಿಯಲ್ಲಿಡಲು ಮತ್ತು ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸುವುದಾಗಿ ರೈತರು ಹಸಿರು ಪ್ರತಿಜ್ಞೆ ಕೈಗೊಂಡರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಇಂದು ಸಾವಿರಾರು ಜನ ಬೆಳಿಗ್ಗೆಯಿಂದಲೇ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...