Homeಚಳವಳಿಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಿದ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ರಾಜ್ಯಪಾಲ ವಾಜುಬಾಯಿ ವಾಲಾರವರು ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ನಡೆದಾಗ 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದರು.

ಇಂದಿನ ಸಭೆಯಲ್ಲಿ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದರು. ನಮ್ಮ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡರು. ಮಸೂದೆಯ ಕುರಿತು ರೈತರೊಂದಿಗೆ ವಿವರವಾಗಿ ಚರ್ಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ರೈತ ಮುಖಂಡ ಕುರುಬುರು ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐಕ್ಯಹೋರಾಟ ಸಮಿತಿಯ ಪರವಾಗಿ ಗುರುಪ್ರಸಾದ್ ಕೆರಗೋಡು ಮಾತನಾಡಿ “ಇಲ್ಲಿಗೆ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸುವುದಿಲ್ಲ. ರಾಜ್ಯಪಾಲರು ಭರವಸೆ ನೀಡಿದರೂ ಸಹ ಮಸೂದೆ ವಾಪಸ್ ಹೋಗುವವರೆಗೂ ನಾವು ಹಿಂದೆ ಸರಿಯಬಾರದು. ಸೂಕ್ತ ರೀತಿಯಲ್ಲಿ ಹೋರಾಟವನ್ನು ಜಾರಿಯಲ್ಲಿಡಬೇಕು” ಎಂದು ತಿಳಿಸಿದ್ದಾರೆ.

ಹೋರಾಟವನ್ನು ಜಾರಿಯಲ್ಲಿಡಲು ಮತ್ತು ದೆಹಲಿಯಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ಸೂಚಿಸುವುದಾಗಿ ರೈತರು ಹಸಿರು ಪ್ರತಿಜ್ಞೆ ಕೈಗೊಂಡರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಇಂದು ಸಾವಿರಾರು ಜನ ಬೆಳಿಗ್ಗೆಯಿಂದಲೇ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...