Homeಕರೋನಾ ತಲ್ಲಣಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್‌ಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿ ದೊರೆತಿದೆ.

- Advertisement -
- Advertisement -

ಬಹುಭಾಷಾ ನಟ ಸೋನು ಸೂದ್ ಮುಂಬೈಯಲ್ಲಿ ತಮ್ಮ 8 ಆಸ್ತಿಗಳನ್ನು ಅಡವಿಟ್ಟಿದ್ದು, ಅಗತ್ಯವಿರುವವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸಿದ್ದಾರೆ ಎಂದು ಮನಿ ಕಂಟ್ರೋಲ್ ರಿಪೋರ್ಟ್ ವರದಿ ಮಾಡಿದೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದವರಿಗೆ ನಟ ಸಾಕಷ್ಟು ನೆರವು ನೀಡಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವಾದ ಸೋನು ಅವರ ಮಾನವೀಯ ಕಾರ್ಯವನ್ನು ದೇಶಾದ್ಯಂತದ ಕೋಟ್ಯಾಂತರ ಜನರು ಶ್ಲಾಘಿಸಿದ್ದಾರೆ. ಜೊತೆಗೆ ಈ ನಟ ತಾವು ಮಾಡುವ ಸಹಾಯವು ಹೆಚ್ಚು ಹೆಚ್ಚು ಜನರನ್ನು ತಲುಪುವಂತೆ ನೋಡಿಕೊಳ್ಳುತ್ತಿದ್ದಾರೆ.

ಸೋನು ಸೂದ್ ಮುಂಬೈನ ಜೂಹು ಪ್ರದೇಶದಲ್ಲಿರುವ ತಮ್ಮ 8 ಸ್ವತ್ತುಗಳನ್ನು ಅಡವಿಟ್ಟು 10 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂಬ ಬಗ್ಗೆ ಮನಿ ಕಂಟ್ರೋಲ್ ವೆಬ್​​​​ಸೈಟ್​​ನಲ್ಲಿ ದಾಖಲೆಗಳು ಬಹಿರಂಗವಾಗಿದೆ. 2 ಅಂಗಡಿಗಳು ಮತ್ತು 6 ಫ್ಲಾಟ್​ಗಳನ್ನು ಅಡವಿಟ್ಟಿದ್ದಾರೆ. ನವೆಂಬರ್ 24ರಂದು ಪತ್ನಿ ಹಾಗೂ ಮಕ್ಕಳ ಹೆಸರಿನಲ್ಲಿದ್ದ ಸ್ವತ್ತುಗಳನ್ನು ಅಡವಿಟ್ಟಿದ್ದಾರೆ. ಸೆಪ್ಟೆಂಬರ್ 15 ರಂದು ಈ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು ಮತ್ತು ನವೆಂಬರ್ 24 ರಂದು ಅಡವಿಟ್ಟು ನೋಂದಣಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಈ ಪ್ರೀಮಿಯಂ ಆಸ್ತಿಗಳು ನಟ ಮತ್ತು ಅವರ ಪತ್ನಿಯ ಒಡೆತನದಲ್ಲಿ ಮುಂದುವರಿಯುತ್ತದೆ. ಅವರು 10 ಕೋಟಿ ರೂ.ಗಳ ಸಾಲದ ಬಡ್ಡಿ ಮತ್ತು ಅಸಲು ಪಾವತಿಸಬೇಕಾಗುತ್ತದೆ” ಎಂದು ರೆಸಿಡೆನ್ಶಿಯಲ್ ಸರ್ವೀಸಸ್, ಜೆಎಲ್ಎಲ್ ಇಂಡಿಯಾದ ಹಿರಿಯ ನಿರ್ದೇಶಕ ರಿತೇಶ್ ಮೆಹ್ತಾ ಅವರು ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವೆಬ್ ಉಲ್ಲೇಖಿಸಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಟ ಸೋನು ಸೂದ್ ಅವರಿಂದ ಯಾವುದೇ ದೃಢಿಕರಣ ಸಿಕ್ಕಿಲ್ಲ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರತಿದಿನ ಸೋನು ಸೂದ್ ಅವರಿಗೆ ಸಹಾಯ ಕೇಳುವ ನೂರಾರು ಪತ್ರಗಳು ಬರುತ್ತಿದ್ದು, ಈ ಪತ್ರಗಳ ಚಿತ್ರವನ್ನು ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Sonu Sood (@sonu_sood)

“ನಾನು ಪ್ರತಿದಿನ ಸ್ವೀಕರಿಸುವ ಮೇಲ್‌ಗಳಿಗೆ ಸಹಾಯ ಮಾಡಿ. ಎಲ್ಲರನ್ನೂ ತಲುಪಲು ನಾನು ಬಯಸುತ್ತೇನೆ, ಆದರೆ, ಅದು ಅಸಾಧ್ಯವೆಂದು ತೋರುತ್ತದೆ. ಈ ಪತ್ರಗಳ ಸಂಖ್ಯೆ ಕಡಿಮೆಯಾಗುವ ದಿನಕ್ಕಾಗಿ ಕಾಯುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...