Homeಕರ್ನಾಟಕಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

- Advertisement -
- Advertisement -

ಇಂದು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC)ಯ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿದ್ದು, ನಿನ್ನೆಯ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಇಂದು BMTC ಬಸ್‌ಗಳು ರಸ್ತೆಗಿಳಿದಿಲ್ಲ. ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಮತ್ತು ಕೊರೊನಾ ಸಮಯದಲ್ಲಿ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ಕೊರೊನಾ ವಾರಿಯರ್ಸ್ ಜೀವವಿಮೆ ಮೊತ್ತ ನೀಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ನಡೆಸಿದರು.

ಈಗ ನಾವು ಸರ್ಕಾರಿ ನೌಕರರೂ ಅಲ್ಲ, ಖಾಸಗಿ ನೌಕರರು ಅಲ್ಲ. ಮಧ್ಯದಲ್ಲಿ ನಿಗಮ, ಸಂಸ್ಥೆಗಳ ಅಡಿಯಲ್ಲಿ ದುಡಿಯುತ್ತಿದ್ದು ಹೆಚ್ಚಿನ ಸೌಲಭ್ಯಗಳು ದೊರಕುತ್ತಿಲ್ಲ. ಸಂಸ್ಥೆಗೆ ನಷ್ಟವಾದರೆ ನಮಗೆ ಸಂಬಳವನ್ನು ಸಕಾಲಕ್ಕೆ ನೀಡುವುದಿಲ್ಲ. ಹಾಗಾಗಿ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿವಿಧ ರಾಜ್ಯಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಗಣಿಸಲಾಗಿದೆ. ಇತ್ತೀಚೆಗೆ ಆಂದ್ರ ಪ್ರದೇಶ ಸರ್ಕಾರವೂ ಈ ತೀರ್ಮಾನ ತೆಗೆದುಕೊಂಡಿದೆ. ಅದು ಕರ್ನಾಟಕದಲ್ಲಿಯೂ ಜಾರಿಯಾಗಬೇಕೆಂದು ಸಾರಿಗೆ ನೌಕರರು ಒತ್ತಾಯಿಸಿದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ಹೋರಾಟದ ಒಕ್ಕೂಟ ಬ್ಯಾನರ್‌ನಡಿ ಒಂದುಗೂಡಿದ ಸಾವಿರಾರು ನೌಕರರು, ಅವರ ಕುಟಂಬ ಸದಸ್ಯರು ‘ಸರ್ಕಾರಿ ನೌಕರರಾಗುವುದು ಬೇಡಿಕೆಯಲ್ಲ, ಅದು ನಮ್ಮ ಹಕ್ಕು; ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ, ಆಶ್ವಾಸನೆ ಸಾಕು -ಘೋಷಣೆ ಬೇಕು ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಕೊರೊನಾ ಸಂಕಷ್ಟದಲ್ಲಿಯೂ ಸಾರಿಗೆ ನೌಕರರು ಕೆಲಸ ನಿರ್ವಹಿಸಿದ್ದಾರೆ. ಸುಮಾರು 50 ಮಂದಿ ಸೋಂಕಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಇಂದು ಬಹಳಷ್ಟು ಜನ ದುಡಿಯದೆ ಸರ್ಕಾರಿ ನೌಕರರೆನಿಸಿಕೊಳ್ಳುತ್ತಿದ್ದಾರೆ. ಆದರೆ ನಾವು ಕಷ್ಟಪಟ್ಟು ದುಡಿದರೂ ಸರ್ಕಾರಿ ನೌಕರರಾಗಿಲ್ಲ ಎಂದು ಅಳಲು ವ್ಯಕ್ತಪಡಿಸಿದರು.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...