Homeಮುಖಪುಟಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು...

- Advertisement -
- Advertisement -

ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಯುಪಿಎ ಮಿತ್ರಪಕ್ಷಗಳಲ್ಲಿರುವವರಲ್ಲಿ ಶರದ್ ಪವಾರ್ ಅತ್ಯಂತ ಹಿರಿಯ ನಾಯಕರಾಗಿದ್ದು, ಅವರು ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೂ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಕಾಂಗ್ರೆಸ್ ಮೂಲಗಳ ಪ್ರಕಾರ, ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಬಳಲುತ್ತಿರುವ ಸೋನಿಯಾ ಗಾಂಧಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸುತ್ತಿದ್ದಾರೆ. ಆದರೆ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧೀ ಹಂಗಾಮಿ ಅಧ್ಯಕ್ಷರಾಗಲು ಒಪ್ಪಿದರು. ಆದರೂ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ದೇಶ ಮುನ್ನಡೆಸುವ ಎಲ್ಲಾ ಅರ್ಹತೆ ಶರದ್ ಪವಾರ್ ಅವರಿಗಿದೆ: ಸಂಜಯ್ ರಾವತ್

“ಯುಪಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ. ಆದ್ದರಿಂದ, ಅಧ್ಯಕ್ಷರು ಕಾಂಗ್ರೆಸ್‌ನವರೇ ಆಗಿರಬೇಕು. ಆದರೆ ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು” ಎಂದು ಮೂಲಗಳು ತಿಳಿಸಿವೆ.

ಆದರೆ, ವಿದೇಶಿ ಮೂಲದವರಾಗಿದ್ದ ಸೋನಿಯಾ ಗಾಂಧಿಯವರನ್ನು ಪಕ್ಷಕ್ಕೆ ಕರೆತಂದದ್ದಕ್ಕೆ ಶರದ್ ಪವಾರ್ 1991 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಆಗಿನಿಂದಲೂ ಪವಾರ್ ಮತ್ತು ಸೋನಿಯಾ ನಡುವೆ ವಿಶ್ವಾಸಾರ್ಹ ಕೊರತೆ ಮುಂದುವರೆದಿದೆ.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಆದಾಗ್ಯೂ, ಎನ್‌ಸಿಪಿ ಮತ್ತು ಕಾಂಗ್ರೆಸ್ ಎರಡೂ ಯುಪಿಎನಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಕುರಿತ ವಿಷಯವನ್ನು ಅಲ್ಲಗಳೆದಿದ್ದು, “ಅಂತಹ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯುಪಿಎ ಒಳಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಹೇಳಿದ್ದಾರೆ.

ರೈತರ ಆಂದೋಲನದಿಂದ ಗಮನವನ್ನು ಬೇರೆಡೆ ಸೆಳೆಯಲು ಪಟ್ಟಭದ್ರ ಹಿತಾಸಕ್ತಿಗಳಿಂದ ಈ ಸುದ್ದಿ ಹರಡಿದೆ ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Vilas Latthe
    modala kelasa party merger.. aste satya>> < YIVARWELLA BITTU HODAVARE ALLAVE?!>.
    · Reply · Share · 2 m
    Vilas Latthe
    we feel party musytnot be devided for the cause of presaidentship… I. nijalinga cong.. II. DEVARASJ CONG. now if time odd!

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...