Homeಮುಖಪುಟಆಕಾಶ ವೀಕ್ಷಣೆ: ದಿಗುವಳಯದಲಿ ಧೂಮಕೇತುಗಳೊಗೆದವೆನಲುತ್ಪಾತ ಕೋಟಿ...

ಆಕಾಶ ವೀಕ್ಷಣೆ: ದಿಗುವಳಯದಲಿ ಧೂಮಕೇತುಗಳೊಗೆದವೆನಲುತ್ಪಾತ ಕೋಟಿ…

ಜಮಿನಾಯ್ಡ್ಸ್ ಈ ತಿಂಗಳ 20ರವರೆಗೂ ಪ್ರತಿರಾತ್ರಿ ಕಾಣಿಸುತ್ತಿದ್ದರೂ, ಹೆಚ್ಚು ತೀವ್ರವಾಗುವುದು ಡಿಸೆಂಬರ್ 13 ಮತ್ತು 14ರ ರಾತ್ರಿಯಂದು. ಅದರಲ್ಲೂ, ಬೆಳಗಿನ ಜಾವದ 2 ಗಂಟೆಯ ಆಸುಪಾಸಿಗೆ.

- Advertisement -
- Advertisement -

(ಆಕಾಶ ವೀಕ್ಷಣೆ: ಡಿಸೆಂಬರ್ 09-16)

ಸೈಕ್ಲೋನ್ ಇಲ್ಲದ ಸಮಯದಲ್ಲಿ ಆಕಾಶ ಸ್ಪಷ್ಟವಾಗಿ ಕಾಣುತ್ತದೆ ಎಂಬುದು ಡಿಸೆಂಬರ್ ತಿಂಗಳು ಆಕಾಶ ವೀಕ್ಷಣೆಗೆ ಪ್ರಶಸ್ತ ಕಾಲ ಎಂಬುದು ಒಂದು ಕಾರಣವಾದರೆ, ಈ ತಿಂಗಳ ರಾತ್ರಿಯ ಆಕಾಶದಲ್ಲಿ ವರ್ಷದ ಹೆಚ್ಚು ಪ್ರಕಾಶಮಾನವಾದ ಉಲ್ಕಾಪಾತವನ್ನು (Meteor Shower) ಕಣ್ತುಂಬಿಕೊಳ್ಳುವ ಸದವಕಾಶವಿರುವುದು ಮತ್ತೊಂದು ಕಾರಣ. ಈ ಉಲ್ಕಾಪಾತವನ್ನು ನೋಡುವುದಕ್ಕೆ ಯಾವ ಉಪಕರಣವು ಬೇಡ, ಬರಿಗಣ್ಣಿನಿಂದಲೇ ನೋಡಬಹುದು. ಆಕಾಶ ವೀಕ್ಷಣೆಯಲ್ಲಿ ಉಲ್ಕಾಪಾತದ ವೀಕ್ಷಣೆಯು ಬಹಳ ಉಲ್ಲಾಸದ ಮತ್ತು ಎಲ್ಲರೂ ಒಟ್ಟುಗೂಡಿ ನೋಡುವ ಒಂದು ವಿದ್ಯಮಾನ.

ಉಲ್ಕೆಗಳು, ಉಲ್ಕಾಪಾತ ಎಂದರೇನು?

ಸೂರ್ಯನ ಸುತ್ತ ಗ್ರಹಗಳು ಹೇಗೆ ಸುತ್ತುತ್ತಿವೆಯೋ, ಹಾಗೆಯೇ ಅನೇಕ ಧೂಮಕೇತುಗಳು ಮತ್ತು ಗಾತ್ರದಲ್ಲಿ ಚಿಕ್ಕದಾಗಿರುವ ಆಕಾಶಕಾಯಗಳು ಕೂಡ ಸುತ್ತುತ್ತಿವೆ. ಇವುಗಳಲ್ಲಿ ಧೂಮಕೇತುಗಳು ವಿಶೇಷವಾದವು. ಧೂಮಕೇತುಗಳು ದೀರ್ಘ ಅಂಡಾಕಾರದ ವೃತ್ತದಲ್ಲಿ, ಸೌರಮಂಡಲದ ಹೊರಭಾಗದಿಂದ ಸೂರ್ಯನ ಬಳಿ ಬಂದುಹೋಗುತ್ತವೆ. ಹೀಗೆ ಧೂಮಕೇತುಗಳು ಸೂರ್ಯನ ಬಳಿ ಬಂದಾಗ, ಸೂರ್ಯನ ಶಾಖದಿಂದ ಅವುಗಳಲ್ಲಿ ಇರುವ ವಸ್ತುಗಳು ಆವಿಯಾಗಿ ಸೂರ್ಯ ಇರುವ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತವೆ. ಇದು, ಧೂಮಕೇತುವಿಗೆ ಬಾಲವಾಗುತ್ತದೆ. ಧೂಮಕೇತು ಹೆಚ್ಚು ಹೆಚ್ಚು ಸೂರ್ಯನ ಹತ್ತಿರ ಸಮೀಪಿಸಿದಂತೆ, ಅದರ ಬಾಲವು ದೊಡ್ಡದಾಗುತ್ತಾ ಹೋಗುತ್ತದೆ. ಭೂಮಿಯಿಂದ ಆಕಾಶದಲ್ಲಿ ಈ ಬಾಲಾಂಕೃತ ಅತಿಥಿಗಳನ್ನು ಬರಿಗಣ್ಣಿನಿಂದ ಕಾಣಬಹುದಾಗಿರುತ್ತದೆ. ಹೀಗೆ ಸೂರ್ಯನ ಬಳಿ ಬಂದು ಹೋದ ಧೂಮಕೇತುಗಳು, ಅದರ ಕಕ್ಷೆಯಲ್ಲಿ ಚಿಕ್ಕಚಿಕ್ಕ ಶಿಲೆಗಳನ್ನು (ಹೆಚ್ಚಾಗಿ ಧೂಮಕೇತುವಿನ ಧೂಳಿನ ಕಣಗಳು, icy bodies, ಕ್ಷುದ್ರ ಗ್ರಹಗಳ ಸಣ್ಣಸಣ್ಣ ಕಲ್ಲು) ಚದುರಿಸಿ ಹೋಗಿರುತ್ತವೆ. ಇವನ್ನು ಉಲ್ಕೆಗಳು(Metor) ಎಂದು ಕರೆಯುತ್ತೇವೆ.

ಭೂಮಿಯು ಸೂರ್ಯನ ಸುತ್ತ ಸುತ್ತುವ ಪಥದಲ್ಲಿ ಇಂತಹ ಚದುರಿದ ಉಲ್ಕೆಗಳಿರುವ ಪ್ರದೇಶದ ಮೋಡದೊಳಗೆ ಹಾದುಹೋದಾಗ, ಈ ಉಲ್ಕೆಗಳು ಭೂಮಿಯ ವಾತಾವರಣಕ್ಕೆ ಪ್ರವೇಶಿಸಿ, ವಾತಾವರಣದ ಘರ್ಷಣೆಯ ಕಾರಣದಿಂದ ಉರಿದು ಬೂದಿಯಾಗುತ್ತವೆ. ಈ ಪ್ರಕ್ರಿಯೆ, ಭೂಮಿಯ ಆಕಾಶದಲ್ಲಿ, ನಕ್ಷತ್ರವು ಕೆಳಗೆ ಬಿದ್ದಿತೇನೋ ಎಂಬಂತೆ, ಮಿಂಚಿನ ಒಂದು ಸಣ್ಣ ಬೆಂಕಿಯಗೆರೆಯಂತೆ ಗೋಚರಿಸುತ್ತದೆ. ಇಂತಹ ಹಲವು ಬೆಂಕಿಯ ಗೆರೆಗಳು ಆಕಾಶದಲ್ಲಿ ಗೋಚರಿಸಿದರೆ ಅದನ್ನು ಉಲ್ಕಾಪಾತ (Metor Shower) ಎಂದು ಕರೆಯುತ್ತೇವೆ. ಇಂಗ್ಲಿಷ್‌ನಲ್ಲಿ ಶೂಟಿಂಗ್ ಸ್ಟಾರ್ ಎಂದೂ ಹೆಸರಿದೆ. ಆದರೆ, ನಕ್ಷತ್ರಗಳಿಗೂ ಇವಕ್ಕೂ ಯಾವುದೇ ಸಂಬಂಧವಿಲ್ಲ.

ಉಲ್ಕಾಪಾತವನ್ನು ಹೇಗೆ ನೋಡುವುದು?

ಆಕಾಶ ವೀಕ್ಷಕರಿಗೆ ಉಲ್ಕಾಪಾತ ನೋಡುವುದು ಒಂದು ವಿಶೇಷ ಅನುಭವ. ಉಲ್ಕಾಪಾತ ನೋಡಲು ಯಾವ ಉಪಕರಣದ (ಟೆಲಿಸ್ಕೋಪ್, ಬೈನಾಕ್ಯೂಲರ್) ಅಗತ್ಯವು ಇರುವುದಿಲ್ಲ. ಇದು ಬರಿಗಣ್ಣಿನಲ್ಲಿ ನೋಡಬಹುದಾದ ವಿದ್ಯಮಾನ. ನಗರ ಪ್ರದೇಶದಲ್ಲಿದ್ದರೆ, ಕಟ್ಟಡದ ತಾರಸಿಯ ಮೇಲೋ ಅಥವಾ ಯಾವುದೇ ಅಡೆತಡೆಯಿಲ್ಲದೆ ಆಕಾಶ ಕಾಣುವ ಜಾಗದಲ್ಲಿ ಆಕಾಶಕ್ಕೆ ಮುಖ ಮಾಡಿ ಮಲಗಿ ನೋಡುತ್ತಿದ್ದರೆ, ಉಲ್ಕಾಪಾತವನ್ನು ಸವಿಯಬಹುದು ಮತ್ತು ಎಷ್ಟು ಬೆಂಕಿಯ ಗೆರೆಗಳನ್ನು ನೋಡಿದಿರಿ ಎಂದು ಎಣಿಸಲೂಬಹುದು. ಉಲ್ಕಾಪಾತ ರಾತ್ರಿ ಪೂರ್ತಿ ಕಾಣುವ ವಿದ್ಯಮಾನ. ಅಲ್ಲದೆ, ಉಲ್ಕಾಪಾತವನ್ನು ಅಳೆಯಲು ಒಂದು ಮಾಪನವಿದೆ. ಇದೇನೆಂದರೆ, ಒಂದು ಗಂಟೆಗೆ ಸರಿಸುಮಾರು ಎಷ್ಟು ಉಲ್ಕೆಗಳು ಬೀಳುವುದನ್ನು ನೋಡಬಹುದಾಗಿದೆ ಎಂಬುದು. ಕೆಲವು ಉಲ್ಕಾಪಾತದಲ್ಲಿ ಈ ಸಂಖ್ಯೆ ಬಹಳ ಕಡಿಮೆ ಇರುತ್ತದೆ- 10ರಿಂದ 20. 100ರಿಂದ 150 ಇದ್ದರೆ, ಅದು ಪ್ರಕಾಶಮಾನವಾದ ಉಲ್ಕಾಪಾತ. ರಾತ್ರಿಯ ಆಕಾಶದಲ್ಲಿ ಉಲ್ಕಾಪಾತವನ್ನು ನೋಡುವ ಅವಕಾಶ ಹೆಚ್ಚಿರುತ್ತದೆ. ಪ್ರತಿ ವರ್ಷ ಡಿಸೆಂಬರ್‌ನಲ್ಲಿ ಸಂಭವಿಸುವಂತಾದ್ದು ಅಂತಹದ್ದೇ ಪ್ರಕಾಶಮಾನವಾದ ಉಲ್ಕಾಪಾತ, ಗಂಟೆಗೆ 100ರಿಂದ 150 ಉಲ್ಕೆಗಳನ್ನು ನೋಡಬಹುದು!

ಉಲ್ಕಾಪಾತಕ್ಕೆ ಹೆಸರುಗಳಿವೆಯೇ?

ಭೂಮಿಯು, ಸೂರ್ಯನ ಸುತ್ತ ಸುತ್ತುವ ಕಕ್ಷೆಯಲ್ಲಿ, ಧೂಮಕೇತುಗಳು ಬಿಟ್ಟುಹೋದ ಹಲವು ಚದರಿದ ಮೋಡವಿರುವ ಪ್ರದೇಶದ ಮೂಲಕ ಹಾದುಹೋಗುತ್ತದೆ. ವರ್ಷಕ್ಕೆ ಸರಿಸುಮಾರು ಆರರಿಂದ ಏಳು ಉಲ್ಕಾಪಾತಗಳನ್ನು ನೋಡಬಹುದು. ಈ ಉಲ್ಕಾಪಾತಗಳ ವಿಶೇಷವೆಂದರೆ, ಉಲ್ಕಾಪಾತದ ಸಂದರ್ಭದಲ್ಲಿ ಕಾಣುವ ಬೆಂಕಿಗೆರೆಗಳ ಬಾಲವನ್ನು ಕಲ್ಪಿಸಿಕೊಂಡು, ಹಿಮ್ಮುಖವಾಗಿ ಚಲಿಸಿಕೊಂಡು ಅವು ಎಲ್ಲಿಂದ ಬರುತ್ತಿವೆಯೆಂದು ಗಮನಿಸಿದರೆ, ಪ್ರತಿಯೊಂದು ಬೆಂಕಿಗೆರೆಯು ಒಂದೇ ಪ್ರದೇಶದಿಂದ ಪ್ರಾರಂಭಿಸುತ್ತಿರುವಂತೆ ಕಾಣುತ್ತದೆ. ಈ ಪ್ರದೇಶ ಯಾವ ನಕ್ಷತ್ರಪುಂಜದಲ್ಲಿದೆಯೋ ಆ ನಕ್ಷತ್ರ ಪುಂಜದ ಹೆಸರನ್ನೆ ಉಲ್ಕಾಪಾತಕ್ಕೆ ಹೆಸರಿಸಲಾಗಿದೆ. ಉದಾಹರಣೆಗೆ, ನಾವು ಒರಿಯಾನ್ ನಕ್ಷತ್ರಪುಂಜವನ್ನು ಗುರುತಿಸುವುದನ್ನು ಈಗಾಗಲೇ ತಿಳಿದಿದ್ದೇವೆ. ಉಲ್ಕಾಪಾತದ ಬೆಂಕಿಯ ಗೆರೆಗಳ ಬಾಲಗಳನ್ನು ಹಿಮ್ಮುಖವಾಗಿ ಚಲಿಸಿದಾಗ, ಎಲ್ಲಾ ಬೆಂಕಿಯ ಗೆರೆಗಳು ಒರಿಯಾನ್ ನಕ್ಷತ್ರಪುಂಜದಿಂದ ಪ್ರಾರಂಭಿಸಿದಂತೆ ಗೋಚರಿಸಿದರೆ, ಅದನ್ನು ಒರಿಯಾನೈಡ್ ಉಲ್ಕಾಪಾತ ಎಂದು ಕರೆಯುತ್ತಾರೆ. ಪ್ರಸ್ತುತ ಡಿಸೆಂಬರ್‌ನ ಉಲ್ಕಾಪಾತದ ಹೆಸರು, ಜಮಿನಾಯ್ಡ್ಸ್ ಎಂದು ಕರೆಯುತ್ತಾರೆ. ಅಂದರೆ, ಈ ತಿಂಗಳ ಆಗಸದಲ್ಲಿ ಕಾಣುವ ಎಲ್ಲಾ ಉಲ್ಕೆಗಳ ಬೆಂಕಿಗೆರೆಯ ಬಾಲಗಳು ಜಮಿನಿ ನಕ್ಷತ್ರಪುಂಜದಿಂದ ಪ್ರಾರಂಭವಾಗುವಂತೆ ಗೋಚರಿಸುತ್ತವೆ. ಅಲ್ಲದೆ ಈ ಜಮಿನಾಯ್ಡ್ಸ್ ಉಂಟಾಗಲು ಕಾರಣ ಫ್ಯಾತನ್ 3200 ಎಂಬ ಕ್ಷುದ್ರಗ್ರಹ ಎಂದು ಕೂಡ ತಿಳಿಯಲಾಗಿದೆ.

ಡಿಸೆಂಬಂರ್ ತಿಂಗಳ ಜಮಿನಾಯ್ಡ್ಸ್ ವಿಶೇಷ

ಜಮಿನಾಯ್ಡ್ಸ್‌ಉಲ್ಕಾಪಾತ | ಚಿತ್ರ ಕೃಪೆ: ಜೆಫ್‌ಡೈ/ ಅರಿಜ಼ೋನಾ ಸ್ಟೇಟ್‌ಯುನಿವರ್ಸಿಟಿ

ವರ್ಷದಲ್ಲಿ ಕಾಣುವ ಉಳಿದೆಲ್ಲಾ ಉಲ್ಕಾಪಾತುಗಳಿಗೆ ಹೋಲಿಸಿದರೆ, ಜಮಿನಾಯ್ಡ್ಸ್ ಅತ್ಯಂತ ಪ್ರಕಾಶಮಾನವಾದದು ಮತ್ತು ಗಂಟೆಗೆ 100ರಿಂದ 150 ಬೆಂಕಿಯ ಗೆರೆಗಳನ್ನು ನೋಡುವ ಅವಕಾಶವಿರುತ್ತದೆ. ಜಮಿನಾಯ್ಡ್ಸ್ ಈ ತಿಂಗಳ 20ರವರೆಗೂ ಪ್ರತಿರಾತ್ರಿ ಕಾಣಿಸುತ್ತಿದ್ದರೂ, ಹೆಚ್ಚು ತೀವ್ರವಾಗುವುದು ಡಿಸೆಂಬರ್ 13 ಮತ್ತು 14ರ ರಾತ್ರಿಯಂದು. ಅದರಲ್ಲೂ, ಬೆಳಗಿನ ಜಾವದ 2 ಗಂಟೆಯ ಆಸುಪಾಸಿಗೆ. ಡಿಸೆಂಬರ್ 14ರಂದು ಅಮಾವಾಸ್ಯೆಯೂ ಇರುವುದರಿಂದ, ಚಂದ್ರನಿಲ್ಲದ ರಾತ್ರಿಯಲ್ಲಿ, ಈ ಉಲ್ಕಾಪಾತ ಹೆಚ್ಚು ಪ್ರಕಾಶಮಾನವಾಗಿ ಕಾಣುತ್ತದೆ. ಉಲ್ಕಾಪಾತವನ್ನು, ಬರಿಗಣ್ಣಿನಲ್ಲಿ ನೋಡುವ ಜೊತೆಗೆ, ಕ್ಯಾಮರಾದಲ್ಲೂ ಸೆರೆಹಿಡಿಯಬಹುದು. ನಿಮ್ಮ ಬಳಿ ಹೆಚ್ಚು ಎಕ್ಸ್‌ಪೋಶರ್ ಸೆಟ್ಟಿಂಗ್ ಬದಲಿಸುವ ಕ್ಯಾಮರಾ ಇದ್ದರೆ, ಆಗಸದ ದಿಕ್ಕಿಗೆ ವೈಡ್‌ಅಂಗಲ್‌ನಲ್ಲಿ ಇಟ್ಟು ರೆಕಾರ್ಡ್ ಮಾಡಿ. ಉಲ್ಕಾಪಾತವನ್ನು ನೋಡುವಾಗ ರಾತ್ರಿಯ ಚಳಿಗೆ ರಕ್ಷಣೆ ಪಡೆಯಲು ಮರೆಯದಿರಿ.

ಈ ವರ್ಷದ ಕೊನೆಯ ಗ್ರಹಣ: ಸಂಪೂರ್ಣ ಸೂರ್ಯಗ್ರಹಣ

ಡಿಸೆಂಬರ್ 14ರಂದು ಸಂಪೂರ್ಣ ಸೂರ್ಯಗ್ರಹಣವಿದ್ದು, ಇದು ಈ ವರ್ಷದ ಕೊನೆಯ ಗ್ರಹಣವಾಗಿದೆ. ಈ ಗ್ರಹಣವನ್ನು ದಕ್ಷಿಣ ಅಮೆರಿಕ, ಚಿಲಿ, ಅರ್ಜೆಂಟೀನಾ ಮತ್ತು ಆಫ್ರಿಕಾದ ಕೆಲವು ಭಾಗಗಳಲ್ಲಿ ಕಾಣಬಹುದು. ಈ ಗ್ರಹಣವನ್ನು ಭಾರತದ ಯಾವ ಭಾಗದಿಂದಲೂ ನೋಡಲು ಸಾಧ್ಯವಿರುವುದಿಲ್ಲ. ಸಂಪೂರ್ಣ ಸೂರ್ಯಗ್ರಹಣದ ಸಂದರ್ಭದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆಮಾಚಿರುತ್ತಾನೆ. ನಿರ್ದಿಷ್ಟ ಸ್ಥಳಗಳಲ್ಲಿ, ಸೂರ್ಯ ಕೆಲವು ಸಮಯಗಳ ಕಾಲ (ನಿಮಿಷಗಳಲ್ಲಿ) ಆಗಸದಲ್ಲಿ ಕಾಣುವುದಿಲ್ಲ. ಅಂದಹಾಗೆ, ಏಕೆ ಸೂರ್ಯಗ್ರಹಣ ಅಮಾವಾಸ್ಯೆಯಂದೇ ಮತ್ತು ಚಂದ್ರಗ್ರಹಣ ಹುಣ್ಣಿಮೆಯಂದೇ ಘಟಿಸುತ್ತವೆ ಎನ್ನುವ ಪ್ರಶ್ನೆಯನ್ನು ಕೇಳಿಕೊಂಡು ಯೋಚಿಸಿ, ಮುಂದಿನ ದಿನಗಳಲ್ಲಿ ಇವನ್ನು ಚರ್ಚಿಸೋಣ.

  • ವಿಶ್ವ ಕೀರ್ತಿ ಎಸ್

ವಿಜ್ಞಾನ ಮತ್ತು ಖಗೋಳ ವಿಜ್ಞಾನದಲ್ಲಿ ಆಸಕ್ತಿ, ಹವ್ಯಾಸಿ ಆಕಾಶ ವೀಕ್ಷಣೆಗಾರ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಸ್ಥೆಯಲ್ಲಿ ವೈಜ್ಞಾನಿಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ರಿಗಲ್ ಮತ್ತು ಬೀಟಲ್ ಜ್ಯೂಸ್ ನಕ್ಷತ್ರಗಳನ್ನು ನೀವು ಕಾಣಿರಿ, ನೀವು ಕಾಣಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...