Homeಮುಖಪುಟಆಕಾಶ ವೀಕ್ಷಣೆ: ದಿಗುವಳಯದಲಿ ಧೂಮಕೇತುಗಳೊಗೆದವೆನಲುತ್ಪಾತ ಕೋಟಿ...

ಆಕಾಶ ವೀಕ್ಷಣೆ: ದಿಗುವಳಯದಲಿ ಧೂಮಕೇತುಗಳೊಗೆದವೆನಲುತ್ಪಾತ ಕೋಟಿ…

ಜಮಿನಾಯ್ಡ್ಸ್ ಈ ತಿಂಗಳ 20ರವರೆಗೂ ಪ್ರತಿರಾತ್ರಿ ಕಾಣಿಸುತ್ತಿದ್ದರೂ, ಹೆಚ್ಚು ತೀವ್ರವಾಗುವುದು ಡಿಸೆಂಬರ್ 13 ಮತ್ತು 14ರ ರಾತ್ರಿಯಂದು. ಅದರಲ್ಲೂ, ಬೆಳಗಿನ ಜಾವದ 2 ಗಂಟೆಯ ಆಸುಪಾಸಿಗೆ.

- Advertisement -
- Advertisement -

(ಆಕಾಶ ವೀಕ್ಷಣೆ: ಡಿಸೆಂಬರ್ 09-16)

ಸೈಕ್ಲೋನ್ ಇಲ್ಲದ ಸಮಯದಲ್ಲಿ ಆಕಾಶ ಸ್ಪಷ್ಟವಾಗಿ ಕಾಣುತ್ತದೆ ಎಂಬುದು ಡಿಸೆಂಬರ್ ತಿಂಗಳು ಆಕಾಶ ವೀಕ್ಷಣೆಗೆ ಪ್ರಶಸ್ತ ಕಾಲ ಎಂಬುದು ಒಂದು ಕಾರಣವಾದರೆ, ಈ ತಿಂಗಳ ರಾತ್ರಿಯ ಆಕಾಶದಲ್ಲಿ ವರ್ಷದ ಹೆಚ್ಚು ಪ್ರಕಾಶಮಾನವಾದ ಉಲ್ಕಾಪಾತವನ್ನು (Meteor Shower) ಕಣ್ತುಂಬಿಕೊಳ್ಳುವ ಸದವಕಾಶವಿರುವುದು ಮತ್ತೊಂದು ಕಾರಣ. ಈ ಉಲ್ಕಾಪಾತವನ್ನು ನೋಡುವುದಕ್ಕೆ ಯಾವ ಉಪಕರಣವು ಬೇಡ, ಬರಿಗಣ್ಣಿನಿಂದಲೇ ನೋಡಬಹುದು. ಆಕಾಶ ವೀಕ್ಷಣೆಯಲ್ಲಿ ಉಲ್ಕಾಪಾತದ ವೀಕ್ಷಣೆಯು ಬಹಳ ಉಲ್ಲಾಸದ ಮತ್ತು ಎಲ್ಲರೂ ಒಟ್ಟುಗೂಡಿ ನೋಡುವ ಒಂದು ವಿದ್ಯಮಾನ.

ಉಲ್ಕೆಗಳು, ಉಲ್ಕಾಪಾತ ಎಂದರೇನು?

ಸೂರ್ಯನ ಸುತ್ತ ಗ್ರಹಗಳು ಹೇಗೆ ಸುತ್ತುತ್ತಿವೆಯೋ, ಹಾಗೆಯೇ ಅನೇಕ ಧೂಮಕೇತುಗಳು ಮತ್ತು ಗಾತ್ರದಲ್ಲಿ ಚಿಕ್ಕದಾಗಿರುವ ಆಕಾಶಕಾಯಗಳು ಕೂಡ ಸುತ್ತುತ್ತಿವೆ. ಇವುಗಳಲ್ಲಿ ಧೂಮಕೇತುಗಳು ವಿಶೇಷವಾದವು. ಧೂಮಕೇತುಗಳು ದೀರ್ಘ ಅಂಡಾಕಾರದ ವೃತ್ತದಲ್ಲಿ, ಸೌರಮಂಡಲದ ಹೊರಭಾಗದಿಂದ ಸೂರ್ಯನ ಬಳಿ ಬಂದುಹೋಗುತ್ತವೆ. ಹೀಗೆ ಧೂಮಕೇತುಗಳು ಸೂರ್ಯನ ಬಳಿ ಬಂದಾಗ, ಸೂರ್ಯನ ಶಾಖದಿಂದ ಅವುಗಳಲ್ಲಿ ಇರುವ ವಸ್ತುಗಳು ಆವಿಯಾಗಿ ಸೂರ್ಯ ಇರುವ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತವೆ. ಇದು, ಧೂಮಕೇತುವಿಗೆ ಬಾಲವಾಗುತ್ತದೆ. ಧೂಮಕೇತು ಹೆಚ್ಚು ಹೆಚ್ಚು ಸೂರ್ಯನ ಹತ್ತಿರ ಸಮೀಪಿಸಿದಂತೆ, ಅದರ ಬಾಲವು ದೊಡ್ಡದಾಗುತ್ತಾ ಹೋಗುತ್ತದೆ. ಭೂಮಿಯಿಂದ ಆಕಾಶದಲ್ಲಿ ಈ ಬಾಲಾಂಕೃತ ಅತಿಥಿಗಳನ್ನು ಬರಿಗಣ್ಣಿನಿಂದ ಕಾಣಬಹುದಾಗಿರುತ್ತದೆ. ಹೀಗೆ ಸೂರ್ಯನ ಬಳಿ ಬಂದು ಹೋದ ಧೂಮಕೇತುಗಳು, ಅದರ ಕಕ್ಷೆಯಲ್ಲಿ ಚಿಕ್ಕಚಿಕ್ಕ ಶಿಲೆಗಳನ್ನು (ಹೆಚ್ಚಾಗಿ ಧೂಮಕೇತುವಿನ ಧೂಳಿನ ಕಣಗಳು, icy bodies, ಕ್ಷುದ್ರ ಗ್ರಹಗಳ ಸಣ್ಣಸಣ್ಣ ಕಲ್ಲು) ಚದುರಿಸಿ ಹೋಗಿರುತ್ತವೆ. ಇವನ್ನು ಉಲ್ಕೆಗಳು(Metor) ಎಂದು ಕರೆಯುತ್ತೇವೆ.

ಭೂಮಿಯು ಸೂರ್ಯನ ಸುತ್ತ ಸುತ್ತುವ ಪಥದಲ್ಲಿ ಇಂತಹ ಚದುರಿದ ಉಲ್ಕೆಗಳಿರುವ ಪ್ರದೇಶದ ಮೋಡದೊಳಗೆ ಹಾದುಹೋದಾಗ, ಈ ಉಲ್ಕೆಗಳು ಭೂಮಿಯ ವಾತಾವರಣಕ್ಕೆ ಪ್ರವೇಶಿಸಿ, ವಾತಾವರಣದ ಘರ್ಷಣೆಯ ಕಾರಣದಿಂದ ಉರಿದು ಬೂದಿಯಾಗುತ್ತವೆ. ಈ ಪ್ರಕ್ರಿಯೆ, ಭೂಮಿಯ ಆಕಾಶದಲ್ಲಿ, ನಕ್ಷತ್ರವು ಕೆಳಗೆ ಬಿದ್ದಿತೇನೋ ಎಂಬಂತೆ, ಮಿಂಚಿನ ಒಂದು ಸಣ್ಣ ಬೆಂಕಿಯಗೆರೆಯಂತೆ ಗೋಚರಿಸುತ್ತದೆ. ಇಂತಹ ಹಲವು ಬೆಂಕಿಯ ಗೆರೆಗಳು ಆಕಾಶದಲ್ಲಿ ಗೋಚರಿಸಿದರೆ ಅದನ್ನು ಉಲ್ಕಾಪಾತ (Metor Shower) ಎಂದು ಕರೆಯುತ್ತೇವೆ. ಇಂಗ್ಲಿಷ್‌ನಲ್ಲಿ ಶೂಟಿಂಗ್ ಸ್ಟಾರ್ ಎಂದೂ ಹೆಸರಿದೆ. ಆದರೆ, ನಕ್ಷತ್ರಗಳಿಗೂ ಇವಕ್ಕೂ ಯಾವುದೇ ಸಂಬಂಧವಿಲ್ಲ.

ಉಲ್ಕಾಪಾತವನ್ನು ಹೇಗೆ ನೋಡುವುದು?

ಆಕಾಶ ವೀಕ್ಷಕರಿಗೆ ಉಲ್ಕಾಪಾತ ನೋಡುವುದು ಒಂದು ವಿಶೇಷ ಅನುಭವ. ಉಲ್ಕಾಪಾತ ನೋಡಲು ಯಾವ ಉಪಕರಣದ (ಟೆಲಿಸ್ಕೋಪ್, ಬೈನಾಕ್ಯೂಲರ್) ಅಗತ್ಯವು ಇರುವುದಿಲ್ಲ. ಇದು ಬರಿಗಣ್ಣಿನಲ್ಲಿ ನೋಡಬಹುದಾದ ವಿದ್ಯಮಾನ. ನಗರ ಪ್ರದೇಶದಲ್ಲಿದ್ದರೆ, ಕಟ್ಟಡದ ತಾರಸಿಯ ಮೇಲೋ ಅಥವಾ ಯಾವುದೇ ಅಡೆತಡೆಯಿಲ್ಲದೆ ಆಕಾಶ ಕಾಣುವ ಜಾಗದಲ್ಲಿ ಆಕಾಶಕ್ಕೆ ಮುಖ ಮಾಡಿ ಮಲಗಿ ನೋಡುತ್ತಿದ್ದರೆ, ಉಲ್ಕಾಪಾತವನ್ನು ಸವಿಯಬಹುದು ಮತ್ತು ಎಷ್ಟು ಬೆಂಕಿಯ ಗೆರೆಗಳನ್ನು ನೋಡಿದಿರಿ ಎಂದು ಎಣಿಸಲೂಬಹುದು. ಉಲ್ಕಾಪಾತ ರಾತ್ರಿ ಪೂರ್ತಿ ಕಾಣುವ ವಿದ್ಯಮಾನ. ಅಲ್ಲದೆ, ಉಲ್ಕಾಪಾತವನ್ನು ಅಳೆಯಲು ಒಂದು ಮಾಪನವಿದೆ. ಇದೇನೆಂದರೆ, ಒಂದು ಗಂಟೆಗೆ ಸರಿಸುಮಾರು ಎಷ್ಟು ಉಲ್ಕೆಗಳು ಬೀಳುವುದನ್ನು ನೋಡಬಹುದಾಗಿದೆ ಎಂಬುದು. ಕೆಲವು ಉಲ್ಕಾಪಾತದಲ್ಲಿ ಈ ಸಂಖ್ಯೆ ಬಹಳ ಕಡಿಮೆ ಇರುತ್ತದೆ- 10ರಿಂದ 20. 100ರಿಂದ 150 ಇದ್ದರೆ, ಅದು ಪ್ರಕಾಶಮಾನವಾದ ಉಲ್ಕಾಪಾತ. ರಾತ್ರಿಯ ಆಕಾಶದಲ್ಲಿ ಉಲ್ಕಾಪಾತವನ್ನು ನೋಡುವ ಅವಕಾಶ ಹೆಚ್ಚಿರುತ್ತದೆ. ಪ್ರತಿ ವರ್ಷ ಡಿಸೆಂಬರ್‌ನಲ್ಲಿ ಸಂಭವಿಸುವಂತಾದ್ದು ಅಂತಹದ್ದೇ ಪ್ರಕಾಶಮಾನವಾದ ಉಲ್ಕಾಪಾತ, ಗಂಟೆಗೆ 100ರಿಂದ 150 ಉಲ್ಕೆಗಳನ್ನು ನೋಡಬಹುದು!

ಉಲ್ಕಾಪಾತಕ್ಕೆ ಹೆಸರುಗಳಿವೆಯೇ?

ಭೂಮಿಯು, ಸೂರ್ಯನ ಸುತ್ತ ಸುತ್ತುವ ಕಕ್ಷೆಯಲ್ಲಿ, ಧೂಮಕೇತುಗಳು ಬಿಟ್ಟುಹೋದ ಹಲವು ಚದರಿದ ಮೋಡವಿರುವ ಪ್ರದೇಶದ ಮೂಲಕ ಹಾದುಹೋಗುತ್ತದೆ. ವರ್ಷಕ್ಕೆ ಸರಿಸುಮಾರು ಆರರಿಂದ ಏಳು ಉಲ್ಕಾಪಾತಗಳನ್ನು ನೋಡಬಹುದು. ಈ ಉಲ್ಕಾಪಾತಗಳ ವಿಶೇಷವೆಂದರೆ, ಉಲ್ಕಾಪಾತದ ಸಂದರ್ಭದಲ್ಲಿ ಕಾಣುವ ಬೆಂಕಿಗೆರೆಗಳ ಬಾಲವನ್ನು ಕಲ್ಪಿಸಿಕೊಂಡು, ಹಿಮ್ಮುಖವಾಗಿ ಚಲಿಸಿಕೊಂಡು ಅವು ಎಲ್ಲಿಂದ ಬರುತ್ತಿವೆಯೆಂದು ಗಮನಿಸಿದರೆ, ಪ್ರತಿಯೊಂದು ಬೆಂಕಿಗೆರೆಯು ಒಂದೇ ಪ್ರದೇಶದಿಂದ ಪ್ರಾರಂಭಿಸುತ್ತಿರುವಂತೆ ಕಾಣುತ್ತದೆ. ಈ ಪ್ರದೇಶ ಯಾವ ನಕ್ಷತ್ರಪುಂಜದಲ್ಲಿದೆಯೋ ಆ ನಕ್ಷತ್ರ ಪುಂಜದ ಹೆಸರನ್ನೆ ಉಲ್ಕಾಪಾತಕ್ಕೆ ಹೆಸರಿಸಲಾಗಿದೆ. ಉದಾಹರಣೆಗೆ, ನಾವು ಒರಿಯಾನ್ ನಕ್ಷತ್ರಪುಂಜವನ್ನು ಗುರುತಿಸುವುದನ್ನು ಈಗಾಗಲೇ ತಿಳಿದಿದ್ದೇವೆ. ಉಲ್ಕಾಪಾತದ ಬೆಂಕಿಯ ಗೆರೆಗಳ ಬಾಲಗಳನ್ನು ಹಿಮ್ಮುಖವಾಗಿ ಚಲಿಸಿದಾಗ, ಎಲ್ಲಾ ಬೆಂಕಿಯ ಗೆರೆಗಳು ಒರಿಯಾನ್ ನಕ್ಷತ್ರಪುಂಜದಿಂದ ಪ್ರಾರಂಭಿಸಿದಂತೆ ಗೋಚರಿಸಿದರೆ, ಅದನ್ನು ಒರಿಯಾನೈಡ್ ಉಲ್ಕಾಪಾತ ಎಂದು ಕರೆಯುತ್ತಾರೆ. ಪ್ರಸ್ತುತ ಡಿಸೆಂಬರ್‌ನ ಉಲ್ಕಾಪಾತದ ಹೆಸರು, ಜಮಿನಾಯ್ಡ್ಸ್ ಎಂದು ಕರೆಯುತ್ತಾರೆ. ಅಂದರೆ, ಈ ತಿಂಗಳ ಆಗಸದಲ್ಲಿ ಕಾಣುವ ಎಲ್ಲಾ ಉಲ್ಕೆಗಳ ಬೆಂಕಿಗೆರೆಯ ಬಾಲಗಳು ಜಮಿನಿ ನಕ್ಷತ್ರಪುಂಜದಿಂದ ಪ್ರಾರಂಭವಾಗುವಂತೆ ಗೋಚರಿಸುತ್ತವೆ. ಅಲ್ಲದೆ ಈ ಜಮಿನಾಯ್ಡ್ಸ್ ಉಂಟಾಗಲು ಕಾರಣ ಫ್ಯಾತನ್ 3200 ಎಂಬ ಕ್ಷುದ್ರಗ್ರಹ ಎಂದು ಕೂಡ ತಿಳಿಯಲಾಗಿದೆ.

ಡಿಸೆಂಬಂರ್ ತಿಂಗಳ ಜಮಿನಾಯ್ಡ್ಸ್ ವಿಶೇಷ

ಜಮಿನಾಯ್ಡ್ಸ್‌ಉಲ್ಕಾಪಾತ | ಚಿತ್ರ ಕೃಪೆ: ಜೆಫ್‌ಡೈ/ ಅರಿಜ಼ೋನಾ ಸ್ಟೇಟ್‌ಯುನಿವರ್ಸಿಟಿ

ವರ್ಷದಲ್ಲಿ ಕಾಣುವ ಉಳಿದೆಲ್ಲಾ ಉಲ್ಕಾಪಾತುಗಳಿಗೆ ಹೋಲಿಸಿದರೆ, ಜಮಿನಾಯ್ಡ್ಸ್ ಅತ್ಯಂತ ಪ್ರಕಾಶಮಾನವಾದದು ಮತ್ತು ಗಂಟೆಗೆ 100ರಿಂದ 150 ಬೆಂಕಿಯ ಗೆರೆಗಳನ್ನು ನೋಡುವ ಅವಕಾಶವಿರುತ್ತದೆ. ಜಮಿನಾಯ್ಡ್ಸ್ ಈ ತಿಂಗಳ 20ರವರೆಗೂ ಪ್ರತಿರಾತ್ರಿ ಕಾಣಿಸುತ್ತಿದ್ದರೂ, ಹೆಚ್ಚು ತೀವ್ರವಾಗುವುದು ಡಿಸೆಂಬರ್ 13 ಮತ್ತು 14ರ ರಾತ್ರಿಯಂದು. ಅದರಲ್ಲೂ, ಬೆಳಗಿನ ಜಾವದ 2 ಗಂಟೆಯ ಆಸುಪಾಸಿಗೆ. ಡಿಸೆಂಬರ್ 14ರಂದು ಅಮಾವಾಸ್ಯೆಯೂ ಇರುವುದರಿಂದ, ಚಂದ್ರನಿಲ್ಲದ ರಾತ್ರಿಯಲ್ಲಿ, ಈ ಉಲ್ಕಾಪಾತ ಹೆಚ್ಚು ಪ್ರಕಾಶಮಾನವಾಗಿ ಕಾಣುತ್ತದೆ. ಉಲ್ಕಾಪಾತವನ್ನು, ಬರಿಗಣ್ಣಿನಲ್ಲಿ ನೋಡುವ ಜೊತೆಗೆ, ಕ್ಯಾಮರಾದಲ್ಲೂ ಸೆರೆಹಿಡಿಯಬಹುದು. ನಿಮ್ಮ ಬಳಿ ಹೆಚ್ಚು ಎಕ್ಸ್‌ಪೋಶರ್ ಸೆಟ್ಟಿಂಗ್ ಬದಲಿಸುವ ಕ್ಯಾಮರಾ ಇದ್ದರೆ, ಆಗಸದ ದಿಕ್ಕಿಗೆ ವೈಡ್‌ಅಂಗಲ್‌ನಲ್ಲಿ ಇಟ್ಟು ರೆಕಾರ್ಡ್ ಮಾಡಿ. ಉಲ್ಕಾಪಾತವನ್ನು ನೋಡುವಾಗ ರಾತ್ರಿಯ ಚಳಿಗೆ ರಕ್ಷಣೆ ಪಡೆಯಲು ಮರೆಯದಿರಿ.

ಈ ವರ್ಷದ ಕೊನೆಯ ಗ್ರಹಣ: ಸಂಪೂರ್ಣ ಸೂರ್ಯಗ್ರಹಣ

ಡಿಸೆಂಬರ್ 14ರಂದು ಸಂಪೂರ್ಣ ಸೂರ್ಯಗ್ರಹಣವಿದ್ದು, ಇದು ಈ ವರ್ಷದ ಕೊನೆಯ ಗ್ರಹಣವಾಗಿದೆ. ಈ ಗ್ರಹಣವನ್ನು ದಕ್ಷಿಣ ಅಮೆರಿಕ, ಚಿಲಿ, ಅರ್ಜೆಂಟೀನಾ ಮತ್ತು ಆಫ್ರಿಕಾದ ಕೆಲವು ಭಾಗಗಳಲ್ಲಿ ಕಾಣಬಹುದು. ಈ ಗ್ರಹಣವನ್ನು ಭಾರತದ ಯಾವ ಭಾಗದಿಂದಲೂ ನೋಡಲು ಸಾಧ್ಯವಿರುವುದಿಲ್ಲ. ಸಂಪೂರ್ಣ ಸೂರ್ಯಗ್ರಹಣದ ಸಂದರ್ಭದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆಮಾಚಿರುತ್ತಾನೆ. ನಿರ್ದಿಷ್ಟ ಸ್ಥಳಗಳಲ್ಲಿ, ಸೂರ್ಯ ಕೆಲವು ಸಮಯಗಳ ಕಾಲ (ನಿಮಿಷಗಳಲ್ಲಿ) ಆಗಸದಲ್ಲಿ ಕಾಣುವುದಿಲ್ಲ. ಅಂದಹಾಗೆ, ಏಕೆ ಸೂರ್ಯಗ್ರಹಣ ಅಮಾವಾಸ್ಯೆಯಂದೇ ಮತ್ತು ಚಂದ್ರಗ್ರಹಣ ಹುಣ್ಣಿಮೆಯಂದೇ ಘಟಿಸುತ್ತವೆ ಎನ್ನುವ ಪ್ರಶ್ನೆಯನ್ನು ಕೇಳಿಕೊಂಡು ಯೋಚಿಸಿ, ಮುಂದಿನ ದಿನಗಳಲ್ಲಿ ಇವನ್ನು ಚರ್ಚಿಸೋಣ.

  • ವಿಶ್ವ ಕೀರ್ತಿ ಎಸ್

ವಿಜ್ಞಾನ ಮತ್ತು ಖಗೋಳ ವಿಜ್ಞಾನದಲ್ಲಿ ಆಸಕ್ತಿ, ಹವ್ಯಾಸಿ ಆಕಾಶ ವೀಕ್ಷಣೆಗಾರ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಂಸ್ಥೆಯಲ್ಲಿ ವೈಜ್ಞಾನಿಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ರಿಗಲ್ ಮತ್ತು ಬೀಟಲ್ ಜ್ಯೂಸ್ ನಕ್ಷತ್ರಗಳನ್ನು ನೀವು ಕಾಣಿರಿ, ನೀವು ಕಾಣಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...