Homeಚಳವಳಿರೈತರಿಗೆ ಬೆಂಬಲ: '#WeUnitedForFarmers' ಟ್ರೆಂಡಿಂಗ್ - ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ...

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ದೆಹಲಿಯಲ್ಲಿ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೆ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಸಹ ಪಟ್ಟು ಬಿಡದ ರೈತರು ‘ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಟ್ವಿಟ್ಟರ್‌ನಲ್ಲಿ ಲಕ್ಷಾಂತರ ಜನ ಬೆಂಬಲ ನೀಡುತ್ತಿದ್ದು #WeUnitedForFarmers ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ರೈತರ ಈ ಪ್ರತಿಭಟನೆಗೆ ಇಡೀ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಚಿಂತಕರು, ವಿದ್ವಾಂಸರು, ವಿದ್ಯಾರ್ಥಿಗಳು, ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ರೈತರ ಪರ ನಿಂತಿದ್ದಾರೆ. ಇದರ ಭಾಗವಾಗಿಯೇ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #WeUnitedForFarmers ಎಂದು ಟ್ರೆಂಡಿಂಗ್ ಆಗುತ್ತಿದೆ.

 

ಈ ವರದಿ ಬರೆಯುವ ವೇಳೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಬಳಕೆದಾರರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ಜಶನ್ ಕೌರ್ ಎಂಬುವವರು ಟ್ವೀಟ್ ಮಾಡಿ, “ಭಾರತದಲ್ಲಿ ಈಗ ನಡೆಯುತ್ತಿರುವುದರ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ ಮತ್ತು ಸಮಾನ ಮಾನವ ಹಕ್ಕುಗಳನ್ನು ಬೆಂಬಲಿಸೋಣ. # WeUnitedForFarmers” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಜಶ್ವಂದರ್ ಪಾಲ್ ಸಿಂಗ್ ಎಂಬುವವರು “ಗೋಧಿ ಮಾಧ್ಯಮಗಳು ಈ ಟ್ರೆಂಡಿಂಗ್ ಅನ್ನು ಪ್ರಸಾರ ಮಾಡುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಸತ್ನಂ ಸೋಹಲ್ ಎಂಬುವವರು ಟ್ವೀಟ್ ಮಾಡಿ, “ಯಾರಾದರೂ ಧೈರ್ಯ ಎಂದರೆ ಏನು ಎಂದು ಕೇಳಿದರೆ, ಅವರಿಗೆ ಈ ದೃಶ್ಯವನ್ನು ತೋರಿಸಿ” ಎಂದು ಗಾಯಗೊಂಡಿರುವ ರೈತರೊಬ್ಬರ ಮಾತುಗಳಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ’ಬಿಜೆಪಿ ರೈತರ ಕಲ್ಯಾಣವನ್ನೇ ಯೋಚಿಸುತ್ತದೆ- ಪ್ರತಿಭಟನೆ ಬಗ್ಗೆ ನಟ ಸನ್ನಿ ಡಿಯೋಲ್ ಹೇಳಿಕೆ

ಕುಲ್ವಿಂದರ್ ಸೆಖೊನ್ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ನ್ಯೂಜಿಲ್ಯಾಂಡ್ ಸಂಸತ್ತಿನ ಮುಂದೆ ನಾವು ರೈತರನ್ನು ಬೆಂಬಲಿಸುತ್ತೇವೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿಯವರಿಗೆ ನಾಚಿಕೆಯಾಗಬೇಕು. ಗೋಧಿ ಮೀಡಿಯಾಗೆ ಧಿಕ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

ಹೀಗೆ ಲಕ್ಷಾಂತರ ಜನರು ರೈತರನ್ನು ಮತ್ತು ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಕೇಂದ್ರದ ಬಿಜೆಪಿ ಸರ್ಕಾರವು ದರ್ಪ ತೋರುತ್ತಲೇ ಇದೆ. ಜೊತೆಗೆ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತದೆ.

ಅಲ್ಲದೇ ಕೃಷಿ ಕಾಯ್ದೆಗಳ ಬಗ್ಗೆ ಅರಿವು ಮೂಡಸಲೆಂದು 700 ಜಿಲ್ಲೆಗಳಲ್ಲಿ 100 ಪ್ರತಿಕಾಗೋಷ್ಠಿಗಳು ಮತ್ತು 700 ರೈತ ಸಭೆಗಳನ್ನು ಆಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿವಾದಾತ್ಮಕ ಕಾನೂನುಗಳ ಕುರಿತು ಜನರಲ್ಲಿನ ಆತಂಕ ಮತ್ತು ಕಳವಳಗಳನ್ನು ದೂರ ಮಾಡುಲು ಇದನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಆದರೆ ರೈತರು ಇದಾವುದಕ್ಕೂ ಸೊಪ್ಪು ಹಾಕದೇ ತಮ್ಮ ಗುರಿಯನ್ನು ಮುಟ್ಟಿಯೇ ತೀರುತ್ತೇವೆ ಎಂದು ಬೀದಿಗಿಳಿದಿದ್ದಾರೆ.

ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತಕತೆ ಮತ್ತು ಸಂಧಾನ ಸಭೆಗಳನ್ನು ನಡೆಸಿದರೂ ಸಹ ಅವುಗಳೆಲ್ಲಾ ವಿಫಲಾಗಿವೆ.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇತ್ತೀಚೆಗೆ ಅಮಿತ್ ಶಾ ರೈತ ಮುಖಂಡರನ್ನು ಮಾತುಕತೆಗೆ ಕರೆದು, ಕಾನೂನುಗಳಲ್ಲಿ ಕೆಲವು ತಿದ್ದುಪಡಿಗಳನ್ನು ತರುವುದಾಗಿ ಪ್ರಸ್ತಾವವನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ಇದನ್ನೂ ಒಪ್ಪಿರಲಿಲ್ಲ.

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸೀಮಗ್ ತೋಮರ್, “ನಮ್ಮ ಲಿಖಿತ ಪ್ರಸ್ತಾವಕ್ಕೆ ರೈತ ಸಂಘಟನೆಗಳು ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ. ಆದರೆ ಈಗಾಗಲೇ ರೈತರು ಕೇಂದ್ರ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...