Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...