Homeಸಿನಿಮಾಕ್ರೀಡೆಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಇಂದಿನ ಟೆಸ್ಟ್ ಅಭ್ಯಾಸ ಪಂದ್ಯದಲ್ಲಿ ಕ್ರೀಡಾಸ್ಪೂರ್ತಿ ಮೆರದು ಜನರ ಹೃದಯಗೆದ್ದ ಮೊಹಮ್ಮದ್ ಸಿರಾಜ್

ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ

- Advertisement -
- Advertisement -

ಅಕ್ಟೋಬರ್ 21 ರಂದು ನಡೆದ ಕೋಲ್ಕತ್ತಾ ನೈಟ್‌ ರೈಡರ್ಸ್ ಮತ್ತು‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ದೇಶದ ಗಮನಸೆಳೆದಿದ್ದರು. ಬೆಂಗಳೂರು ಪರ ಬೌಲ್ ಮಾಡಿದ ಅವರು 4 ಓವರ್‌ಗಳಲ್ಲಿ ಕೇವಲ 8 ರನ್ ನೀಡಿ 2 ಮೇಡನ್ ಮತ್ತು 3 ವಿಕೆಟ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಅದೇ ಮೊಹಮ್ಮದ್ ಸಿರಾಜ್ ಇಂದು ಮತ್ತೊಮ್ಮೆ ಕ್ರೀಡಾಭಿಮಾನಿಗಳ ಹೃದಯಗೆದಿದ್ದಾರೆ. ಆದರೆ ಈ ಬಾರಿ ಬೌಲ್ ಮಾಡಿ ಅಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಮಾನವೀಯತೆ ಪ್ರದರ್ಶಿಸುವ ಮೂಲಕ.

ಇಂದು ಭಾರತ ಆಸ್ಟ್ರೇಲಿಯಾ ಎ ನಡುವಿನ ಎರಡನೇ ಟೆಸ್ಟ್ ಅಭ್ಯಾಸ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 44 ಓವರ್‌ಗಳಲ್ಲಿ 165 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಕೊನೆಗೆ ಜಸ್ಪ್ರಿತ್ ಬೂಮ್ರ ಮತ್ತು ಮೊಹಮ್ಮದ್ ಸಿರಾಜ್ ಕ್ರೀಸ್‌ನಲ್ಲಿದ್ದರು. ಆಗ 44 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಕ್ರೀಸ್‌ನಲ್ಲಿದ್ದ ಬೂಮ್ರ ತನ್ನತ್ತ ಬಂದ್ ಬೌಲ್‌ಗೆ ನೇರವಾಗಿ ಬಾರಿಸಿದಾಗ ಅದು ಸೀದಾ ಬೌಲರ್ ಕ್ಯಾಮರೂನ್ ಗ್ರೀನ್ ತಲೆಗೆ ಬಡಿಯಿತು. ಕ್ರೀಸ್‌ನ ಇನ್ನೊಂದು ಬದಿಯಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಷಣಮಾತ್ರದಲ್ಲಿ ಬ್ಯಾಟ್ ಕೈಬಿಟ್ಟು ಸೀದಾ ಕ್ಯಾಮರೂನ್ ಗ್ರೀನ್ ಬಳಿಗೆ ಓಡಿ ಅವರನ್ನು ಸಂತೈಸಿದರು. ಅವರಿಗೆ ಆ ಸಮಯದಲ್ಲಿ ತಾನು ರನೌಟ್‌ ಆಗಬಹುದು ಅಥವಾ ರನ್ ಗಳಿಸಬಹುದು ಎಂಬುದರ ಯಾವ ಪರಿವೆಯೂ ಅವರಿಗಿರಲಿಲ್ಲ. ಅವರಿಗಿದ್ದುದು ಬೌಲರ್ ಕ್ಯಾಮರೂನ್ ಗ್ರೀನ್‌ಗೆ ಏನೂ ಆಗಬಾರದೆಂಬ ಕಾಳಜಿಯಷ್ಟೆ.. ಆ ಕಾಳಜಿಗೆ ಕ್ರೀಡಾಭಿಮಾನಿಗಳು ಗೌರವದ ಮಳೆ ಸುರಿಸಿದ್ದಾರೆ.

ಈ ಘಟನೆ ನಡೆದ ತಕ್ಷಣ ಎಲ್ಲರೂ ಕ್ಯಾಮರೂನ್ ಗ್ರೀನ್ ಬಳಿ ಓಡಿದ್ದಾರೆ. ಅಂಪೈರ್ ಕೂಡ ತೆರಳಿ ಮೆಡಿಕಲ್ ಟೀಮ್‌ ಬರಲು ಸನ್ಹೆ ಮಾಡಿದರು. ಆದರೆ ಎಲ್ಲರಿಗಿಂತ ಮೊದಲು ತೆರಳಿದ್ದು ಮಾತ್ರ ನಾನ್‌ಸ್ಟ್ರೈಕರ್‌ ನಲ್ಲಿದ್ದ ಮೊಹಮ್ಮದ್ ಸಿರಾಜ್. ಆ ಕ್ಷಣಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿ.

“ಮೊಹಮ್ಮದ್ ಸಿರಾಜ್, ಸ್ವಾರ್ಥರಹಿತ ಕ್ರಿಕೆಟರ್ ಇಂದು ನನ್ನ ಹೃದಯ ಗೆದ್ದಿದ್ದಾರೆ. ಎಂಥ ಅದ್ಬುತ ಕ್ಷಣ” ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಜಸ್ಪ್ರಿತ್ ಬುಮ್ರಾ ಸ್ಟ್ರೈಟ್ ಡ್ರೈವ್‌ನಿಂದ ತಲೆಗೆ ಪೆಟ್ಟಾದ ಕ್ಯಾಮರೂನ್ ಗ್ರೀನ್‌ರನ್ನು ಪರೀಕ್ಷಿಸಲು ನಾನ್-ಸ್ಟ್ರೈಕರ್ ಬ್ಯಾಟ್ಸ್‌ಮನ್ ಮೊಹಮ್ಮದ್ ಸಿರಾಜ್ ಬೇಗನೆ ಧಾವಿಸಿದರು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಪೆಟ್ಟು ತಿಂದ ಕ್ಯಾಮರೂನ್ ಗ್ರೀನ್‌ರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡ್ರೆಸ್ಸಿಂಗ್ ರೂಂಗೆ ಕರೆದೊಯ್ಯಲಾಯಿತು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...